ಬ್ರೇಕಿಂಗ್ ನ್ಯೂಸ್
14-06-24 12:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ಮೂರು ವರ್ಷಗಳ ಹಿಂದೆ ಆರಂಭಗೊಂಡ ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಮುಂಚೂಣಿ ಸಾರ್ವಜನಿಕ ಹಣಕಾಸು ಸಂಸ್ಥೆಯಾಗಿದ್ದು, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ವಿಸ್ತರಣೆಗೊಳ್ಳುತ್ತಿದೆ.
ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ 2021ರ ಫೆಬ್ರವರಿ 19ರಂದು ನೋಂದಣಿಗೊಂಡಿದ್ದು ಮಂಗಳೂರಿನ ಪಿವಿಎಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಅಲ್ಲದೆ ಮಂಗಳೂರಿನ ಹಂಪನಕಟ್ಟೆ, ಮೂಡುಬಿದ್ರೆ, ಕಡಬ, ಅಸೈಗೋಳಿ, ಕಾರ್ಕಳ ಸೇರಿದಂತೆ ಆರು ಶಾಖೆಗಳನ್ನು ಹೊಂದಿದೆ. ಸಂಸ್ಥೆಯ ಶಾಖೆಗಳನ್ನು ಗುತ್ತಿಗಾರು, ಪುತ್ತೂರು ಹಾಗೂ ಸುಳ್ಯ ತಾಲೂಕಿನಲ್ಲೂ ಆರಂಭಿಸಿದ್ದು ಇದೇ ಜೂನ್ ತಿಂಗಳಲ್ಲಿ ಶುಭಾರಂಭಗೊಳ್ಳಲಿದೆ.

ಪ್ರಸಕ್ತ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಸ್ಥೆಯನ್ನು ಮತ್ತಷ್ಟು ವಿಸ್ತರಣೆ ಮಾಡುತ್ತಿದ್ದು ಉಡುಪಿ, ಕಾರ್ಕಳ, ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು, ಸುಳ್ಯ, ಪುತ್ತೂರು, ಉಡುಪಿ ಸೇರಿದಂತೆ ಒಟ್ಟು 25 ಶಾಖೆಗಳನ್ನು ತೆರೆಯುವ ಗುರಿ ಹೊಂದಿದೆ. ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಸಂಸ್ಥೆಯು ಠೇವಣಿ ಮೇಲೆ ಗರಿಷ್ಠ 12.50% ದಷ್ಟು ಬಡ್ಡಿ ದರ ನೀಡುತ್ತಿದ್ದು ಸಾಲದ ಮೇಲೆ 18.50% ಬಡ್ಡಿ ದರ ವಿಧಿಸುತ್ತದೆ. 2023-2024ನೇ ಸಾಲಿನಲ್ಲಿ 10 ಕೋಟಿ ರೂಪಾಯಿಗಳ ವ್ಯವಹಾರ ನಡೆಸಿದ್ದು ಪ್ರಸಕ್ತ 2024-2025 ಆರ್ಥಿಕ ಸಾಲಿನಲ್ಲಿ 30 ಕೋಟಿ ರೂಪಾಯಿ ವ್ಯವಹಾರ ನಡೆಸುವ ಗುರಿಯನ್ನು ಹೊಂದಿದೆ. ಸಂಸ್ಥೆಯಲ್ಲಿ 60ಕ್ಕೂ ಮಿಕ್ಕಿ ಉದ್ಯೋಗಿಗಳನ್ನು ಹೊಂದಿದೆ. ಬ್ಯಾಂಕೇತರ ಹಣಹಾಸು ಸೇವೆಯ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಸಂಸ್ಥೆ ಆರಂಭಿಸಲಾಗಿದ್ದು ಮಂಗಳೂರಿನಲ್ಲಿ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಗುಣಮಟ್ಟದ ಸೇವೆಯುಳ್ಳ ನೂತನ ಕಾರ್ಪೊರೇಟ್ ಕಚೇರಿಯನ್ನು 1.50 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಿದೆ.
ಇತ್ತೀಚೆಗೆ ದಕ್ಷಿಣ ಕನ್ನಡ ಮ್ಯುಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್ ಸಂಸ್ಥೆಯ ಕಡಬ ಶಾಖೆಯ ಕಚೇರಿ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ಕಡಬ ಶಾಖೆಯ ಶಾಖಾಧ್ಯಕ್ಷರಾಗಿ ಎಸ್. ಸತೀಶ್ ನಾಯಕ್, ಉಪಾಧ್ಯಕ್ಷರಾಗಿ ಕೆ. ಆಡಮ್, ಶಾಖಾ ಕಾರ್ಯದರ್ಶಿಯಾಗಿ ಕೃಷ್ಣಪ್ಪ ಮಡಿವಾಳ, ಶಾಖಾ ಖಜಾಂಚಿಯಾಗಿ ಕಿರಣ್ ಬಂಗೇರ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Dakshina Kannada Mutual Benefit Nidhi Limited expands across the coastal district; new branch at Kadaba. Nidhi Company advances from a root word which traditionally means “treasure”. Recently, in the Indian financial sector, a Nidhi Company refers to any mutual benefit society notified under the Central / Union Government as a Nidhi Company.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am