ಬ್ರೇಕಿಂಗ್ ನ್ಯೂಸ್
14-06-24 12:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ಮೂರು ವರ್ಷಗಳ ಹಿಂದೆ ಆರಂಭಗೊಂಡ ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಮುಂಚೂಣಿ ಸಾರ್ವಜನಿಕ ಹಣಕಾಸು ಸಂಸ್ಥೆಯಾಗಿದ್ದು, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ವಿಸ್ತರಣೆಗೊಳ್ಳುತ್ತಿದೆ.
ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ 2021ರ ಫೆಬ್ರವರಿ 19ರಂದು ನೋಂದಣಿಗೊಂಡಿದ್ದು ಮಂಗಳೂರಿನ ಪಿವಿಎಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಅಲ್ಲದೆ ಮಂಗಳೂರಿನ ಹಂಪನಕಟ್ಟೆ, ಮೂಡುಬಿದ್ರೆ, ಕಡಬ, ಅಸೈಗೋಳಿ, ಕಾರ್ಕಳ ಸೇರಿದಂತೆ ಆರು ಶಾಖೆಗಳನ್ನು ಹೊಂದಿದೆ. ಸಂಸ್ಥೆಯ ಶಾಖೆಗಳನ್ನು ಗುತ್ತಿಗಾರು, ಪುತ್ತೂರು ಹಾಗೂ ಸುಳ್ಯ ತಾಲೂಕಿನಲ್ಲೂ ಆರಂಭಿಸಿದ್ದು ಇದೇ ಜೂನ್ ತಿಂಗಳಲ್ಲಿ ಶುಭಾರಂಭಗೊಳ್ಳಲಿದೆ.
ಪ್ರಸಕ್ತ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಸ್ಥೆಯನ್ನು ಮತ್ತಷ್ಟು ವಿಸ್ತರಣೆ ಮಾಡುತ್ತಿದ್ದು ಉಡುಪಿ, ಕಾರ್ಕಳ, ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು, ಸುಳ್ಯ, ಪುತ್ತೂರು, ಉಡುಪಿ ಸೇರಿದಂತೆ ಒಟ್ಟು 25 ಶಾಖೆಗಳನ್ನು ತೆರೆಯುವ ಗುರಿ ಹೊಂದಿದೆ. ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಸಂಸ್ಥೆಯು ಠೇವಣಿ ಮೇಲೆ ಗರಿಷ್ಠ 12.50% ದಷ್ಟು ಬಡ್ಡಿ ದರ ನೀಡುತ್ತಿದ್ದು ಸಾಲದ ಮೇಲೆ 18.50% ಬಡ್ಡಿ ದರ ವಿಧಿಸುತ್ತದೆ. 2023-2024ನೇ ಸಾಲಿನಲ್ಲಿ 10 ಕೋಟಿ ರೂಪಾಯಿಗಳ ವ್ಯವಹಾರ ನಡೆಸಿದ್ದು ಪ್ರಸಕ್ತ 2024-2025 ಆರ್ಥಿಕ ಸಾಲಿನಲ್ಲಿ 30 ಕೋಟಿ ರೂಪಾಯಿ ವ್ಯವಹಾರ ನಡೆಸುವ ಗುರಿಯನ್ನು ಹೊಂದಿದೆ. ಸಂಸ್ಥೆಯಲ್ಲಿ 60ಕ್ಕೂ ಮಿಕ್ಕಿ ಉದ್ಯೋಗಿಗಳನ್ನು ಹೊಂದಿದೆ. ಬ್ಯಾಂಕೇತರ ಹಣಹಾಸು ಸೇವೆಯ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಸಂಸ್ಥೆ ಆರಂಭಿಸಲಾಗಿದ್ದು ಮಂಗಳೂರಿನಲ್ಲಿ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಗುಣಮಟ್ಟದ ಸೇವೆಯುಳ್ಳ ನೂತನ ಕಾರ್ಪೊರೇಟ್ ಕಚೇರಿಯನ್ನು 1.50 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಿದೆ.
ಇತ್ತೀಚೆಗೆ ದಕ್ಷಿಣ ಕನ್ನಡ ಮ್ಯುಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್ ಸಂಸ್ಥೆಯ ಕಡಬ ಶಾಖೆಯ ಕಚೇರಿ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ಕಡಬ ಶಾಖೆಯ ಶಾಖಾಧ್ಯಕ್ಷರಾಗಿ ಎಸ್. ಸತೀಶ್ ನಾಯಕ್, ಉಪಾಧ್ಯಕ್ಷರಾಗಿ ಕೆ. ಆಡಮ್, ಶಾಖಾ ಕಾರ್ಯದರ್ಶಿಯಾಗಿ ಕೃಷ್ಣಪ್ಪ ಮಡಿವಾಳ, ಶಾಖಾ ಖಜಾಂಚಿಯಾಗಿ ಕಿರಣ್ ಬಂಗೇರ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Dakshina Kannada Mutual Benefit Nidhi Limited expands across the coastal district; new branch at Kadaba. Nidhi Company advances from a root word which traditionally means “treasure”. Recently, in the Indian financial sector, a Nidhi Company refers to any mutual benefit society notified under the Central / Union Government as a Nidhi Company.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm