ಬ್ರೇಕಿಂಗ್ ನ್ಯೂಸ್
24-06-24 06:56 pm Mangalore Correspondent ಕರಾವಳಿ
ಮಂಗಳೂರು, ಜೂನ್.24: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಲ್ಲದೆ, ಕೊನೆಯಲ್ಲಿ ತುಳು ಭಾಷೆಯಲ್ಲಿ ಧನ್ಯವಾದ ಹೇಳಿ ಗಮನ ಸೆಳೆದಿದ್ದಾರೆ.
ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರು ಸೋಮವಾರ ಸಂಸತ್ತಿನ ಅಧಿವೇಶನ ಆರಂಭವಾಗುತ್ತಲೇ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ದಕ್ಷಿಣ ಕನ್ನಡ ಕ್ಷೇತ್ರದ ಸರದಿ ಬಂದಾಗ, ಬ್ರಿಜೇಶ್ ಚೌಟ ತುಳುನಾಡಿನ ಶೈಲಿಯ ವೇಷ ಭೂಷಣದಲ್ಲಿ ಗಮನ ಸೆಳೆದರು. ಬಿಳಿ ಅಂಗಿ ಮತ್ತು ಬಿಳಿ ಲುಂಗಿಯನ್ನು ಧರಿಸಿದ್ದ ಬ್ರಿಜೇಶ್ ಚೌಟ ಅದರ ಮೇಲೊಂದು ಹಿಂದುತ್ವ ಮತ್ತು ಬಿಜೆಪಿಯನ್ನು ಸೂಚಿಸುವ ಕೇಸರಿ ಶಾಲನ್ನು ಹಾಕ್ಕೊಂಡಿದ್ದರು.


ಇಂಗ್ಲಿಷ್, ಹಿಂದಿ ಭಾಷೆಯಲ್ಲಿ ನಿರರ್ಗಳ ಮಾತನಾಡಬಲ್ಲವರಾದರೂ ಬ್ರಿಜೇಶ್ ಚೌಟ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕರ್ನಾಟಕದ ಪ್ರತಿನಿಧಿಯೆಂದು ಸಾರಿದ್ದಾರೆ. ಇದರ ಜೊತೆಗೆ, ಕೊನೆಯಲ್ಲಿ ‘’ಮಾತೆರೆಗ್ಲ ಸೊಲ್ಮೆಲು’’ (ಎಲ್ಲರಿಗೂ ಧನ್ಯವಾದಗಳು) ಎನ್ನುವ ಮೂಲಕ ತನ್ನ ತುಳು ಭಾಷಾ ಪ್ರೇಮವನ್ನೂ ತೋರಿದ್ದಾರೆ. ಅಲ್ಲದೆ, ಪ್ರಮುಖವಾಗಿ ತುಳುನಾಡಿನ ದೈವ – ದೈವರ ಹೆಸರು ಉಲ್ಲೇಖಿಸಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ತುಳುನಾಡಿನಲ್ಲಿ ದೈವಾರಾಧನೆಗೆ ವಿಶೇಷ ಮಹತ್ವವಿದ್ದು, ದೈವದ ಹೆಸರಿನಲ್ಲಿ ಪ್ರಮಾಣ ಮಾಡುವುದಕ್ಕೂ ಹೆಚ್ಚಿನ ಮನ್ನಣೆಯಿದೆ. ತುಳುವರ ವಿಶಿಷ್ಟ ಸಂಸ್ಕೃತಿಯನ್ನು ಪ್ರತಿನಿಧಿಸುವ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂಬ ಹಕ್ಕೊತ್ತಾಯ ಇರುವಂತೆಯೇ ಮೊದಲ ಬಾರಿಗೆ ತುಳು ಭಾಷೆಯ ನುಡಿ ಮುತ್ತೊಂದನ್ನು ಸಂಸದ ಬ್ರಿಜೇಶ್ ಸಂಸತ್ತಿನಲ್ಲಿ ಮೊಳಗಿಸಿದ್ದಾರೆ. ಬ್ರಿಜೇಶ್ ಚೌಟರ ಪ್ರಮಾಣ ವಚನದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
“ನಾನು ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ದೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದೂ, ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದೂ ಮತ್ತು ನಾನು ಈಗ ವಹಿಸಿಕೊಳ್ಳಲಿರುವ ಕರ್ತವ್ಯವನ್ನು… pic.twitter.com/cpKuuuvOvs
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) June 24, 2024
Mangalore Brijesh Chowta takes oath as MP of Dakshina Kannada in the name of Daiva in Tulu language
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm