ಬ್ರೇಕಿಂಗ್ ನ್ಯೂಸ್
24-06-24 11:12 pm Mangalore Correspondent ಕರಾವಳಿ
ಮಂಗಳೂರು, ಜೂನ್ 24: ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪಾಲಿಕೆ ಚುನಾವಣೆಗಳಲ್ಲಿ ಜೆಡಿಎಸ್ ಜೊತೆ ಸೀಟು ಹೊಂದಾಣಿಕೆ ಇರಲಿದೆ. ಕುಮಾರಸ್ವಾಮಿಯವರು ಕೂಡ ಒಟ್ಟಾಗಿ ಕೆಲಸ ಮಾಡುವ ಅಭಿಪ್ರಾಯ ಹೊಂದಿದ್ದಾರೆ. ನಾವು ಎಲ್ಲ ಸ್ತರದಲ್ಲೂ ಮೈತ್ರಿ ಮಾಡಲಿದ್ದೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿಯಿತ್ತು ನಾಣ್ಯಗಳ ತುಲಾಭಾರ ನೆರವೇರಿಸಿದ ಬಳಿಕ ಯಡಿಯೂರಪ್ಪ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ ಜಂಜಾಟದ ಮಧ್ಯೆ ಧರ್ಮಸ್ಥಳ, ಸುಬ್ರಹ್ಮಣ್ಯ ಬಾರದೇ ತುಂಬಾ ದಿವಸ ಆಗಿತ್ತು. ದೇವರ ದರ್ಶನದ ಬಳಿಕ ನೆಮ್ಮದಿ, ಸಮಾಧಾನ ಮತ್ತು ತೃಪ್ತಿ ಇದೆ. ಈಗಿನ ಸರ್ಕಾರ ಜನಹಿತವನ್ನ ಮರೆತು ಅಭಿವೃದ್ಧಿ ಕಾರ್ಯವೆಲ್ಲ ಸ್ಥಗಿತ ಆಗಿದೆ. ಯಾವುದೋ ಗ್ಯಾರಂಟಿ ಯೋಜನೆ ಅಂತ ಹೇಳಿ ಅಭಿವೃದ್ಧಿ ಕೆಲಸ ಸ್ಥಗಿತ ಮಾಡಿದ್ದಾರೆ. ಇದರ ವಿರುದ್ದ ಮಾತನಾಡಲು ಯಾರೂ ಸಿದ್ದರಿಲ್ಲದ ವಿಚಿತ್ರವಾದ ಪರಿಸ್ಥಿತಿ ರಾಜ್ಯದಲ್ಲಿ ಇದೆ.
ಈ ಬಗ್ಗೆ ಅಧಿವೇಶನದಲ್ಲಿ ಅಂಕಿ ಅಂಶಗಳ ಮೂಲಕ ಬಿಜೆಪಿ ಸರ್ಕಾರದ ಗಮನಕ್ಕೆ ತರಲಿದೆ. ಆ ಬಳಿಕವಾದ್ರೂ ಚೇತರಿಸಿಕೊಂಡು ಅಭಿವೃದ್ಧಿ ಮಾಡಲಿ ಅಂತ ಒತ್ತಾಯಿಸ್ತೇವೆ. ಒತ್ತಾಯಕ್ಕೆ ಮಣಿಯದೇ ಇದ್ದರೆ ಮುಂದಿನ ಹೋರಾಟದ ರೂಪುರೇಷೆ ಮಾಡ್ತೇವೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಮುಂದಿನ ಹೋರಾಟದ ರೂಪುರೇಷೆ ನಿರ್ಧಾರ ಮಾಡ್ತಾರೆ.
ಎಂಎಲ್ ಸಿ ಚುನಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಇದರಲ್ಲಿ ಗೊಂದಲ ಏನೂ ಇಲ್ಲ, ದೆಹಲಿಯಲ್ಲಿ ಇವೆಲ್ಲ ಫೈನಲ್ ಆಗಿರೋದು ಎಂದರು. ಸರ್ಕಾರ ಬೀಳುತ್ತಾ ಅನ್ನೋ ಪ್ರಶ್ನೆಗೆ, ಆ ಬಗ್ಗೆ ನಾನು ಏನೂ ಹೇಳಿಕೆ ಕೊಡಲು ಇಷ್ಟಪಡಲ್ಲ. ನಾನು ವಿರೋಧ ಪಕ್ಷದ ನಾಯಕನಲ್ಲ ಎಂದರು.
Former Chief Minister B.S. Yediyurappa on Sunday visited the Dharmasthala temple. During his visit, he met Dharmadhikari Dr. D. Veerendra Heggade and engaged in discussions.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 07:49 pm
HK News Staffer
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm