ಬ್ರೇಕಿಂಗ್ ನ್ಯೂಸ್
26-06-24 10:02 am Mangaluru Correspondent ಕರಾವಳಿ
ಉಳ್ಳಾಲ, ಜೂನ್ 26: ಕಂಪೌಂಡ್ ಗೋಡೆ ಮನೆಯ ಮೇಲ್ಗಡೆ ಉರುಳಿ ಬಿದ್ದು ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ನಸುಕಿನ ಜಾವ ಸಂಭವಿಸಿದೆ.
ಮನೆಯಲ್ಲಿ ವಾಸ್ತವ್ಯವಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮತ್ತು ಇಬ್ಬರು ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಮೃತಪಟ್ಟಿದ್ದಾರೆ. ಪಕ್ಕದ ಮನೆಯ ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆ, ಕುಸಿದು ದುರಂತ ಸಂಭವಿಸಿದೆ.
ಯಾಸೀರ್ ಮಂಗಳೂರಿನ ಬಂದರು ದಕ್ಕೆಯಲ್ಲಿ ಮಡ್ಡಿ ಆಯಿಲ್ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಊಟ ಮುಗಿಸಿ ಮನೆಯ ಕೋಣೆಯಲ್ಲಿ ಮಲಗಿದ್ದ ಇಬ್ಬರು ಪುತ್ರಿಯರು ಹಾಗೂ ದಂಪತಿ ಬೆಳಗ್ಗಿನ ಜಾವ ಮನೆಯ ಮೇಲೆ ಬಿದ್ದ ಕಾಂಪೌಂಡ್ ಗೋಡೆಯಿಂದಾಗಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ರಾತ್ರಿಯಿಡೀ ಮಳೆಯಾದ ಪರಿಣಾಮ ಕಂಪೌಂಡ್ ವಾಲ್ ಹಾಗೂ ಎರಡು ಅಡಿಕೆ ಮರಗಳು ಯಾಸಿರ್ ಅವರ ಮನೆಯ ಮೇಲೆ ಉರುಳಿಬಿದ್ದಿದೆ.




ರಿಹಾನಾ ಹಾಗೂ ರಿಫಾನ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಾಲೆ ಹಾಗೂ ಕಾಲೇಜಿಗೆ ತೆರಳುತ್ತಿದ್ದರು. ಆರು ವರ್ಷಗಳ ಹಿಂದೆ ಮನೆ ಖರೀದಿಸಿದ್ದ ಇವರು ಒಂದು ವರ್ಷ ಮನೆಯನ್ನು ಲೀಸ್ ಗೆ ನೀಡಿ ಆರು ತಿಂಗಳ ಹಿಂದಷ್ಟೇ ಮನೆಗೆ ವಾಪಸ್ಸಾಗಿದ್ದರು. ಎರಡು ವರ್ಷಗಳ ಹಿಂದೆಯೂ ಮನೆಯ ಮೇಲೆ ಇದೇ ರೀತಿ ಕಂಪೌಂಡ್ ಗೋಡೆ ಕುಸಿದಿದ್ದು, ಯಾವುದೇ ಅಪಾಯವಾಗಿರಲಿಲ್ಲ.
ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯರು ಮೂರು ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದರೆ, ಅಗ್ನಿಶಾಮಕ ದಳ ಸ್ಥಳೀಯರ ಜೊತೆ ಸೇರಿ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಮತ್ತೊಂದು ಹೆಣ್ಮಗಳ ಮೃತದೇಹವನ್ನು ಹೊರತೆಗೆದಿದ್ದಾರೆ.
ದೊಡ್ಡಮಗಳು ರಶೀನಾ ಕಾಸರಗೋಡು ಕಡೆಗೆ ವಿವಾಹ ಮಾಡಲಾಗಿದ್ದು, ಬಕ್ರೀದ್ ಹಬ್ಬಕ್ಕೆಂದು ಬಂದವರು ನಿನ್ನೆಯಷ್ಟೇ ಗಂಡನ ಮನೆಗೆ ವಾಪಸ್ಸಾಗಿದ್ದರು. ಹೀಗಾಗಿ ಆಕೆ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
In a heart-wrenching incident that occurred in the early hours on Wednesday June 26, a compound wall collapsed onto a house, leading to the death of a family of four in Madani Nagar, Munnur village, Ullal taluk.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm