ಬ್ರೇಕಿಂಗ್ ನ್ಯೂಸ್
26-06-24 10:02 am Mangaluru Correspondent ಕರಾವಳಿ
ಉಳ್ಳಾಲ, ಜೂನ್ 26: ಕಂಪೌಂಡ್ ಗೋಡೆ ಮನೆಯ ಮೇಲ್ಗಡೆ ಉರುಳಿ ಬಿದ್ದು ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ನಸುಕಿನ ಜಾವ ಸಂಭವಿಸಿದೆ.
ಮನೆಯಲ್ಲಿ ವಾಸ್ತವ್ಯವಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮತ್ತು ಇಬ್ಬರು ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಮೃತಪಟ್ಟಿದ್ದಾರೆ. ಪಕ್ಕದ ಮನೆಯ ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆ, ಕುಸಿದು ದುರಂತ ಸಂಭವಿಸಿದೆ.
ಯಾಸೀರ್ ಮಂಗಳೂರಿನ ಬಂದರು ದಕ್ಕೆಯಲ್ಲಿ ಮಡ್ಡಿ ಆಯಿಲ್ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಊಟ ಮುಗಿಸಿ ಮನೆಯ ಕೋಣೆಯಲ್ಲಿ ಮಲಗಿದ್ದ ಇಬ್ಬರು ಪುತ್ರಿಯರು ಹಾಗೂ ದಂಪತಿ ಬೆಳಗ್ಗಿನ ಜಾವ ಮನೆಯ ಮೇಲೆ ಬಿದ್ದ ಕಾಂಪೌಂಡ್ ಗೋಡೆಯಿಂದಾಗಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ರಾತ್ರಿಯಿಡೀ ಮಳೆಯಾದ ಪರಿಣಾಮ ಕಂಪೌಂಡ್ ವಾಲ್ ಹಾಗೂ ಎರಡು ಅಡಿಕೆ ಮರಗಳು ಯಾಸಿರ್ ಅವರ ಮನೆಯ ಮೇಲೆ ಉರುಳಿಬಿದ್ದಿದೆ.




ರಿಹಾನಾ ಹಾಗೂ ರಿಫಾನ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಾಲೆ ಹಾಗೂ ಕಾಲೇಜಿಗೆ ತೆರಳುತ್ತಿದ್ದರು. ಆರು ವರ್ಷಗಳ ಹಿಂದೆ ಮನೆ ಖರೀದಿಸಿದ್ದ ಇವರು ಒಂದು ವರ್ಷ ಮನೆಯನ್ನು ಲೀಸ್ ಗೆ ನೀಡಿ ಆರು ತಿಂಗಳ ಹಿಂದಷ್ಟೇ ಮನೆಗೆ ವಾಪಸ್ಸಾಗಿದ್ದರು. ಎರಡು ವರ್ಷಗಳ ಹಿಂದೆಯೂ ಮನೆಯ ಮೇಲೆ ಇದೇ ರೀತಿ ಕಂಪೌಂಡ್ ಗೋಡೆ ಕುಸಿದಿದ್ದು, ಯಾವುದೇ ಅಪಾಯವಾಗಿರಲಿಲ್ಲ.
ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯರು ಮೂರು ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದರೆ, ಅಗ್ನಿಶಾಮಕ ದಳ ಸ್ಥಳೀಯರ ಜೊತೆ ಸೇರಿ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಮತ್ತೊಂದು ಹೆಣ್ಮಗಳ ಮೃತದೇಹವನ್ನು ಹೊರತೆಗೆದಿದ್ದಾರೆ.
ದೊಡ್ಡಮಗಳು ರಶೀನಾ ಕಾಸರಗೋಡು ಕಡೆಗೆ ವಿವಾಹ ಮಾಡಲಾಗಿದ್ದು, ಬಕ್ರೀದ್ ಹಬ್ಬಕ್ಕೆಂದು ಬಂದವರು ನಿನ್ನೆಯಷ್ಟೇ ಗಂಡನ ಮನೆಗೆ ವಾಪಸ್ಸಾಗಿದ್ದರು. ಹೀಗಾಗಿ ಆಕೆ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
In a heart-wrenching incident that occurred in the early hours on Wednesday June 26, a compound wall collapsed onto a house, leading to the death of a family of four in Madani Nagar, Munnur village, Ullal taluk.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am