ಬ್ರೇಕಿಂಗ್ ನ್ಯೂಸ್
26-06-24 11:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 26: ಎರಡು ದಿನಗಳಿಂದ ಸತತ ಸುರಿದ ಮಳೆಯಿಂದಾಗಿ ಮಂಗಳೂರಿನ ಹಲವೆಡೆ ಕೃತಕ ನೆರೆ ಉಂಟಾಗಿದೆ. ಬಜಾಲ್ ನಲ್ಲಿ ರೈಲ್ವೇ ಅಂಡರ್ ಪಾಸಲ್ಲಿ ನೀರು ನಿಂತಿದ್ದರಿಂದ ವಾಹನಗಳ ಸಂಚಾರಕ್ಕೆ ತೊಡಕಾಗಿದ್ದರೆ, ಬಜ್ಪೆ ಏರ್ಪೋರ್ಟ್ ಬಳಿಯ ಕೆಂಜಾರಿನಲ್ಲಿ ನೀರು ಹರಿಯೋ ಚರಂಡಿ ತಡೆ ಬಿದ್ದುದರಿಂದ ಮಳೆನೀರು ರಸ್ತೆಯಲ್ಲೇ ಹರಿದಿತ್ತು.
ಬುಧವಾರ ರಾತ್ರಿ ಸುರಿದ ಮಳೆಗೆ ಕೆಂಜಾರಿನ ಶ್ರೀದೇವಿ ಕಾಲೇಜು ಮುಂಭಾಗದ ರಸ್ತೆಯಲ್ಲೇ ಭಾರೀ ಪ್ರಮಾಣದ ನೀರು ಹರಿದಿತ್ತು. ಇದರ ವಿಡಿಯೋ ವೈರಲ್ ಆಗಿದ್ದು ಸ್ಥಳೀಯರು ಕಾಲೇಜು ಸಿಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಕಂಡುಬಂದಿದೆ. ಕಾಲೇಜಿನವರು ಚರಂಡಿ ನೀರು ಹರಿಯುವುದಕ್ಕೆ ಸಣ್ಣ ಪೈಪ್ ಹಾಕಿದ್ದರು. ಅದನ್ನು ನಾವು ಪ್ರಶ್ನೆ ಮಾಡಿದ್ದರೂ ಕೇರ್ ಮಾಡಿರಲಿಲ್ಲ. ಈಗ ಗುಡ್ಡದಿಂದ ಹರಿದು ಬಂದ ಮಳೆ ನೀರು ಪೂರ್ತಿಯಾಗಿ ನಮ್ಮ ತೋಟ ಮತ್ತು ಗದ್ದೆಗೆ ನುಗ್ಗಿದೆ. ಇದನ್ನು ಕೂಡಲೇ ಸರಿಪಡಿಸದೇ ಇದ್ದಲ್ಲಿ ನಾಳೆ ಕಾಲೇಜು ಗೇಟ್ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಮಳೆನೀರು ಏರ್ಪೋರ್ಟ್ ರಸ್ತೆಯಲ್ಲೇ ಹರಿಯುವುದು ವಿಡಿಯೋದಲ್ಲಿದೆ.



ಜಪ್ಪಿನಮೊಗರುವಿನಲ್ಲಿ ಚರಂಡಿಯಲ್ಲಿ ಮಳೆ ನೀರು ಹರಿಯಲು ಸಾಧ್ಯವಾಗದೆ ಬ್ಲಾಕ್ ಆಗಿದ್ದು, ನೀರು ಹಲವು ಮನೆಗಳಿಗೆ ನುಗ್ಗಿತ್ತು. ಘಟನಾ ಸ್ಥಳಕ್ಕೆ ಕೆಲವು ಸಾಮಾಜಿಕ ಕಾರ್ಯಕರ್ತರು ಭೇಟಿ ಕೊಟ್ಟು ಮಹಾನಗರ ಪಾಲಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆನಂತರ, ಸ್ಥಳೀಯ ಕಾರ್ಪೊರೇಟರ್ ಮತ್ತು ಪಾಲಿಕೆಯ ಅಧಿಕಾರಿಗಳು ಬಂದು ಬ್ಲಾಕ್ ಸರಿಪಡಿಸುವ ಭರವಸೆ ನೀಡಿದ್ದಾರೆ.
ಬಜಾಲ್ ರೈಲ್ವೇ ಅಂಡರ್ ಪಾಸಲ್ಲಿ ಪ್ರತಿ ಮಳೆಗಾಲಕ್ಕೂ ಅದೇ ಸ್ಥಿತಿಯಾಗಿದೆ. ಅಂಡರ್ ಪಾಸ್ ಆಳ ಇರೋದು ಮತ್ತು ನೀರು ಹರಿಯಲು ವ್ಯವಸ್ಥೆ ಮಾಡದಿರುವುದರಿಂದ ಮಳೆ ನೀರು ತುಂಬಿಕೊಂಡು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಈ ಸಲದ ಮಳೆಗಾಲದಲ್ಲಿ ಮೊದಲ ಬಾರಿಗೆ ಬುಧವಾರ ಬಜಾಲ್ ಅಂಡರ್ ಪಾಸ್ ಅರ್ಧ ಮುಳುಗಡೆಯಾಗಿತ್ತು. ಕಾರೊಂದು ನೀರಿನಲ್ಲಿ ಸಾಗಲು ಯತ್ನಿಸಿ, ಅರ್ಧದಲ್ಲಿ ಬಾಕಿಯಾಗಿತ್ತು. ಕೊಟ್ಟಾರದಲ್ಲಿಯೂ ಮಳೆ ನೀರು ಹಲವು ಮನೆಗಳಿಗೆ ನುಗ್ಗಿದೆ. ಪ್ರತಿ ಮಳೆಗಾಲದಲ್ಲಿಯೂ ಕೊಟ್ಟಾರದಲ್ಲಿ ಸಮಸ್ಯೆ ಮಾಮೂಲಿ ಅನ್ನುವಂತಾಗಿದೆ.
Mangalore rain, bajal, Bajpe, jeppu flooded with rain water.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm