ಬ್ರೇಕಿಂಗ್ ನ್ಯೂಸ್
26-06-24 11:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 26: ಎರಡು ದಿನಗಳಿಂದ ಸತತ ಸುರಿದ ಮಳೆಯಿಂದಾಗಿ ಮಂಗಳೂರಿನ ಹಲವೆಡೆ ಕೃತಕ ನೆರೆ ಉಂಟಾಗಿದೆ. ಬಜಾಲ್ ನಲ್ಲಿ ರೈಲ್ವೇ ಅಂಡರ್ ಪಾಸಲ್ಲಿ ನೀರು ನಿಂತಿದ್ದರಿಂದ ವಾಹನಗಳ ಸಂಚಾರಕ್ಕೆ ತೊಡಕಾಗಿದ್ದರೆ, ಬಜ್ಪೆ ಏರ್ಪೋರ್ಟ್ ಬಳಿಯ ಕೆಂಜಾರಿನಲ್ಲಿ ನೀರು ಹರಿಯೋ ಚರಂಡಿ ತಡೆ ಬಿದ್ದುದರಿಂದ ಮಳೆನೀರು ರಸ್ತೆಯಲ್ಲೇ ಹರಿದಿತ್ತು.
ಬುಧವಾರ ರಾತ್ರಿ ಸುರಿದ ಮಳೆಗೆ ಕೆಂಜಾರಿನ ಶ್ರೀದೇವಿ ಕಾಲೇಜು ಮುಂಭಾಗದ ರಸ್ತೆಯಲ್ಲೇ ಭಾರೀ ಪ್ರಮಾಣದ ನೀರು ಹರಿದಿತ್ತು. ಇದರ ವಿಡಿಯೋ ವೈರಲ್ ಆಗಿದ್ದು ಸ್ಥಳೀಯರು ಕಾಲೇಜು ಸಿಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಕಂಡುಬಂದಿದೆ. ಕಾಲೇಜಿನವರು ಚರಂಡಿ ನೀರು ಹರಿಯುವುದಕ್ಕೆ ಸಣ್ಣ ಪೈಪ್ ಹಾಕಿದ್ದರು. ಅದನ್ನು ನಾವು ಪ್ರಶ್ನೆ ಮಾಡಿದ್ದರೂ ಕೇರ್ ಮಾಡಿರಲಿಲ್ಲ. ಈಗ ಗುಡ್ಡದಿಂದ ಹರಿದು ಬಂದ ಮಳೆ ನೀರು ಪೂರ್ತಿಯಾಗಿ ನಮ್ಮ ತೋಟ ಮತ್ತು ಗದ್ದೆಗೆ ನುಗ್ಗಿದೆ. ಇದನ್ನು ಕೂಡಲೇ ಸರಿಪಡಿಸದೇ ಇದ್ದಲ್ಲಿ ನಾಳೆ ಕಾಲೇಜು ಗೇಟ್ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಮಳೆನೀರು ಏರ್ಪೋರ್ಟ್ ರಸ್ತೆಯಲ್ಲೇ ಹರಿಯುವುದು ವಿಡಿಯೋದಲ್ಲಿದೆ.



ಜಪ್ಪಿನಮೊಗರುವಿನಲ್ಲಿ ಚರಂಡಿಯಲ್ಲಿ ಮಳೆ ನೀರು ಹರಿಯಲು ಸಾಧ್ಯವಾಗದೆ ಬ್ಲಾಕ್ ಆಗಿದ್ದು, ನೀರು ಹಲವು ಮನೆಗಳಿಗೆ ನುಗ್ಗಿತ್ತು. ಘಟನಾ ಸ್ಥಳಕ್ಕೆ ಕೆಲವು ಸಾಮಾಜಿಕ ಕಾರ್ಯಕರ್ತರು ಭೇಟಿ ಕೊಟ್ಟು ಮಹಾನಗರ ಪಾಲಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆನಂತರ, ಸ್ಥಳೀಯ ಕಾರ್ಪೊರೇಟರ್ ಮತ್ತು ಪಾಲಿಕೆಯ ಅಧಿಕಾರಿಗಳು ಬಂದು ಬ್ಲಾಕ್ ಸರಿಪಡಿಸುವ ಭರವಸೆ ನೀಡಿದ್ದಾರೆ.
ಬಜಾಲ್ ರೈಲ್ವೇ ಅಂಡರ್ ಪಾಸಲ್ಲಿ ಪ್ರತಿ ಮಳೆಗಾಲಕ್ಕೂ ಅದೇ ಸ್ಥಿತಿಯಾಗಿದೆ. ಅಂಡರ್ ಪಾಸ್ ಆಳ ಇರೋದು ಮತ್ತು ನೀರು ಹರಿಯಲು ವ್ಯವಸ್ಥೆ ಮಾಡದಿರುವುದರಿಂದ ಮಳೆ ನೀರು ತುಂಬಿಕೊಂಡು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಈ ಸಲದ ಮಳೆಗಾಲದಲ್ಲಿ ಮೊದಲ ಬಾರಿಗೆ ಬುಧವಾರ ಬಜಾಲ್ ಅಂಡರ್ ಪಾಸ್ ಅರ್ಧ ಮುಳುಗಡೆಯಾಗಿತ್ತು. ಕಾರೊಂದು ನೀರಿನಲ್ಲಿ ಸಾಗಲು ಯತ್ನಿಸಿ, ಅರ್ಧದಲ್ಲಿ ಬಾಕಿಯಾಗಿತ್ತು. ಕೊಟ್ಟಾರದಲ್ಲಿಯೂ ಮಳೆ ನೀರು ಹಲವು ಮನೆಗಳಿಗೆ ನುಗ್ಗಿದೆ. ಪ್ರತಿ ಮಳೆಗಾಲದಲ್ಲಿಯೂ ಕೊಟ್ಟಾರದಲ್ಲಿ ಸಮಸ್ಯೆ ಮಾಮೂಲಿ ಅನ್ನುವಂತಾಗಿದೆ.
Mangalore rain, bajal, Bajpe, jeppu flooded with rain water.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am