ಬ್ರೇಕಿಂಗ್ ನ್ಯೂಸ್
27-06-24 10:57 am Mangalore Correspondent ಕರಾವಳಿ
ಮಂಗಳೂರು, ಜೂನ್ 27: ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರಿಕ್ಷಾ ಚಾಲಕರು ದುರಂತ ಸಾವನ್ನಪ್ಪಿದ ಘಟನೆ ನಗರದ ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ಬಳಿ ನಡೆದಿದೆ.
ಪುತ್ತೂರು ರಾಮಕುಂಜ ನಿವಾಸಿ ದೇವರಾಜ್ ಗೌಡ(46), ಹಾಸನ ಜಿಲ್ಲೆಯ ಆಲೂರು ಮೂಲದ ರಾಜು (50) ಮೃತರು. ಇವರು ರೊಸಾರಿಯೋ ಸ್ಕೂಲ್ ಬಳಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಇವರ ಮನೆ ಬಳಿಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿತ್ತು. ಎಂದಿನಂತೆ ನಸುಕಿನಲ್ಲಿ ನಾಲ್ಕು ಗಂಟೆ ವೇಳೆಗೆ ಚಾಲಕ ರಾಜು ತನ್ನ ಆಟೋ ತೊಳೆಯಲೆಂದು ಹೊರಗೆ ಬಂದಿದ್ದು ಶಾಕ್ ಆಗಿದ್ದಾರೆ. ಹೊರಗೆ ಬಿದ್ದುಕೊಂಡಿದ್ದ ವಿದ್ಯುತ್ ತಂತಿಯನ್ನು ನೋಡದೆ ತುಳಿದು ಶಾಕ್ ಆಗಿತ್ತು. ಇದನ್ನು ತಿಳಿದ ಮನೆಯ ಒಳಗಿದ್ದ ಇನ್ನೊಬ್ಬ ಗೆಳೆಯ ದೇವರಾಜು ಓಡಿ ಬಂದಿದ್ದು ಅಲ್ಲಿದ್ದ ಗೋಣಿ ಚೀಲದಲ್ಲಿ ರಾಜು ಅವರನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಮಳೆ ಬರುತ್ತಿದ್ದುದರಿಂದ ಅವರಿಗೂ ತೀವ್ರ ಶಾಕ್ ಆಗಿದ್ದು ನೆಲಕ್ಕೆ ಉರುಳಿದ್ದಾರೆ.
ಇಬ್ಬರೂ ನೆಲಕ್ಕೆ ಬಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ. ನಸುಕಿನಲ್ಲಿ 4 ಗಂಟೆಗೆ ಘಟನೆ ನಡೆದಿದ್ದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ಘಟನೆ ಬೆಳಗಾದ ಬಳಿಕವೇ ಸ್ಥಳೀಯರಿಗೆ ಗೊತ್ತಾಗಿದೆ.
ವಿದ್ಯುತ್ ಕಂಬ ರಾತ್ರಿ 9 ಗಂಟೆಗೆ ಮಳೆಗೆ ಉರುಳಿ ಬಿದ್ದಿದ್ದು ಅದರಲ್ಲಿನ ತಂತಿಯಲ್ಲಿ ವಿದ್ಯುತ್ ಪ್ರವಹಿಸುವುದು ನಿಂತಿರಲಿಲ್ಲ. ಹೀಗಾಗಿ ಬೆಳಗ್ಗಿನ ವೇಳೆಗೆ ದುರಂತ ಸಂಭವಿಸಿದೆ. ಸಿಸಿಟಿವಿಯಲ್ಲಿ ಪರಿಶೀಲನೆ ನಡೆಸಿದಾಗ, ರಾತ್ರಿ ವೇಳೆಯೇ ವಿದ್ಯುತ್ ಕಂಬ ಬಿದ್ದಿರುವುದು ಪತ್ತೆಯಾಗಿದೆ. ಹೀಗಾಗಿ ಮೆಸ್ಕಾಂ ಸಿಬಂದಿ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಪಾಂಡೇಶ್ವರ ಪೊಲೀಸರು 304 ಎ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
In a tragic incident near Rosario church on Wednesday night, two auto-rickshaw drivers were electrocuted when an electricity wire snapped and one among them came in contact with it. The other driver died while attempting to rescue his friend. The deceased have been identified as Devaraj Gowda (46) from Puttur and Raju Paalya (50) from Hassan. Both were residing in a rented room near Rosario church.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm