ಬ್ರೇಕಿಂಗ್ ನ್ಯೂಸ್
28-06-24 04:22 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 28: ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿದ ಪೊಲೀಸರ ಕ್ರಮವನ್ನು ವಿರೋಧಿಸಿ ಬೆಳ್ತಂಗಡಿ ಠಾಣೆ ಮತ್ತು ಆಡಳಿತ ಸೌಧದ ಮುಂಭಾಗದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಪ್ರತಿಭಟನೆ, ಪೊಲೀಸರಿಗೆ ಬೆದರಿಕೆ ಹಾಕಿದ ಕುರಿತು ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಒಟ್ಟು 65 ಮಂದಿಗೆ ಸಮನ್ಸ್ ಜಾರಿ ಮಾಡಿದೆ.
ಮೊದಲ ಪ್ರಕರಣದಲ್ಲಿ 28 ಮಂದಿ ಹಾಗೂ ಎರಡನೇ ಪ್ರಕರಣದಲ್ಲಿ 37 ಮಂದಿಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಆರೋಪಿಗಳು ಜುಲೈ 10ರಂದು ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಮೇ 18ರಂದು ನಡೆದ ಠಾಣೆಯ ಮುಂದೆ ಅಕ್ರಮ ಪ್ರತಿಭಟನೆ ಮತ್ತು ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ರಾಜೇಶ ಎಂಕೆ, ಜಗದೀಶ ಕನ್ನಾಜೆ, ಚಂದ್ರಹಾಸ ಬದ್ಯಾರು, ಪ್ರಕಾಶ್ ಆಚಾರಿ, ಸಂದೀಪ್ ರೈ, ನಿತೇಶ್ ಶೆಟ್ಟಿ, ಪವನ್ ಶೆಟ್ಟಿ, ಪ್ರದೀಪ್ ಶೆಟ್ಟಿ, ರಂಜಿತ್ ಶೆಟ್ಟಿ, ಅವಿನಾಶ್ ಕುವೆಟ್ಟು, ಚಂದನ್ ಕಾಮತ್, ಸಂತೋಷ್ ಜೈನ್ ಪಡಂಗಡಿ, ಪುಷ್ಪರಾಜ್ ಶೆಟ್ಟಿ, ಶ್ರೀನಿವಾಸ ರಾವ್, ರಾಜ್ ಪ್ರಕಾಶ್ ಶೆಟ್ಟಿ ಸೇರಿದಂತೆ 28 ಮಂದಿ ವಿರುದ್ಧ ಕೋರ್ಟಿಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ.

ಮೇ 20ರಂದು ಆಡಳಿತ ಸೌಧ ಮುಂಭಾಗದಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ಶಾಸಕ ಹರೀಶ್ ಪೂಂಜ, ಜಯಾನಂದ ಗೌಡ ಕುತ್ಯಾರು, ನವೀನ ನೆರಿಯ, ಚಂದ್ರಹಾಸ ಕಾವು, ಜಗದೀಶ ಲಾಯ್ಲ, ಗಿರೀಶ್ ಡೋಂಗ್ರೆ, ಉಮೇಶ್ ಕುಲಾಲ್ ಕುವೆಟ್ಟು, ಯಶವಂತ ಗೌಡ ಬೆಳಾಲು, ದಿನೇಶ್ ಪೂಜಾರಿ ಚಾರ್ಮಾಡಿ, ಶಶಿಧರ್ ಕಲ್ಮಂಜ, ರವಿನಂದನ್ ನಟ್ಟಿಬೈಲು, ಶಂಕರ ಸಪಲ್ಯ ಸೇರಿ 37 ಮಂದಿ ವಿರುದ್ಧ ಸಮನ್ಸ್ ನೋಟಿಸ್ ಜಾರಿಯಾಗಿದೆ. ಬಹುತೇಕ ಹೆಚ್ಚಿನವರು ಎರಡೂ ಪ್ರಕರಣದಲ್ಲಿ ಆರೋಪಿಗಳಾಗಿ ಗುರುತಿಸಲ್ಪಟ್ಟಿದ್ದು, ನೋಟೀಸ್ ನೀಡಲಾಗಿದೆ. ಪ್ರಕರಣ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಮತ್ತು ಪುತ್ತೂರು ಡಿವೈಎಸ್ಪಿ ಅವರನ್ನು ಒಳಗೊಂಡ ತನಿಖಾ ತಂಡ ಕೇವಲ ಮೂರೇ ದಿನದಲ್ಲಿ ಚಾರ್ಜ್ ಶೀಟ್ ಹಾಕಿದೆ.
Threat to police, court issues summons to Belthangady MLA Harish poonja and 65 others. A case was registered against Mr. Poonja on May 19 after the MLA created a ruckus at Belthangady police station on the night of May 18 over the arrest of Shashiraj Shetty in connection with an illegal quarrying case.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm