ಬ್ರೇಕಿಂಗ್ ನ್ಯೂಸ್
01-07-24 10:15 pm Mangalore Correspondent ಕರಾವಳಿ
ಮಂಗಳೂರು, ಜುಲೈ.1: ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರದ ಸಂಪಾದಕರಾಗಿದ್ದ ರೆವರೆಂಡ್ ಹರ್ಮನ್ ಮೋಗ್ಲಿಂಗ್ ಹೆಸರಿನಲ್ಲಿ ಮಂಗಳೂರಿನ ಪ್ರಮುಖ ರಸ್ತೆಗೆ ಅವರ ಹೆಸರು ಹಾಗೂ ವೃತ್ತವೊಂದನ್ನು ನಿರ್ಮಿಸುವಂತೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನಿ ಆಳ್ವಾರಿಸ್ ಒತ್ತಾಯಿಸಿದರು.
ಸೋಮವಾರ ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಆವರಣದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೋಗ್ಲಿಂಗ್ ಸ್ಮರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ಇನ್ನೋರ್ವ ಅತಿಥಿ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್ ಮಾತನಾಡಿ, ಹರ್ಮನ್ ಮೋಗ್ಲಿಂಗ್ ಅವರು ಮಂಗಳೂರ ಸಮಾಚಾರ ಪತ್ರಿಕೆಯನ್ನು ಆರಂಭಿಸುವ ಮೂಲಕ ನೈಜ ಪತ್ರಿಕಾ ಧರ್ಮದ ಅಡಿಪಾಯ ಹಾಕಿದ್ದರು. ಇವತ್ತಿನ ಸಂದರ್ಭದಲ್ಲಿ ಪತ್ರಿಕಾ ಧರ್ಮವನ್ನು ಪಾಲಿಸುವ ಬಗ್ಗೆ ಬದ್ಧತೆಯಿಂದ ಮಾಧ್ಯಮ ಸಂಸ್ಥೆಗಳು ಮತ್ತು ಪತ್ರಕರ್ತರು ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.

ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಮ್.ವಾಟ್ಸನ್ ಮಾತನಾಡಿ, ಕಿಟೆಲ್, ಮೋಗ್ಲಿಂಗ್, ಬ್ರಿಗೆಲ್, ಗುಂಡರ್ಟ್ ಮೊದಲಾದ ಯುಗ ಪ್ರವರ್ತಕರ ನೆನಪಿನಲ್ಲಿ ಬಾಸೆಲ್ ಮಿಷನ್ ಮ್ಯೂಸಿಯಂ ಆರಂಭಿಸುವ ಉದ್ದೇಶ ಇದೆ ಎಂದು ಹೇಳಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಗೌರವ ಅಧ್ಯಕ್ಷ ಹರೀಶ್ ಬಂಟ್ವಾಳ್ ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ ಕಾರ್ಯಕ್ರಮ ನಿರ್ವಹಿಸಿದರು.
Karnataka Konkani Sahitya Akademi President Stany Alvares has requested that a circle be built in the name of Reverend Herman Mogling, who was the editor of Mangalore Samachar, the first Kannada newspaper.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am