ಬ್ರೇಕಿಂಗ್ ನ್ಯೂಸ್
02-07-24 01:41 pm Mangalore Correspondent ಕರಾವಳಿ
ಉಳ್ಳಾಲ, ಜು.02: ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ (27) ಮೃತ ದುರ್ದೈವಿ. ಗಣೇಶ್ ಆಚಾರ್ಯ ಅವರು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಜೂ.28 ರಂದು ಬೆಳಗ್ಗೆ ಗಣೇಶ್ ಅವರು ಪಾವೂರು ಹರೇಕಳದಿಂದ ಕೊಣಾಜೆಗೆ ತೆರಳುವ ವೇಳೆ ಹರೇಕಳ ಗ್ರಾಮ ಪಂಚಾಯತ್ ಕಚೇರಿಯ ಎದುರುಗಡೆ ಅಪಘಾತ ಸಂಭವಿಸಿತ್ತು. ವೇಗದಿಂದ ಚಲಿಸುತ್ತಿದ್ದ ಟಿಪ್ಪರ್ ಗಣೇಶ್ ಅವರು ಚಲಿಸುತ್ತಿದ್ದ ಸ್ಕೂಟರನ್ನ ಓವರ್ ಟೇಕ್ ಮಾಡುವ ಧಾವಂತದಲ್ಲಿ ಅಪಘಾತ ಸಂಭವಿಸಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸಹಿತ ಗಣೇಶ್ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಟಿಪ್ಪರ್ ಚಾಲಕ ಮಹಮ್ಮದ್ ಹನೀಫ್ ಎಂಬವರ ವಿರುದ್ಧ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ಎ.ಸಿ ಮೆಕ್ಯಾನಿಕ್ ಆಗಿದ್ದ ಗಣೇಶ್ ಅವರು ಕುಟುಂಬಕ್ಕೆ ಆಧಾರವಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಗಣೇಶ್ ಆಚಾರ್ಯ ಶಸ್ತ್ರಚಿಕಿತ್ಸೆಗೆ 10 ಲಕ್ಷ ರೂ. ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದರಿಂದ ಸ್ನೇಹಿತರು ಸಾಮಾಜಿಕ ಜಾಲತಾಣಗಳಲ್ಲಿ ದಾನಿಗಳ ನೆರವು ಕೋರಿದ್ದರು.
Mangalore Truck bike accident at Harekala in ullal, 27 year old youth dies in hospital. The deceased has been identified as Ganesh Acharya. On 28th of June he met with an accident and today he breathed his last in the hospital.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 06:03 pm
HK News Staffer
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm