ಬ್ರೇಕಿಂಗ್ ನ್ಯೂಸ್
02-07-24 01:41 pm Mangalore Correspondent ಕರಾವಳಿ
ಉಳ್ಳಾಲ, ಜು.02: ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ (27) ಮೃತ ದುರ್ದೈವಿ. ಗಣೇಶ್ ಆಚಾರ್ಯ ಅವರು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಜೂ.28 ರಂದು ಬೆಳಗ್ಗೆ ಗಣೇಶ್ ಅವರು ಪಾವೂರು ಹರೇಕಳದಿಂದ ಕೊಣಾಜೆಗೆ ತೆರಳುವ ವೇಳೆ ಹರೇಕಳ ಗ್ರಾಮ ಪಂಚಾಯತ್ ಕಚೇರಿಯ ಎದುರುಗಡೆ ಅಪಘಾತ ಸಂಭವಿಸಿತ್ತು. ವೇಗದಿಂದ ಚಲಿಸುತ್ತಿದ್ದ ಟಿಪ್ಪರ್ ಗಣೇಶ್ ಅವರು ಚಲಿಸುತ್ತಿದ್ದ ಸ್ಕೂಟರನ್ನ ಓವರ್ ಟೇಕ್ ಮಾಡುವ ಧಾವಂತದಲ್ಲಿ ಅಪಘಾತ ಸಂಭವಿಸಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸಹಿತ ಗಣೇಶ್ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಟಿಪ್ಪರ್ ಚಾಲಕ ಮಹಮ್ಮದ್ ಹನೀಫ್ ಎಂಬವರ ವಿರುದ್ಧ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ಎ.ಸಿ ಮೆಕ್ಯಾನಿಕ್ ಆಗಿದ್ದ ಗಣೇಶ್ ಅವರು ಕುಟುಂಬಕ್ಕೆ ಆಧಾರವಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಗಣೇಶ್ ಆಚಾರ್ಯ ಶಸ್ತ್ರಚಿಕಿತ್ಸೆಗೆ 10 ಲಕ್ಷ ರೂ. ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದರಿಂದ ಸ್ನೇಹಿತರು ಸಾಮಾಜಿಕ ಜಾಲತಾಣಗಳಲ್ಲಿ ದಾನಿಗಳ ನೆರವು ಕೋರಿದ್ದರು.
Mangalore Truck bike accident at Harekala in ullal, 27 year old youth dies in hospital. The deceased has been identified as Ganesh Acharya. On 28th of June he met with an accident and today he breathed his last in the hospital.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm