ಬ್ರೇಕಿಂಗ್ ನ್ಯೂಸ್
02-07-24 10:35 pm Mangalore Correspondent ಕರಾವಳಿ
ಮಂಗಳೂರು, ಜುಲೈ.2: ನೀಟ್ ಪರೀಕ್ಷೆ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಎನ್ಎಸ್ ಯುಐ ಮತ್ತು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ಡೌನ್ ಡೌನ್ ಎಂದು ಘೋಷಣೆ ಕೂಗಿದ್ದಲ್ಲದೆ, ನೀಟ್ ಪರೀಕ್ಷೆಯಲ್ಲಿ ಹಗರಣ ಆಗಿದ್ದರೂ, ಮೌನ ವಹಿಸಿರುವ ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ವಕ್ತಾರ ಎಂಜಿ ಹೆಗ್ಡೆ, ನೀಟ್ ಹಗರಣ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಗುಜರಾತ್ ಮತ್ತು ಬಿಹಾರದಲ್ಲಿಯೇ ಹೆಚ್ಚಿನ ಕಡೆ ದಾಳಿ ನಡೆಸಿದ್ದಾರೆ. ಬಿಹಾರದಲ್ಲಿ ಕೋಚಿಂಗ್ ಸೆಂಟರ್ ಹೊಂದಿರುವ ವ್ಯಕ್ತಿಯೇ ಇದರ ಕಿಂಗ್ ಪಿನ್. ವಿಶೇಷ ಅಂದ್ರೆ, ಆತ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿ. ಆತನ ಕೋಚಿಂಗ್ ಸೆಂಟರಿನಿಂದ ಪರೀಕ್ಷೆ ಬರೆದವರೆಲ್ಲ ಪಾಸ್ ಆಗಿದ್ದಾರೆ. ಪರೀಕ್ಷೆಗೂ ಮೊದಲೇ ಪ್ರಶ್ನೆ ಪತ್ರಿಕೆ ಬಿಹಾರದಲ್ಲಿ ಹಂಚಿಕೆಯಾಗಿದೆ ಎನ್ನುವುದಕ್ಕಿದು ಸಾಕ್ಷಿ. ಬಿಹಾರದಲ್ಲಿ 20ಕ್ಕೂ ಹೆಚ್ಚು ಬಂಧನ ಆಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಬಾಯಿಬಿಟ್ಟಿದ್ದಾರೆ. ಹಾಗಿದ್ದರೂ, ಕೇಂದ್ರ ಸರಕಾರ ಈ ಬಗ್ಗೆ ಮೌನ ವಹಿಸಿದ್ದು ನೋಡಿದರೆ ಇವರು ಮಕ್ಕಳ ಪರೀಕ್ಷೆ ವಿಚಾರದಲ್ಲಿಯೂ ಕಾಸು ಮಾಡಿದ್ದಾರೆ ಎನ್ನುವುದು ತಿಳಿಯುತ್ತದೆ ಎಂದರು.










ನೀಟ್ ಲೀಕ್, ಎನ್ ಡಿಎ ಲೀಕ್ ಎನ್ನುವ ಭಿತ್ತಿಪತ್ರ ಹಿಡಿದು ಕಾರ್ಯಕರ್ತರು ಘೋಷಣೆ ಕೂಗಿದರು. ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್, ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಮತ್ತಿತರರಿದ್ದರು. ಪ್ರತಿಭಟನೆಯ ಕೊನೆಯಲ್ಲಿ ಪೊಲೀಸರು ಹಾಕಿದ್ದ ಬ್ಯಾರಿಕೇಡನ್ನು ತಳ್ಳಿಕೊಂಡು ಕಾರ್ಯಕರ್ತರು ಹೊರಬಂದಿದ್ದು ಕೆಲಕಾಲ ಗೊಂದಲ ಮೂಡಿಸಿದ್ದಾರೆ.
The Dakshina Kannada National Students Union of India (NSUI) led by prominant Congress leaders of the district staged a protest at Clock Tower, Mangaluru, on Tuesday, July 2, criticising the Central BJP Government over the NEET question paper leak.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am