ಬ್ರೇಕಿಂಗ್ ನ್ಯೂಸ್
04-07-24 10:04 pm Mangalore Correspondent ಕರಾವಳಿ
ಮಂಗಳೂರು, ಜುಲೈ.4: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸದನಾಗಿ ಪ್ರತಿಜ್ಞೆ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮೊದಲ ಅಧಿವೇಶನದ ಸಮಯದಲ್ಲಿ ಹಲವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಲ್ಪನೆ ಸಾಕಾರಗೊಳಿಸಲು ಮುನ್ನುಡಿ ಬರೆದಿದ್ದಾರೆ.
ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವರಾದ ಸರ್ಬಾನಂದ ಸೋನೋವಾಲ್ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಂಗಳೂರು ಎನ್ಎಮ್ಪಿಎ ಬಂದರು ಅಭಿವೃದ್ಧಿಯ ದೃಷ್ಟಿಯಿಂದ ಇರುವ ಸಾಧ್ಯತೆಗಳು, ಸಾಗರ್ಮಾಲಾ ಯೋಜನೆ ಅಡಿಯಲ್ಲಿ ಲಕ್ಷದ್ವೀಪಕ್ಕೆ ತೆರಳುವ ಹಡಗುಗಳಿಗೆ ಮೀಸಲಾದ ಜೆಟ್ಟಿ ಮತ್ತು ಕ್ರೂಸ್ ಟರ್ಮಿನಲ್ ನಿರ್ಮಾಣದ ಕುರಿತು ಚರ್ಚೆ ನಡೆಸಿದರು.
ಹಾಗೆಯೇ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ದೆಹಲಿಯ ಸಚಿವಾಲಯದಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರೈಲ್ವೇ ಯೋಜನೆಗಳ ಪ್ರಗತಿ, ಸಮಸ್ಯೆ ಮತ್ತು ಸಾಧ್ಯತೆಗಳ ಕುರಿತು ಚರ್ಚಿಸಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಸಂಸದ ಚೌಟ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಕಾಮಗಾರಿಗಳ ಕುರಿತು ಚರ್ಚಿಸಿದ್ದು, ಶಿರಾಡಿ ಘಾಟಿಯ ಮೂಲಕ ಹಾದು ಹೋಗುವ ಮಂಗಳೂರು – ಬೆಂಗಳೂರು ನಡುವಿನ ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆಗೊಳಿಸಲು ಕೈಗೊಳ್ಳಬಹುದಾದ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಕೇಳಿಕೊಂಡಿದ್ದಾರೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ದೆಹಲಿಯ ಸಚಿವಾಲಯದಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡದಲ್ಲಿ ಪೆಟ್ರೋಲಿಯಂ ಇಲಾಖೆಗೆ ಸಂಬಂಧಿಸಿದ ಮತ್ತು ಜಿಲ್ಲೆಯ ಅಭಿವೃದ್ಧಿ ವಿಷಯಗಳಿಗೆ ಸ್ಪಂದಿಸುವಂತೆ ಕೇಳಿಕೊಂಡರು. ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಸ್ಥಾಪಿಸುವ ಸಾಧ್ಯತೆಗಳ ಬಗ್ಗೆ ಹಾಗೂ ಅದರಿಂದ ಸೃಷ್ಟಿಯಾಗುವ ಉದ್ಯೋಗಗಳನ್ನು ಸ್ಥಳೀಯರಿಗೆ ನೀಡುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದರು.
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಾರ್ಗದರ್ಶನ ಮತ್ತು ಸಹಕಾರ ನೀಡುವಂತೆ ಮನವಿ ಮಾಡಿದರು.
Mangalore MP Brijesh Chowta meets central ministers, seeks helps in development of Dakshina Kannada
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 04:09 pm
HK News Desk
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
18-06-25 06:38 pm
Mangalore Correspondent
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm