ಬ್ರೇಕಿಂಗ್ ನ್ಯೂಸ್
06-07-24 01:41 pm Mangalore Correspondent ಕರಾವಳಿ
ಮಂಗಳೂರು, ಜುಲೈ.6: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಮಾಜವಾದಕ್ಕೆ ತಿಲಾಂಜಲಿ ಇಟ್ಟಿದ್ದು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಮೂಡಾ ಸೈಟ್ ಮಾರಾಟ ಪ್ರಕರಣದಲ್ಲಿ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ ರವಿ ಕುಮಾರ್ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿಗಳು ಸಮಾಜವಾದ ಹಿನ್ನೆಲೆಯಿಂದ ಬಂದವರು ಅಂತ ಹೇಳಿಕೊಳ್ಳುತ್ತಿದ್ದರು. ನನಗೂ ಭ್ರಷ್ಟಾಚಾರಕ್ಕೂ ಸಾಸಿವೆ ಕಾಳಷ್ಟು ಸಂಬಂಧ ಇಲ್ಲ ಎಂದು ಹೇಳುತ್ತಾ ಬಂದಿದ್ದರು. ಆದರೆ ಎರಡನೇ ಬಾರಿಗೆ ಸಿಎಂ ಆಗಿರುವ ಸಿದ್ದರಾಮಯ್ಯ ಸಮಾಜವಾದಕ್ಕೆ ತಿಲಾಂಜಲಿ ಇಟ್ಟಿದ್ದಾರೆ. ಮೈಸೂರು ಮೂಡಾದಲ್ಲಿ ತನ್ನ ಪತ್ನಿಗೆ 14 ಸೈಟು ಮಾಡಿಸಿಕೊಡ್ತಾರೆ. 35 ಕೋಟಿ ಕೊಟ್ಟು 14 ಸೈಟು ತಗೋಳ್ತಾರೆ ಅಂದ್ರೆ ಇವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ನೀವು ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ನಿಮ್ಮ ಸಮಾಜವಾದ ಆದರ್ಶ ಎಲ್ಲಿ ಹೋಯ್ತು ಎಂದು ಪ್ರಶ್ನಿಸಿದ ರವಿಕುಮಾರ್, ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಎಸ್ಸಿ ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟ ಹಣ ಹೇಗೆ ಗ್ಯಾರಂಟಿಗೆ ಬಳಸುತ್ತೀರಾ? ಎಸ್ ಸಿ ಗಳಿಗೆ, ಎಸ್ಟಿ ಗಳಿಗೆ ದಲಿತರಿಗೆ ಮಹಾ ದ್ರೋಹ ಮಾಡಿದ ಸಿಎಂ ಎಂದರೆ ಅದು ಸಿದ್ದರಾಮಯ್ಯ. ಬಹಳ ಬುದ್ಧಿವಂತರಾದ ಸಿದ್ದರಾಮಯ್ಯ, ಆರ್ಥಿಕ ತಜ್ಞ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ, 4ರಿಂದ 5 ಲಕ್ಷ ಬೆಲೆ ಬಾಳುವ ಜಮೀನನ್ನ ಮೂಡಾಕ್ಕೆ ಕೊಟ್ಟು ಈಗ 62 ಕೋಟಿ ರೂಪಾಯಿ ಕೇಳ್ತಾ ಇದ್ದಾರೆ. ಇಡೀ ರಾಜ್ಯದಲ್ಲಿ ಈ ಹಿಂದೆ ರೈತರು ಕಡಿಮೆ ಬೆಲೆಗೆ ಜಮೀನನ್ನು ಕೊಟ್ಟಿದ್ದಾರೆ. ಈಗ ಅದು ಕೋಟ್ಯಂತರ ಮೌಲ್ಯದ ಫ್ಲಾಟ್ ಸೈಟ್ ಆಗಿ ಪರಿವರ್ತನೆಯಾಗಿದೆ.
ಈಗ ಆ ಎಲ್ಲಾ ರೈತರು ಅಷ್ಟೇ ಮೊತ್ತ ಕೇಳಿದ್ರೆ ಕೋಟಿ ಕೊಡ್ತೀರಾ? ನೀವು ಭ್ರಷ್ಟ ಮುಖ್ಯಮಂತ್ರಿಯಾಗಿದ್ದೀರಿ, ಮಹರ್ಷಿ ವಾಲ್ಮೀಕಿ ನಿಗಮದ ಹಣವನ್ನ ಬೇರೆ ರಾಜ್ಯದ ಚುನಾವಣೆಗೆ ಬಳಸಿಕೊಂಡಿದ್ದೀರಿ. 700 ಅಕೌಂಟ್ ಗಳಿಗೆ ಹಣ ಸಂದಾಯ ಮಾಡಿ ಡ್ರಾ ಮಾಡಿಸಿದ್ದೀರಿ. ವಾಲ್ಮೀಕಿ ನಿಗಮದ ಹಗರಣದ ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ಕೊಟ್ರು. ನೀವು ಈಗ ಸೈಟ್ ಗಳಲ್ಲಿ ಭ್ರಷ್ಟಾಚಾರ ಮಾಡಿದ್ದೀರಾ.. ನೀವು ಕೂಡ ರಾಜೀನಾಮೆ ಕೊಟ್ಟು ಮಾತನಾಡಿ ಎಂದು ಆಗ್ರಹಿಸಿದರು.
Siddaramaiah’s wife lost land worth Rs 57 crore to MUDA, cm should resign says MLC Ravi Kumar in Mangalore. Siddaramaiah’s wife is ready to return the alternative sites provided by MUDA, if the authority returns her 3.16 acres land at Kesare village, A S Ponnanna, the legal adviser to chief minister said.
17-04-25 05:01 pm
Bangalore Correspondent
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
ಒಂದನೇ ತರಗತಿಗೆ ಪ್ರವೇಶ ; ಈ ವರ್ಷಕ್ಕೆ ಮಾತ್ರ ಮಕ್ಕಳ...
16-04-25 09:07 pm
Bigg Boss Kannada, Rajath arrested: ರೀಲ್ಸ್ ಶೋ...
16-04-25 06:42 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
17-04-25 11:06 pm
Mangalore Correspondent
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
Mangalore, Bantwal Accident, Melroy D’Sa: ಬಂಟ...
16-04-25 10:58 pm
Mangalore Traffic diversion, Anti Waqf bill p...
16-04-25 08:22 pm
17-04-25 09:56 pm
Mangalore Correspondent
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm
Sullia, Drugs, Mangalore, Ccb Police; ದೆಹಲಿಯಿ...
17-04-25 11:39 am
Air Hostess, ICU, Sexual Harrasment: ICU ನಲ್ಲ...
15-04-25 10:24 pm
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm