ಬ್ರೇಕಿಂಗ್ ನ್ಯೂಸ್
07-07-24 10:43 pm Mangalore Correspondent ಕರಾವಳಿ
ಮಂಗಳೂರು, ಜುಲೈ 7: ರಾಜ್ಯಾದ್ಯಂತ ಡೆಂಗ್ಯು ವ್ಯಾಪಕವಾಗಿ ಹರಡುತ್ತಿದ್ದು ಈಗಾಗಲೇ ಸೋಂಕಿತರ ಸಂಖ್ಯೆ 7000 ಸಮೀಪಿಸಿದ್ದು, ಸೋಂಕಿಗೆ ಬಲಿಯಾಗುತ್ತಿರುವ ಪ್ರಕರಣಗಳೂ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ ವಹಿಸುವುದನ್ನು ಬಿಟ್ಟು ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.
ಕೋವಿಡ್ ಮಹಾಮಾರಿ ಏನು ಎಂಬುದೇ ಗೊತ್ತಿಲ್ಲದೇ ಇಡೀ ಜಗತ್ತಿನ ಜನರು ಭಯಭೀತರಾಗಿ ತತ್ತರಿಸಿ ಹೋಗಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಯಡಿಯೂರಪ್ಪ ಹಾಗೂ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸಮರ್ಥವಾಗಿ ಎಲ್ಲವನ್ನು ನಿರ್ವಹಿಸಿ ಜಗತ್ತಿನಾದ್ಯಂತ ಪ್ರಶಂಸೆಗೊಳಗಾಗಿತ್ತು. ಆಗ ಸರ್ಕಾರವನ್ನು ಟೀಕಿಸುವುದರಲ್ಲೇ ಕಾಲ ಕಳೆದ ಕಾಂಗ್ರೆಸ್ ಇಂದು ಹಲವು ವರ್ಷಗಳಿಂದ ಸಾಮಾನ್ಯ ರೋಗವಾಗಿರುವ ಡೆಂಗ್ಯೂ ನಿಯಂತ್ರಣದ ವಿಷಯದಲ್ಲೇ ವಿಫಲವಾಗಿ ರಾಜ್ಯದ ಜನತೆ ಮುಂದೆ ತಲೆತಗ್ಗಿಸಿ ನಿಂತಿದೆ. ಈ ಸೋಂಕಿಗೆ ಮುನ್ನೆಚ್ಚರಿಕೆ ಸಹಿತ ಅಗತ್ಯ ಕ್ರಮಗಳನ್ನು ವಹಿಸಿದ್ದರೂ ಸಾಕಿತ್ತು. ಅದನ್ನೂ ಸಹ ಮಾಡದೇ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿದ ಪರಿಣಾಮ ನಾಡಿನ ಜನಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಆರೋಪಿಸಿದರು.
ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಉಳಿದ ರಾಜ್ಯಗಳು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೂ ಕರ್ನಾಟಕ ಸರ್ಕಾರ ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳುತ್ತಿಲ್ಲ. ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಹೊರತಾಗಿಯೂ ಖಾಸಗಿ ಆಸ್ಪತ್ರೆಗಳು ಮತ್ತು ಪ್ರಯೋಗಾಲಯಗಳು ಡೆಂಗ್ಯೂ ಪರೀಕ್ಷೆಗೆ ಸಾರ್ವಜನಿಕರಿಂದ ದುಬಾರಿ ದರವನ್ನು ವಿಧಿಸುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಈ ಎಲ್ಲದರ ಬಗ್ಗೆಯೂ ಹೆಚ್ಚಿನ ಗಮನ ಹರಿಸಬೇಕು. ಜನರ ಆರೋಗ್ಯದ ವಿಷಯದಲ್ಲಿ ಸಣ್ಣ ನಿರ್ಲಕ್ಷ್ಯಕ್ಕೂ ಆಸ್ಪದ ಬೇಡ. ಜಿಲ್ಲೆಯಲ್ಲಿ ಆರಂಭವಾಗಲಿರುವ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ಪ್ರಕ್ರಿಯೆ, ಹೆಸರಿಗೆ ಮಾತ್ರವಲ್ಲದೇ ಪರಿಣಾಮಕಾರಿ ಆಗಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು. ನೀರಿನ ಟಬ್, ಸಿಂಟೆಕ್ಸ್, ಬಕೆಟ್ ಗಳಲ್ಲಿ ಈಡಿಸ್ ಸೊಳ್ಳೆಯ ಲಾರ್ವಾಗಳು ಕಂಡುಬರುತ್ತಿದ್ದು , ನೀರು ಸಂಗ್ರಹಿಸಿ ಇಡುವಾಗ ಎಚ್ಚರಿಕೆ ವಹಿಸುವಂತೆ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
Dengue fever, Mangalore mla Vedvyas kamath demands medical emergency. Even after rise in dengue fever cases government is not taking any precaution he added.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm