ಬ್ರೇಕಿಂಗ್ ನ್ಯೂಸ್
09-07-24 10:12 pm Mangalore Correspondent ಕರಾವಳಿ
ಮಂಗಳೂರು, ಜುಲೈ.9: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯು ಪ್ರಕರಣಗಳು ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪಾಲಿಕೆಯ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪಾಲಿಕೆಯ ಸದಸ್ಯರ ವಿಶೇಷ ಸಭೆ ಕರೆದಿದ್ದರು. ಇಲಾಖೆ ಅಧಿಕಾರಿಗಳು ಡೆಂಗ್ಯು ನಿಯಂತ್ರಣದ ಬಗ್ಗೆ ಸರಿಯಾದ ಮುಂಜಾಗ್ರತೆ ವಹಿಸಿರದೇ ಇದ್ದುದನ್ನು ಕೇಳಿ ಸಂಸದರು ಗರಂ ಆಗಿದ್ದಾರೆ.
ಡೆಂಗ್ಯು ನಿಯಂತ್ರಣಕ್ಕೆ ಸಂಬಂಧಿಸಿ ಪಾಲಿಕೆಯೇ ಗೊಂದಲದಲ್ಲಿ ಇರುವಂತೆ ತೋರುತ್ತಿದೆ. ರೋಗದ ಬಗ್ಗೆ ಮಾಹಿತಿ ಪಡೆಯಲು ಅಥವಾ ಅದನ್ನು ಸಂಗ್ರಹಿಸುವ ಬಗ್ಗೆ ನಿಮ್ಮಲ್ಲಿ ಮುಂದಾಲೋಚನೆಯೇ ಇಲ್ಲ. ಡೆಂಗ್ಯು ರೋಗ ಎಲ್ಲ ಕಡೆ ಹಬ್ಬುತ್ತಿದ್ದರೆ, ನೀವು ಏನೂ ಆಗಿಯೇ ಇಲ್ಲ ಎಂಬಂತೆ ಇದ್ದೀರಿ. ಡೆಂಗ್ಯು ರೋಗ ನಿಯಂತ್ರಣಕ್ಕೆ ಸೂಕ್ತ ಮುನ್ನೆಚ್ಚರಿಕೆ ಮತ್ತು ನಿರ್ದಿಷ್ಟ ಯೋಜನೆಯ ಅಗತ್ಯವಿದೆ. ಕನಿಷ್ಠ ಒಂದು ಕಂಟ್ರೋಲ್ ರೂಮ್ ಅನ್ನಾದರೂ ಇಟ್ಟುಕೊಳ್ಳಬೇಕಲ್ವಾ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮತ್ತು ಪಾಲಿಕೆಯ ಮೇಯರ್ ಅವರಲ್ಲಿ ಸಂಸದ ಚೌಟ ಪ್ರಶ್ನೆ ಮಾಡಿದರು.



ಪಾಲಿಕೆ ವ್ಯಾಪ್ತಿಯಲ್ಲಿ 118 ಪ್ರಕರಣ ಪತ್ತೆಯಾಗಿದ್ದು, ಬಿಜೈ ಹಾಗೂ ಬಂದರು ವಾರ್ಡ್ನಲ್ಲಿ ಡೆಂಗ್ಯು ಹೆಚ್ಚು ಕಂಡುಬಂದಿದೆ ಎಂಬ ವಿಚಾರ ಪಾಲಿಕೆಯ ಸದಸ್ಯರ ಆತಂಕಕ್ಕೆ ಕಾರಣವಾಯಿತು. ಪಾಲಿಕೆ ಸದಸ್ಯ ಎ.ಸಿ.ವಿನಯರಾಜ್ ಮಾತನಾಡಿ, 2014ರಲ್ಲಿ ಮಲೇರಿಯಾ ಉಲ್ಬಣಿಸಿದಾಗ ತಜ್ಞರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದಲ್ಲದೆ, ಆ್ಯಪ್ ಮೂಲಕ ಕಾರ್ಯಾಚರಣೆ ನಡೆಸಿದ್ದನ್ನು ನೆನಪಿಸಿಕೊಂಡರು. ಮತ್ತೆ ಆ್ಯಪ್ ಬಳಕೆಗೆ ತರಬೇಕು. ಸ್ಮಾರ್ಟ್ ಸಿಟಿಯಿಂದ 60 ಕೋಟಿ ರೂ. ಖರ್ಚು ಮಾಡಿ ಕಮಾಂಡ್ ಕಂಟ್ರೋಲ್ ರೂಂ ತೆರೆಯಲಾಗಿದೆ. ಅದನ್ನು ಡೆಂಗ್ಯು ನಿಯಂತ್ರಣ ಕಾರ್ಯಕ್ಕೆ ಬಳಸಿಕೊಳ್ಳುವಂತೆ ಸಲಹೆ ಮಾಡಿದರು.
ಸಭೆಯಲ್ಲಿ ಕೇಳಿಬಂದ ಸಲಹೆ, ಅಭಿಪ್ರಾಯಗಳನ್ನು ಆಲಿಸಿದ ಮೇಯರ್ ಸುಧೀರ್ ಶೆಟ್ಟಿ, ಕೂಡಲೇ ತಜ್ಞ ವೈದ್ಯರ ಸಮಿತಿ ರಚಿಸುವುದಲ್ಲದೆ, ಆ್ಯಪ್ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು. ಆರೋಗ್ಯ ಇಲಾಖೆಯ ಅಧಿಕಾರಿ ಡಾ.ನವೀನಚಂದ್ರ ಕುಲಾಲ್ ನೇತೃತ್ವದಲ್ಲಿ ತಜ್ಞ ವೈದ್ಯರು, ವೈದ್ಯಕೀಯ ಕಾಲೇಜು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತರನ್ನು ಒಳಗೊಂಡ ಸಮಿತಿ ರಚಿಸುವುದು ಹಾಗೂ ಹಿಂದೆ ಇದ್ದ ಮಲೇರಿಯಾ ಆ್ಯಪ್ ಮತ್ತೆ ಚಾಲ್ತಿಗೆ ತರಲಾಗುವುದು ಎಂದರು.
ಸರ್ಕಿಟ್ ಹೌಸ್ನಲ್ಲೇ ಸೊಳ್ಳೆ ಉತ್ಪತ್ತಿ
ವಲಸೆ ಕಾರ್ಮಿಕರು ನೆಲೆಸಿರುವ ಕಡೆ ಡೆಂಗ್ಯು ವ್ಯಾಪಕವಾಗಿದ್ದು, ಬಡ ಕಾರ್ಮಿಕರ ತಪಾಸಣೆಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸದಸ್ಯ ಅನಿಲ್ ಕುಮಾರ್ ಆಗ್ರಹಿಸಿದರು. ಪಾಲಿಕೆಯ ಆರೋಗ್ಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದಾಗಿ ವಿಐಪಿಗಳು ತಂಗುವ ಸರ್ಕಿಟ್ ಹೌಸ್ ಕೂಡಾ ಸೊಳ್ಳೆ ಉತ್ಪತ್ತಿ ತಾಣವಾಗಿ ಮಾರ್ಪಟ್ಟಿದೆ ಎಂದು ನವೀನ್ ಡಿಸೋಜ ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ವೇದವ್ಯಾಸ ಕಾಮತ್ ಪ್ರತಿಕ್ರಿಯಿಸಿ, ಹಿಂದೆ ಇದ್ದ ಆ್ಯಪ್ ಅಭಿವೃದ್ಧಿ ಪಡಿಸುವ ಜತೆಗೆ ಸಾರ್ವಜನಿಕರಿಗೆ ಲಭ್ಯವಾಗುವ ರೀತಿಯಲ್ಲಿ ಕಂಟ್ರೋಲ್ ರೂಂ ಕಾರ್ಯಾಚರಣೆ ಆಗಬೇಕು ಎಂದರು. ಸಭೆಯಲ್ಲಿ ಉಪ ಮೇಯರ್ ಸುನೀತಾ, ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಮನಪಾ ಆಯುಕ್ತ ಆನಂದ್ ಸಿ.ಎಲ್ ಉಪಸ್ಥಿತರಿದ್ದರು. ಸಭೆ ಮುಗಿದ ಬಳಿಕ ಪಾಲಿಕೆಯ ಕಟ್ಟಡದಲ್ಲಿರುವ ಸ್ಮಾರ್ಟ್ ಸಿಟಿ ಕಚೇರಿಗೆ ತೆರಳಿದ ಸಂಸದ ಬ್ರಿಜೇಶ್ ಚೌಟ ಅಲ್ಲಿಯೇ ಡೆಂಗ್ಯು ನಿಯಂತ್ರಣ ಕೊಠಡಿ ಸ್ಥಾಪಿಸುವಂತೆ ಸೂಚನೆ ನೀಡಿದರು.
Mangalore Dengue precautions, highest case from bejai and bunder area, Mp Brijesh Chowta Angry on officers negligence. The Mangaluru City Corporation (MCC), in collaboration with the health department, convened at Mangala Auditorium, MCC office, Mangaluru, on Tuesday, July 9, to discuss dengue prevention and awareness measures
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm