ಬ್ರೇಕಿಂಗ್ ನ್ಯೂಸ್
07-12-20 01:03 pm Mangalore Correspondent ಕರಾವಳಿ
ಮಂಗಳೂರು, ಡಿ.7 : ಕೊರೊನಾ ಬಳಿಕ ನಿಂತು ಹೋಗಿದ್ದ ಮಂಗಳೂರು- ಬೆಂಗಳೂರು ನಡುವಿನ ನಡುವೆ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ಮತ್ತೆ ಆರಂಭಗೊಂಡಿದೆ.
ಈ ರೈಲು ವಾರದಲ್ಲಿ ನಾಲ್ಕು ದಿನಗಳ ಕಾಲ ಪ್ರಯಾಣಿಕರಿಗೆ ಸೇವೆ ನೀಡಲಿವೆ. ಬೆಂಗಳೂರು- ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ (06515) ರೈಲು ಬೆಂಗಳೂರು ರೈಲು ನಿಲ್ದಾಣದಿಂದ ಪ್ರತೀ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಪ್ರಯಾಣ ಬೆಳೆಸಲಿದೆ. ಈ ರೈಲು ಸೇವೆಯು ಡಿ.8ರಿಂದ 24ರವರೆಗೆ ಸಾರ್ವಜನಿಕ ಸೇವೆಗೆ ಮುಕ್ತವಾಗಿ ಸಿಗಲಿದೆ.
ಇದೇ ವೇಳೆ, ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಹೊರಡುವ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ರಾತ್ರಿ 10:30ಕ್ಕೆ ಪ್ರಯಾಣ ಆರಂಭಿಸಲಿದ್ದು, ಯಶವಂತಪುರ (10:40), ಕುಣಿಗಲ್ (11:39), ಬಿ.ಜಿ. ನಗರ (12:04), ಶ್ರವಣ ಬೆಳಗೊಳ (12:29), ಚೆನ್ನರಾಯಪಟ್ಟಣ (12:39), ಹಾಸನ (1:40), ಸಕಲೇಶಪುರ (2:40), ಸುಬ್ರಹ್ಮಣ್ಯ (5:35), ಕಬಕ ಪುತ್ತೂರು (6:23), ಬಂಟ್ವಾಳ (6:53), ಮಂಗಳೂರು ಜಂಕ್ಷನ್ (7:30), ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಬೆಳಗ್ಗೆ 8:35ಕ್ಕೆ ತಲುಪಲಿದೆ.
ಮಂಗಳೂರು ಸೆಂಟ್ರಲ್ನಿಂದ ಬೆಂಗಳೂರಿಗೆ ಹೊರಡುವ ರೈಲು (06516) ಕೂಡ ನಾಲ್ಕು ದಿನಗಳ ಕಾಲ ಸೇವೆ ನೀಡಲಿದೆ. ಮಂಗಳವಾರ, ಬುಧವಾರ, ಶುಕ್ರವಾರ, ರವಿವಾರ ಈ ರೈಲು ಓಡಾಡಲಿದೆ. ಡಿ.9ರಿಂದ 25ರವರೆಗೆ ಈ ವಿಶೇಷ ರೈಲಿನ ಸೇವೆ ಲಭ್ಯವಾಗಲಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ರಾತ್ರಿ 7 ಗಂಟೆಗೆ ಪ್ರಯಾಣ ಆರಂಭಿಸಲಿದೆ. ಅಲ್ಲಿಂದ ಮಂಗಳೂರು ಜಂಕ್ಷನ್ (8:23), ಬಂಟ್ವಾಳ (8:54), ಕಬಕ ಪುತ್ತೂರು (9:19), ಸುಬ್ರಹ್ಮಣ್ಯ (10:10) ಸಕಲೇಶಪುರ (1:45), ಹಾಸನ (2:55), ಚೆನ್ನರಾಯಪಟ್ಟಣ (3:44), ಬಿ.ಜಿ.ನಗರ (4:29), ಕುಣಿಗಲ್ (4:59), ಯಶವಂತಪುರ (6:28), ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣವನ್ನು ಬೆಳಗ್ಗೆ 7 ಗಂಟೆಗೆ ತಲುಪಲಿದೆ.
ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ನೀಡುವ ರೈಲುಗಳು ಒಂದು ಎಸಿ 2-ಟೈರ್ ಕೋಚ್, ಒಂದು ಎಸಿ 3-ಟೈರ್ ಕೋಚ್, ಏಳು ಸೆಕೆಂಡ್ ಕ್ಲಾಸ್ ಸ್ಲೀಪರ್ ಕೋಚೆಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಕೋಚೆಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಕೋಚೆಸ್, ಜೊತೆಗೆ ಲಗೇಜ್ ಬೋಗಿಯನ್ನು ಒಳಗೊಂಡಿರಲಿವೆ ಎಂದು ಭಾರತೀಯ ನೈರುತ್ಯ ರೈಲ್ವೆಯ ಪಾಲಕ್ಕಾಡ್ ವಿಭಾಗದ ಪ್ರಕಟನೆ ತಿಳಿಸಿದೆ.
Mangalore - Bangalore Train services that were halted due to Coronavirus Lockdown is now going to resume from December 8, 2020.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm