ಬ್ರೇಕಿಂಗ್ ನ್ಯೂಸ್
07-12-20 01:03 pm Mangalore Correspondent ಕರಾವಳಿ
ಮಂಗಳೂರು, ಡಿ.7 : ಕೊರೊನಾ ಬಳಿಕ ನಿಂತು ಹೋಗಿದ್ದ ಮಂಗಳೂರು- ಬೆಂಗಳೂರು ನಡುವಿನ ನಡುವೆ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ಮತ್ತೆ ಆರಂಭಗೊಂಡಿದೆ.
ಈ ರೈಲು ವಾರದಲ್ಲಿ ನಾಲ್ಕು ದಿನಗಳ ಕಾಲ ಪ್ರಯಾಣಿಕರಿಗೆ ಸೇವೆ ನೀಡಲಿವೆ. ಬೆಂಗಳೂರು- ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ (06515) ರೈಲು ಬೆಂಗಳೂರು ರೈಲು ನಿಲ್ದಾಣದಿಂದ ಪ್ರತೀ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಪ್ರಯಾಣ ಬೆಳೆಸಲಿದೆ. ಈ ರೈಲು ಸೇವೆಯು ಡಿ.8ರಿಂದ 24ರವರೆಗೆ ಸಾರ್ವಜನಿಕ ಸೇವೆಗೆ ಮುಕ್ತವಾಗಿ ಸಿಗಲಿದೆ.

ಇದೇ ವೇಳೆ, ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಹೊರಡುವ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ರಾತ್ರಿ 10:30ಕ್ಕೆ ಪ್ರಯಾಣ ಆರಂಭಿಸಲಿದ್ದು, ಯಶವಂತಪುರ (10:40), ಕುಣಿಗಲ್ (11:39), ಬಿ.ಜಿ. ನಗರ (12:04), ಶ್ರವಣ ಬೆಳಗೊಳ (12:29), ಚೆನ್ನರಾಯಪಟ್ಟಣ (12:39), ಹಾಸನ (1:40), ಸಕಲೇಶಪುರ (2:40), ಸುಬ್ರಹ್ಮಣ್ಯ (5:35), ಕಬಕ ಪುತ್ತೂರು (6:23), ಬಂಟ್ವಾಳ (6:53), ಮಂಗಳೂರು ಜಂಕ್ಷನ್ (7:30), ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಬೆಳಗ್ಗೆ 8:35ಕ್ಕೆ ತಲುಪಲಿದೆ.
ಮಂಗಳೂರು ಸೆಂಟ್ರಲ್ನಿಂದ ಬೆಂಗಳೂರಿಗೆ ಹೊರಡುವ ರೈಲು (06516) ಕೂಡ ನಾಲ್ಕು ದಿನಗಳ ಕಾಲ ಸೇವೆ ನೀಡಲಿದೆ. ಮಂಗಳವಾರ, ಬುಧವಾರ, ಶುಕ್ರವಾರ, ರವಿವಾರ ಈ ರೈಲು ಓಡಾಡಲಿದೆ. ಡಿ.9ರಿಂದ 25ರವರೆಗೆ ಈ ವಿಶೇಷ ರೈಲಿನ ಸೇವೆ ಲಭ್ಯವಾಗಲಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಡುವ ರೈಲು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ರಾತ್ರಿ 7 ಗಂಟೆಗೆ ಪ್ರಯಾಣ ಆರಂಭಿಸಲಿದೆ. ಅಲ್ಲಿಂದ ಮಂಗಳೂರು ಜಂಕ್ಷನ್ (8:23), ಬಂಟ್ವಾಳ (8:54), ಕಬಕ ಪುತ್ತೂರು (9:19), ಸುಬ್ರಹ್ಮಣ್ಯ (10:10) ಸಕಲೇಶಪುರ (1:45), ಹಾಸನ (2:55), ಚೆನ್ನರಾಯಪಟ್ಟಣ (3:44), ಬಿ.ಜಿ.ನಗರ (4:29), ಕುಣಿಗಲ್ (4:59), ಯಶವಂತಪುರ (6:28), ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣವನ್ನು ಬೆಳಗ್ಗೆ 7 ಗಂಟೆಗೆ ತಲುಪಲಿದೆ.
ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಸೇವೆ ನೀಡುವ ರೈಲುಗಳು ಒಂದು ಎಸಿ 2-ಟೈರ್ ಕೋಚ್, ಒಂದು ಎಸಿ 3-ಟೈರ್ ಕೋಚ್, ಏಳು ಸೆಕೆಂಡ್ ಕ್ಲಾಸ್ ಸ್ಲೀಪರ್ ಕೋಚೆಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್ ಕೋಚೆಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಕೋಚೆಸ್, ಜೊತೆಗೆ ಲಗೇಜ್ ಬೋಗಿಯನ್ನು ಒಳಗೊಂಡಿರಲಿವೆ ಎಂದು ಭಾರತೀಯ ನೈರುತ್ಯ ರೈಲ್ವೆಯ ಪಾಲಕ್ಕಾಡ್ ವಿಭಾಗದ ಪ್ರಕಟನೆ ತಿಳಿಸಿದೆ.
Mangalore - Bangalore Train services that were halted due to Coronavirus Lockdown is now going to resume from December 8, 2020.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 06:42 pm
HK News Staffer
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm