ಬ್ರೇಕಿಂಗ್ ನ್ಯೂಸ್
15-07-24 08:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 15: ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯಿಂದ ಜುಲೈ 16ರ ವರೆಗೂ ರೆಡ್ ಅಲರ್ಟ್ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ಜುಲೈ 16ರಂದು ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಮುಂಡಗೋಡ, ಹಳಿಯಾಳ ತಾಲೂಕು ಹೊರತುಪಡಿಸಿ ಉಳಿದ ಹತ್ತು ತಾಲೂಕುಗಳಲ್ಲಿ ಶಾಲೆ, ಕಾಲೇಜುಗಳಿಗೆ ಜುಲೈ 16ರಂದು ರಜೆ ಘೋಷಣೆ ಮಾಡಲಾಗಿದೆ. ಸೋಮವಾರ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿ ರಜೆ ನೀಡಿದ್ದರಿಂದ ಮಕ್ಕಳಿಗೆ ಸ್ವಲ್ಪಮಟ್ಟಿಗೆ ಗೊಂದಲ ಆಗಿತ್ತು. ಬೆಳಗ್ಗೆ 6.30ರ ವೇಳೆಗೆ ರಜೆಯ ಆದೇಶದ ಪ್ರಕಟಣೆ ನೀಡಲಾಗಿತ್ತು. ಅದು ಜನಸಾಮಾನ್ಯರಿಗೆ ತಲುಪುವ ಹೊತ್ತಿಗೆ ಕೆಲವು ಕಡೆ ಮಕ್ಕಳು ಶಾಲೆಗೆ ಹೊರಟಾಗಿತ್ತು. ಅನಂತರ, ಶಾಲೆಗಳಿಗೆ ಹಿಂತಿರುಗಿದ ವಿದ್ಯಮಾನವೂ ಆಗಿತ್ತು. ಸೋಮವಾರ ಇಡೀ ದಿನ ಮಳೆಗಿಂತ ಗಾಳಿಯೇ ಜೋರಾಗಿತ್ತು. ಬೆಳಗ್ಗೆ 9 ಗಂಟೆ ಸುಮಾರಿಗೆ ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಬಿರುಸಿನ ಮಳೆಯಾಗಿತ್ತು. ಆನಂತರ, ಮಳೆಗೆ ಕೊಂಚ ಬಿಡುವು ಇತ್ತಾದರೂ, ಗಾಳಿ ಆಗಿಂದಾಗ್ಗೆ ಜೋರಾಗಿಯೇ ಬೀಸುತ್ತಿತ್ತು.
ಸಂಜೆ ಹೊತ್ತಿಗೆ, ಜುಲೈ 16ರ ಮಂಗಳವಾರವೂ ರೆಡ್ ಅಲರ್ಟ್ ನೀಡಿದ್ದು, ಹೀಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ. ಈ ಬಾರಿ ಕಳೆದೊಂದು ತಿಂಗಳಲ್ಲಿ ಮಳೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ದಿನ ರಜೆ ನೀಡಲಾಗಿದ್ದು, ಮಕ್ಕಳ ಪಾಲಿಗೆ ನೆಚ್ಚಿನ ಡಿಸಿಯಾಗಿ ಮುಲ್ಲೈ ಮುಗಿಲನ್ ಹೆಸರು ಪಡೆದಿದ್ದಾರೆ.
Due to high rainfall in the twin districts a holiday has been declared in Dakshina Kannada and Udupi districts for schools and pre-university colleges on Tuesday, July 16.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm