ಬ್ರೇಕಿಂಗ್ ನ್ಯೂಸ್
15-07-24 08:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 15: ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯಿಂದ ಜುಲೈ 16ರ ವರೆಗೂ ರೆಡ್ ಅಲರ್ಟ್ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ಜುಲೈ 16ರಂದು ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಮುಂಡಗೋಡ, ಹಳಿಯಾಳ ತಾಲೂಕು ಹೊರತುಪಡಿಸಿ ಉಳಿದ ಹತ್ತು ತಾಲೂಕುಗಳಲ್ಲಿ ಶಾಲೆ, ಕಾಲೇಜುಗಳಿಗೆ ಜುಲೈ 16ರಂದು ರಜೆ ಘೋಷಣೆ ಮಾಡಲಾಗಿದೆ. ಸೋಮವಾರ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿ ರಜೆ ನೀಡಿದ್ದರಿಂದ ಮಕ್ಕಳಿಗೆ ಸ್ವಲ್ಪಮಟ್ಟಿಗೆ ಗೊಂದಲ ಆಗಿತ್ತು. ಬೆಳಗ್ಗೆ 6.30ರ ವೇಳೆಗೆ ರಜೆಯ ಆದೇಶದ ಪ್ರಕಟಣೆ ನೀಡಲಾಗಿತ್ತು. ಅದು ಜನಸಾಮಾನ್ಯರಿಗೆ ತಲುಪುವ ಹೊತ್ತಿಗೆ ಕೆಲವು ಕಡೆ ಮಕ್ಕಳು ಶಾಲೆಗೆ ಹೊರಟಾಗಿತ್ತು. ಅನಂತರ, ಶಾಲೆಗಳಿಗೆ ಹಿಂತಿರುಗಿದ ವಿದ್ಯಮಾನವೂ ಆಗಿತ್ತು. ಸೋಮವಾರ ಇಡೀ ದಿನ ಮಳೆಗಿಂತ ಗಾಳಿಯೇ ಜೋರಾಗಿತ್ತು. ಬೆಳಗ್ಗೆ 9 ಗಂಟೆ ಸುಮಾರಿಗೆ ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಬಿರುಸಿನ ಮಳೆಯಾಗಿತ್ತು. ಆನಂತರ, ಮಳೆಗೆ ಕೊಂಚ ಬಿಡುವು ಇತ್ತಾದರೂ, ಗಾಳಿ ಆಗಿಂದಾಗ್ಗೆ ಜೋರಾಗಿಯೇ ಬೀಸುತ್ತಿತ್ತು.
ಸಂಜೆ ಹೊತ್ತಿಗೆ, ಜುಲೈ 16ರ ಮಂಗಳವಾರವೂ ರೆಡ್ ಅಲರ್ಟ್ ನೀಡಿದ್ದು, ಹೀಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ. ಈ ಬಾರಿ ಕಳೆದೊಂದು ತಿಂಗಳಲ್ಲಿ ಮಳೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ದಿನ ರಜೆ ನೀಡಲಾಗಿದ್ದು, ಮಕ್ಕಳ ಪಾಲಿಗೆ ನೆಚ್ಚಿನ ಡಿಸಿಯಾಗಿ ಮುಲ್ಲೈ ಮುಗಿಲನ್ ಹೆಸರು ಪಡೆದಿದ್ದಾರೆ.
Due to high rainfall in the twin districts a holiday has been declared in Dakshina Kannada and Udupi districts for schools and pre-university colleges on Tuesday, July 16.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am