ಬ್ರೇಕಿಂಗ್ ನ್ಯೂಸ್
07-12-20 01:43 pm Mangalore Correspondent ಕರಾವಳಿ
ಮಂಗಳೂರು, ಡಿಸೆಂಬರ್, 7: NCTE ಮಾನದಂಡ ನೆಪದಲ್ಲಿ ಸ್ಥಗಿತಗೊಳಿಸಲು ಉದ್ದೇಶಿಸಿದ್ದ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ವೃತ್ತಿಪರ ಶಿಕ್ಷಣ (B.P.Ed) ಕೋರ್ಸ್ ಅನ್ನು ಕ್ರೀಡಾ ಪ್ರೇಮಿಗಳ ಒಕ್ಕೊರಳ ಅಭಿಯಾನದ ಫಲವಾಗಿ ಮುಂದುವರಿಸಲು ಅನುಮೋದನೆ ದೊರೆತಿದ್ದು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮಂಗಳೂರು ವಿವಿಯಲ್ಲಿ ಬಡ ಕ್ರೀಡಾಪಟುಗಳ ವೃತ್ತಿ ಬದುಕಿಗೆ ಆಶಾಕಿರಣವಾಗಿರುವ B.P.Ed ಕೋರ್ಸ್ ಅನ್ನು NCTE ಮಾನದಂಡದ ಕಾರಣವೊಡ್ಡಿ ವಿವಿಯ ಅಧಿಕಾರಿಗಳು ಸ್ಥಗಿತಗೊಳಿಸಲು ಮುಂದಾಗಿದ್ದರು. ಇದರಿಂದ ದ.ಕನ್ನಡ, ಕೊಡಗು, ಉಡುಪಿ ಜಿಲ್ಲೆಗಳ ಬಡ ವಿದ್ಯಾರ್ಥಿಗಳು ಖಾಸಗಿ ಕಾಲೇಜಿನಲ್ಲಿ ಸುಮಾರು ಎರಡೂವರೆ ಲಕ್ಷ ರೂಪಾಯಿ ವ್ಯಯಿಸಿ ವೃತ್ತಿಪರ ಶಿಕ್ಷಣ ಕಲಿಯುವ ಅನಿವಾರ್ಯತೆ ಎದುರಾಗಿತ್ತು. ಈ ವಿಚಾರ ಅರಿತ ಅವಿಭಜಿತ ದ.ಕನ್ನಡ, ಉಡುಪಿ ಜಿಲ್ಲೆಯ ಕ್ರೀಡಾ ಪ್ರೇಮಿಗಳು ಅಭಿಯಾನ ನಡೆಸಿದ್ದರು.
ವಿ.ವಿ ಉಪ ಕುಲಪತಿ ಸುಬ್ರಮಣ್ಯ ಯಡಿಪಡಿತ್ತಾಯ, ಕ್ಷೇತ್ರದ ಶಾಸಕ ಯು.ಟಿ.ಖಾದರ್, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಯಾವುದೇ ಕಾರಣಕ್ಕೂ ವಿ.ವಿ.ಯಲ್ಲಿ B.P.Ed ಕೋರ್ಸ್ ನಿಲ್ಲಿಸಬಾರದೆಂದು ಒತ್ತಾಯಿಸಿದ್ದರು.

ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ. ಖಾದರ್, ವಿಶೇಷ ಮುತುವರ್ಜಿ ವಹಿಸಿ ಈ ಬಗ್ಗೆ ವಿವಿ ಉಪ ಕುಲಪತಿಗಳಲ್ಲಿ ಚರ್ಚಿಸಿದರ ಫಲವಾಗಿ ವಿ.ವಿ ಆಡಳಿತವು ಇದೀಗ ಮತ್ತೆ ದೈಹಿಕ ಶಿಕ್ಷಣ ಕೋರ್ಸನ್ನು ಆರಂಭಿಸಲು ಮುಂದಾಗಿರುವುದು ಕ್ರೀಡಾಭಿಮಾನಿಗಳು, ಬಡ ಕ್ರೀಡಾಪಟುಗಳಿಗೆ ಸಂತಸ ತಂದಿದೆ.
ವಿ.ವಿ ಯಲ್ಲಿ ವೃತ್ತಿಪರ ದೈಹಿಕ ಶಿಕ್ಷಣ(B.P.Ed) ಕೋರ್ಸನ್ನು ಮತ್ತೆ ಪ್ರಾರಂಭಿಸಲು ಶ್ರಮಿಸಿದ ಕ್ರೀಡಾಭಿಮಾನಿಗಳು ಮತ್ತು ಉಳ್ಳಾಲ ಶಾಸಕ ಯು.ಟಿ. ಖಾದರ್ ಅವರನ್ನು ಕಾಪಿಕಾಡು ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ ಸ್ಥಾಪಕಾಧ್ಯಕ್ಷರಾದ ಗೋಪಿನಾಥ್ ಕಾಪಿಕಾಡ್ ಅವರು ಪ್ರಶಂಸಿದ್ದಾರೆ. ಹೆಡ್ ಲೈನ್ ಕರ್ನಾಟಕ ವೆಬ್ ನಲ್ಲಿ ಇದರ ಬಗ್ಗೆ ಮೊಟ್ಟಮೊದಲಿಗೆ ಸುದ್ದಿ ಮಾಡಿ ಗಮನಸೆಳೆಯಲಾಗಿತ್ತು.

ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗವು ಶೈಕ್ಷಣಿಕ ವರ್ಷ 2020-21ನೇ ಸಾಲಿನ ಬಿ.ಪಿ.ಎಡ್ (B.P.Ed) ಪದವಿ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. (ಸಾಮಾನ್ಯ ವರ್ಗ ಹಾಗೂ ಪಾವತಿ ವರ್ಗ), ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 14 -12 -2020 ಆಗಿರುತ್ತದೆ.
ಇದನ್ನೂ ಓದಿ: ಮಂಗಳೂರು ವಿವಿಯಲ್ಲಿ ಮತ್ತೆ ಎಡವಟ್ಟು; ಬಿಪಿಎಡ್ ಕೋರ್ಸ್ ಮುಚ್ಚಲು ಕಸರತ್ತು!
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 06:42 pm
HK News Staffer
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm