ಬ್ರೇಕಿಂಗ್ ನ್ಯೂಸ್
16-07-24 02:42 pm Mangalore Correspondent ಕರಾವಳಿ
ಪುತ್ತೂರು, ಜುಲೈ.16: ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಮಾರಧಾರ ನದಿಯಲ್ಲಿ ನಿನ್ನೆ ರಾತ್ರಿ ಆನೆ ಮರಿಯೊಂದರ ಮೃತದೇಹ ತೇಲಿಬಂದಿದ್ದು ಕುತೂಹಲ ಸೃಷ್ಟಿಯಾಗಿದೆ.
ರಾತ್ರಿ ವೇಳೆ ಸ್ಥಳೀಯ ಸಿಬಂದಿ ನದಿಯಲ್ಲಿ ನೀರಿನ ಪ್ರಮಾಣ ನೋಡಲು ಸೇತುವೆ ಬಳಿ ಹೋಗಿದ್ದಾಗ ಆನೆ ಮರಿ ಕೊಚ್ಚಿ ಹೋಗುತ್ತಿರುವುದು ಕಂಡುಬಂದಿದೆ. ಸೋಮವಾರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು ಅಲ್ಲಿನ ಶೌಚಾಲಯ ಮತ್ತಿತರ ಕಟ್ಟಡಗಳು ನೀರಿನಲ್ಲಿ ಮುಳುಗಿದ್ದವು. ಇದು ಕುಮಾರಧಾರ ನದಿ ತುಂಬಿ ಹರಿಯುತ್ತಿರುವುದಕ್ಕೆ ಸಾಕ್ಷಿಯಾಗಿತ್ತು.
ರಾತ್ರಿ ವೇಳೆ ಆಗತಾನೇ ಹೆರಿಗೆಯಾದಂತಿದ್ದ ಆನೆ ಮರಿ ನದಿಯಲ್ಲಿ ಪತ್ತೆಯಾಗಿದೆ. ಹೀಗಾಗಿ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಗೆ ಹೆಣ್ಣು ಕಾಡಾನೆ ಪ್ರಸವಕ್ಕೀಡಾಗಿ ಮರಿಯನ್ನು ಜೊತೆಗೆ ಒಯ್ಯಲಾಗದ ಸ್ಥಿತಿಯಾಗಿತ್ತೇ ಅನ್ನುವ ಪ್ರಶ್ನೆ ಎದುರಾಗಿದೆ. ಆನೆ ಮರಿಯ ದೇಹ ಬಿಳಿಯಾಗಿದ್ದು ನೀರಿನಲ್ಲಿ ತೇಲಿಕೊಂಡು ಬಂದಿದೆ. ಸತ್ತು ಒಂದೆರಡು ದಿನ ಆದಬಳಿಕವೇ ನೀರಿನಲ್ಲಿ ತೇಲುವುದರಿಂದ ತಾಯಿ ಕಾಡಾನೆ ಬಗ್ಗೆಯೂ ಆತಂಕ ಇದೆ. ಘಟ್ಟಗಳಲ್ಲಿ ಧುಮ್ಮಿಕ್ಕುವ ನದಿಗಳನ್ನು ದಾಟುವಾಗಲೋ ಏನೋ ಆನೆ ಮರಿ ನೀರುಪಾಲಾಗಿರುವ ಸಾಧ್ಯತೆಯಿದೆ.
ರಾತ್ರಿ ವೇಳೆ ಆನೆ ಮರಿಯ ಮೃತದೇಹವನ್ನು ನೀರಿನಿಂದ ಮೇಲೆತ್ತುವುದು ಸಾಧ್ಯವಾಗಿಲ್ಲ. ಹೀಗಾಗಿ ಮಂಗಳವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬಂದಿ ಆನೆ ಮರಿಗಾಗಿ ಹುಡುಕಾಟ ನಡೆಸಿದ್ದಾರೆ.
Baby elephant dies after heavy rains in Subramanya Mangalore.
26-08-25 02:04 pm
Bangalore Correspondent
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am