ಬ್ರೇಕಿಂಗ್ ನ್ಯೂಸ್
16-07-24 02:42 pm Mangalore Correspondent ಕರಾವಳಿ
ಪುತ್ತೂರು, ಜುಲೈ.16: ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಮಾರಧಾರ ನದಿಯಲ್ಲಿ ನಿನ್ನೆ ರಾತ್ರಿ ಆನೆ ಮರಿಯೊಂದರ ಮೃತದೇಹ ತೇಲಿಬಂದಿದ್ದು ಕುತೂಹಲ ಸೃಷ್ಟಿಯಾಗಿದೆ.
ರಾತ್ರಿ ವೇಳೆ ಸ್ಥಳೀಯ ಸಿಬಂದಿ ನದಿಯಲ್ಲಿ ನೀರಿನ ಪ್ರಮಾಣ ನೋಡಲು ಸೇತುವೆ ಬಳಿ ಹೋಗಿದ್ದಾಗ ಆನೆ ಮರಿ ಕೊಚ್ಚಿ ಹೋಗುತ್ತಿರುವುದು ಕಂಡುಬಂದಿದೆ. ಸೋಮವಾರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು ಅಲ್ಲಿನ ಶೌಚಾಲಯ ಮತ್ತಿತರ ಕಟ್ಟಡಗಳು ನೀರಿನಲ್ಲಿ ಮುಳುಗಿದ್ದವು. ಇದು ಕುಮಾರಧಾರ ನದಿ ತುಂಬಿ ಹರಿಯುತ್ತಿರುವುದಕ್ಕೆ ಸಾಕ್ಷಿಯಾಗಿತ್ತು.
ರಾತ್ರಿ ವೇಳೆ ಆಗತಾನೇ ಹೆರಿಗೆಯಾದಂತಿದ್ದ ಆನೆ ಮರಿ ನದಿಯಲ್ಲಿ ಪತ್ತೆಯಾಗಿದೆ. ಹೀಗಾಗಿ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಗೆ ಹೆಣ್ಣು ಕಾಡಾನೆ ಪ್ರಸವಕ್ಕೀಡಾಗಿ ಮರಿಯನ್ನು ಜೊತೆಗೆ ಒಯ್ಯಲಾಗದ ಸ್ಥಿತಿಯಾಗಿತ್ತೇ ಅನ್ನುವ ಪ್ರಶ್ನೆ ಎದುರಾಗಿದೆ. ಆನೆ ಮರಿಯ ದೇಹ ಬಿಳಿಯಾಗಿದ್ದು ನೀರಿನಲ್ಲಿ ತೇಲಿಕೊಂಡು ಬಂದಿದೆ. ಸತ್ತು ಒಂದೆರಡು ದಿನ ಆದಬಳಿಕವೇ ನೀರಿನಲ್ಲಿ ತೇಲುವುದರಿಂದ ತಾಯಿ ಕಾಡಾನೆ ಬಗ್ಗೆಯೂ ಆತಂಕ ಇದೆ. ಘಟ್ಟಗಳಲ್ಲಿ ಧುಮ್ಮಿಕ್ಕುವ ನದಿಗಳನ್ನು ದಾಟುವಾಗಲೋ ಏನೋ ಆನೆ ಮರಿ ನೀರುಪಾಲಾಗಿರುವ ಸಾಧ್ಯತೆಯಿದೆ.
ರಾತ್ರಿ ವೇಳೆ ಆನೆ ಮರಿಯ ಮೃತದೇಹವನ್ನು ನೀರಿನಿಂದ ಮೇಲೆತ್ತುವುದು ಸಾಧ್ಯವಾಗಿಲ್ಲ. ಹೀಗಾಗಿ ಮಂಗಳವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬಂದಿ ಆನೆ ಮರಿಗಾಗಿ ಹುಡುಕಾಟ ನಡೆಸಿದ್ದಾರೆ.
Baby elephant dies after heavy rains in Subramanya Mangalore.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm