ಬ್ರೇಕಿಂಗ್ ನ್ಯೂಸ್
18-07-24 09:21 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಆಗಿರುವುದರಿಂದ ಹಾಸನ ಜಿಲ್ಲಾಧಿಕಾರಿಗಳು ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಮಾಡಿದ್ದಾರೆ. ಜುಲೈ 18ರಿಂದ ಮೊದಲ್ಗೊಂಡು ರಸ್ತೆ ದುರಸ್ತಿ ಕಾಮಗಾರಿ ಮುಗಿಯುವ ವರೆಗೆ ಶಿರಾಡಿ ಘಾಟ್ ಸಂಪರ್ಕದ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಶಿರಾಡಿ ಘಾಟ್ ವ್ಯಾಪ್ತಿಯ ಸಕಲೇಶಪುರ ಬಳಿಯ ಮಾರನಹಳ್ಳಿ, ದೊಡ್ಡತಪ್ಪಲು, ಎತ್ತಿನಹಳ್ಳದಲ್ಲಿ ವ್ಯಾಪಕ ಭೂಕುಸಿತ ಆಗಿರುವುದರಿಂದ ಗುರುವಾರ ನಸುಕಿನಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತಗೊಂಡು ಅದರಡಿಗೆ ಓಮ್ನಿ ಕಾರು ಸಿಲುಕಿದ ಘಟನೆಯೂ ನಡೆದಿತ್ತು. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು ಪರ್ಯಾಯವಾಗಿ ಮೂಡಿಗೆರೆ, ಚಾರ್ಮಾಡಿ ಮೂಲಕ ಮಂಗಳೂರು- ಬೆಂಗಳೂರು ಸಂಚಾರದ ವಾಹನಗಳು ಸಾಗುವಂತೆ ಸೂಚಿಸಲಾಗಿದೆ.




ಇದೇ ವೇಳೆ, ಕೊಡಗು- ದಕ್ಷಿಣ ಕನ್ನಡ ಸಂಪರ್ಕಿಸುವ ಮಡಿಕೇರಿ- ಸಂಪಾಜೆಯ ಘಾಟ್ ಹೆದ್ದಾರಿ -275ರಲ್ಲಿ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಹೀಗಾಗಿ ಈ ಮಾರ್ಗದಲ್ಲಿ ಜುಲೈ 18ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಆದೇಶ ಮಾಡಿದ್ದು, ಮಂಗಳೂರು – ಬೆಂಗಳೂರು ಸಂಚಾರದ ವಾಹನಗಳು ಚಾರ್ಮಾಡಿ ಮೂಲಕವೇ ಸಾಗಬೇಕಾದ ಅನಿವಾರ್ಯತೆ ಇದೆ. ಇದರಿಂದಾಗಿ ಚಾರ್ಮಾಡಿಯ ಕಿರಿದಾದ ಹೆದ್ದಾರಿ ಸಂಪೂರ್ಣ ಬ್ಲಾಕ್ ಆಗುವ ಸಾಧ್ಯತೆಯಿದೆ.
Mangalore Shiradi Ghat landslide, road closed, entry only via charmadi ghat for all Vehicles orders Hassan DC. Volvo bus like ksrtc Ambari will face difficulties as these buses can't go via Madikeri or Charmadi.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm