ಬ್ರೇಕಿಂಗ್ ನ್ಯೂಸ್
18-07-24 10:22 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗ ಹೊರತುಪಡಿಸಿ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲೂಕಿನಲ್ಲಿ ಜುಲೈ 19ರಂದು ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಜುಲೈ 18ರ ಗುರುವಾರವೂ ಮಂಗಳೂರು, ಮೂಲ್ಕಿ- ಮೂಡುಬಿದ್ರೆ, ಉಳ್ಳಾಲ ಹೊರತುಪಡಿಸಿ ಶಾಲೆ, ಕಾಲೇಜಿಗೆ ರಜೆ ನೀಡಿ ಆದೇಶ ಮಾಡಲಾಗಿತ್ತು. ಅದೇ ರೀತಿಯ ಆದೇಶವನ್ನು ಜುಲೈ 19ರಂದೂ ಹೊರಡಿಸಲಾಗಿದೆ. ಪಶ್ಚಿಮ ಘಟ್ಟಗಳ ತಪ್ಪಲು ಪ್ರದೇಶಗಳಾದ ಬೆಳ್ತಂಗಡಿ, ನಾರಾವಿ, ಪುತ್ತೂರು ತಾಲೂಕಿನ ಕೆಲವು ಕಡೆಗಳಲ್ಲಿ ಗುರುವಾರವೂ ಭಾರೀ ಮಳೆಯಾಗಿತ್ತು. ಮಂಗಳೂರಿನಲ್ಲಿ ಮಳೆ ಕಡಿಮೆಯಿತ್ತು. ಇಡೀ ದಿನ ಕಪ್ಪಗಿನ ಮೋಡ ಕವಿದ ವಾತಾವರಣ ಮತ್ತು ಆಗಿಂದಾಗ್ಗೆ ಜಿಟಿ ಜಿಟಿ ಮಳೆಯಾಗಿತ್ತು. ಮಂಗಳೂರು, ಮೂಡುಬಿದ್ರೆಯಲ್ಲಿ ಶಾಲೆಗಳೂ ತೆರೆದಿದ್ದವು.
ಉಡುಪಿ ಜಿಲ್ಲೆಯಾದ್ಯಂತ ಜುಲೈ 19ರಂದು ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಳಿದಂತೆ, ಹಾಸನ, ಕೊಡಗಿನಲ್ಲೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಭಾರೀ ಮಳೆ ಇದ್ದುದರಿಂದ ಶಾಲೆ, ಕಾಲೇಜುಗಳಿಗೆ ರಜೆ ಇತ್ತು. ಜುಲೈ 19ರಂದು ರಜೆ ನೀಡಿರುವ ಮಾಹಿತಿ ಇನ್ನೂ ಬಂದಿಲ್ಲ.
ತುಂಬಿ ಹರಿದ ನೇತ್ರಾವತಿ, ಫಲ್ಗುಣಿ
ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ತೀವ್ರಗೊಂಡಿದ್ದು, ಪಶ್ಚಿಮದತ್ತ ಹರಿಯುವ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ನಿಂತಿದೆ. ನೇತ್ರಾವತಿ ನದಿಯಲ್ಲೂ ನೀರು ತುಂಬಿಕೊಂಡಿದ್ದು, ಬಂಟ್ವಾಳ ತಾಲೂಕಿನ ನಂದಾವರ, ಆಲಡ್ಕ, ಗೂಡಿನಬಳಿ ಏರಿಯಾದಲ್ಲಿ ಪ್ರತಿ ವರ್ಷದಂತೆ ನೆರೆ ಆವರಿಸಿದೆ. ಈ ಭಾಗದಲ್ಲಿ ಎಂಟು ಮನೆಗಳ ನಿವಾಸಿಗಳು ಬೇರೆ ಕಡೆಗೆ ಸ್ಥಳಾಂತರಗೊಂಡಿದ್ದಾರೆ. ಫಲ್ಗುಣಿ ನದಿಯಲ್ಲೂ ನೆರೆ ಕಾಣಿಸಿಕೊಂಡಿದ್ದು, ಅದ್ಯಪಾಡಿ ಆಸುಪಾಸಿನಲ್ಲಿ ನೆರೆ ನೀರು ಮನೆಗಳಿಗೆ ಮತ್ತು ಕೃಷಿ ತೋಟಕ್ಕೆ ನುಗ್ಗಿದೆ.
Heavy rains, landslide, Schools of Five taluks of Dakshina Kannada Mangalore declared. holiday for Udupi Hassan and Kodagu schools also have been issued holiday.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm