ಬ್ರೇಕಿಂಗ್ ನ್ಯೂಸ್
19-07-24 12:20 pm Mangalore Correspondent ಕರಾವಳಿ
ಮಂಗಳೂರು, ಜುಲೈ 19: ಇತ್ತೀಚೆಗೆ ರಿಯಲ್ ಎಸ್ಟೇಟ್ ಬಿಲ್ಡರುಗಳ ಸಿಟ್ಟಿನ ಕಾರಣಕ್ಕೆ ವರ್ಗಾವಣೆಯಾದರೂ, ಅದಕ್ಕೆ ಟ್ರಿಬ್ಯುನಲ್ ಮೂಲಕ ತಡೆ ತಂದುಕೊಂಡು ಮಂಗಳೂರಿನಲ್ಲೇ ಝಂಡಾವೂರಿದ್ದ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್. ಅವರ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದಾರೆ.
ಬೆಂಗಳೂರಿನ ಲೋಕಾಯುಕ್ತ ಪೊಲೀಸರು ಮಂಗಳೂರು ಪಾಲಿಕೆಯ ಕಚೇರಿ ಮತ್ತು ಮಣ್ಣಗುಡ್ಡದ ಆಯುಕ್ತರ ಬಂಗಲೆಗೆ ಏಕಕಾಲದಲ್ಲಿ ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಆನಂದ ಸಿ.ಎಲ್ ಮೂಲತಃ ಮಂಡ್ಯದವರಾಗಿದ್ದು ಸೈನಿಕನಾಗಿ ನಿವೃತ್ತಿ ಪಡೆದು ಕೆಎಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಆರಂಭಿಸಿದ್ದರು. ಮೈಸೂರಿನಲ್ಲಿ ವಿಭಾಗಾಧಿಕಾರಿ ಮತ್ತು ಬೆಂಗಳೂರು ಬಿಡಿಎಯಲ್ಲಿ ಅಧಿಕಾರಿಯಾಗಿದ್ದ ವೇಳೆ ಅಕ್ರಮ ಆಸ್ತಿ ಮಾಡಿಕೊಂಡ ಬಗ್ಗೆ ಆನಂದ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಹೋಗಿತ್ತು.
ಇದೀಗ ರಾಜ್ಯಾದ್ಯಂತ 54 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರಿನಲ್ಲಿ ಅಕ್ರಮ ಆಸ್ತಿ ಮಾಡಿದ್ದಾರೆಂಬ ಆರೋಪದಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಸೇರಿದಂತೆ ಆನಂದ ಸಿಎಲ್ ಅವರು ಅಕ್ರಮ ಆಸ್ತಿ ಮಾಡಿಟ್ಟ ಮೈಸೂರು, ಬೆಂಗಳೂರು, ಮಂಗಳೂರಿನಲ್ಲಿ ದಾಳಿ ಮಾಡಿದ್ದಾರೆ. ಮಂಗಳೂರಿನಲ್ಲಿ ಡಿವೈಎಸ್ಪಿ ಬಸವರಾಜ ಮಗ್ದುಂ ನೇತೃತ್ವದಲ್ಲಿ ದಾಳಿಯಾಗಿದೆ. 


ಇತ್ತೀಚೆಗೆ ಮಂಗಳೂರಿನ ಬಲ್ಮಠದಲ್ಲಿ ಪ್ರಭಾವಿ ಬಿಲ್ಡರ್ ಒಬ್ಬರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದ ಬಳಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪಾಲಿಕೆ ಕಮಿಷನರ್ ಆನಂದ ಸಿ.ಎಲ್ ಅವರು ಬಿಲ್ಡರ್ ಗೆ ನೋಟೀಸ್ ನೀಡಿದ್ದಲ್ಲದೆ, ಮುಂದಿನ ಆದೇಶದ ವರೆಗೆ ಕಾಮಗಾರಿ ನಡೆಸದಂತೆ ಸೂಚಿಸಿದ್ದರು. ಇದಲ್ಲದೆ, ಮಂಗಳೂರಿನ ಒಬ್ಬ ಪ್ರಭಾವಿ ಇಂಜಿನಿಯರ್, ಇತರ ಬಿಲ್ಡರುಗಳ ಮೇಲೆಯೂ ಕಮಿಷನರ್ ನೋಟಿಸ್ ಮಾಡಿದ್ದರು. ಇದರ ಬೆನ್ನಲ್ಲೆ ಕಮಿಷನರ್ ಹುದ್ದೆಯಿಂದ ವರ್ಗಾವಣೆ ಆಗಿದ್ದರು. ಆದರೆ, ಆನಂದ ಸಿಎಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದು ತನ್ನ ವರ್ಗಾವಣೆಯನ್ನು ತಡೆ ಹಾಕಿದ್ದರು.
Mangaluru City Corporation Commissioner C L Ananda house and office raided by Lokayukta. The Karnataka Lokayukta on Friday morning launched massive search operations in 55 places in six districts across the state. This is the second large-scale raid targetting erring government officials in over a week
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am