ಬ್ರೇಕಿಂಗ್ ನ್ಯೂಸ್
19-07-24 02:38 pm Mangalore Correspondent ಕರಾವಳಿ
ಮಂಗಳೂರು, ಜುಲೈ.19: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ಶಾಕ್ ಆಗಿದ್ದ ಸಾಕು ನಾಯಿಯನ್ನು ರಕ್ಷಿಸಲು ಹೋಗಿದ್ದ ಸಿಎ ಕಲಿಯುತ್ತಿದ್ದ ಯುವತಿಯೊಬ್ಬಳು ದಾರುಣ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಬಳಿಯ ಮೂಳೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮುಳೂರು ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಆಶ್ಮಿ ಶೆಟ್ಟಿ (20) ಮೃತಪಟ್ಟ ವಿದ್ಯಾರ್ಥಿನಿ. ಅಶ್ಮಿ ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಹರೀಶ್ ಶೆಟ್ಟಿ ಹೈನುಗಾರಿಕೆ ನಡೆಸುತ್ತಿದ್ದು ಎಂದಿನಂತೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ದನಗಳನ್ನು ಮೇಯಿಸಲು ಮನೆಯಿಂದ ಹೊರಟಿದ್ದರು. ಈ ವೇಳೆ ಅವರೊಂದಿಗೆ ಮನೆಯ ನಾಯಿಯೂ ಹಿಂಬಾಲಿಸಿತ್ತು.


ತಂದೆಯೊಂದಿಗೆ ಹೋಗಿದ್ದ ನಾಯಿ ಬಂದಿಲ್ಲ ಎಂದು ಆಶ್ಮಿ ಗದ್ದೆ ಕಡೆಗೆ ತೆರಳಿದ್ದರು. ನಾಯಿ ನೀರು ತುಂಬಿದ್ದ ಗದ್ದೆಯಲ್ಲಿ ಬಿದ್ದು ಹೊರಳಾಡುತ್ತಿರುವುದನ್ನು ಕಂಡು ಆಶ್ಮಿ ನೀರಿಗಿಳಿದಿದ್ದಾರೆ. ನಾಯಿಗೆ ವಿದ್ಯುತ್ ಶಾಕ್ ಆಗಿರುವುದನ್ನು ತಿಳಿಯದೆ ನಾಯಿಯ ರಕ್ಷಣೆಗೆ ಧಾವಿಸಿದ್ದ ಆಶ್ಮಿ ಗದ್ದೆಗೆ ಕಾಲಿಡುತ್ತಲೇ ವಿದ್ಯುತ್ ಶಾಕ್ ಗೆ ಒಳಗಾಗಿದ್ದಾರೆ. ವಿದ್ಯುತ್ ಆಘಾತದಿಂದ ಆಶ್ಮಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ. ಗದ್ದೆಯಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯೊಂದು ತುಂಡಾಗಿ ಗದ್ದೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಮೆಸ್ಕಾಂಗೆ ಮಾಹಿತಿ ನೀಡಿದ್ದು, ವಿದ್ಯುತ್ ಕಡಿತಗೊಳಿಸಿದ ಬಳಿಕ ನಾಯಿ ಮತ್ತು ಆಶ್ಮಿ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.
Mangalore rain, Negligence by Mescom, 18 year old girl dies of current shock at Gurupura. The deceased girl is identified as Ashwini Shetty (18), who tragically passed away on Friday, July 18, at Gurupura.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm