ಬ್ರೇಕಿಂಗ್ ನ್ಯೂಸ್
19-07-24 02:38 pm Mangalore Correspondent ಕರಾವಳಿ
ಮಂಗಳೂರು, ಜುಲೈ.19: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ಶಾಕ್ ಆಗಿದ್ದ ಸಾಕು ನಾಯಿಯನ್ನು ರಕ್ಷಿಸಲು ಹೋಗಿದ್ದ ಸಿಎ ಕಲಿಯುತ್ತಿದ್ದ ಯುವತಿಯೊಬ್ಬಳು ದಾರುಣ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಬಳಿಯ ಮೂಳೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮುಳೂರು ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಆಶ್ಮಿ ಶೆಟ್ಟಿ (20) ಮೃತಪಟ್ಟ ವಿದ್ಯಾರ್ಥಿನಿ. ಅಶ್ಮಿ ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಹರೀಶ್ ಶೆಟ್ಟಿ ಹೈನುಗಾರಿಕೆ ನಡೆಸುತ್ತಿದ್ದು ಎಂದಿನಂತೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ದನಗಳನ್ನು ಮೇಯಿಸಲು ಮನೆಯಿಂದ ಹೊರಟಿದ್ದರು. ಈ ವೇಳೆ ಅವರೊಂದಿಗೆ ಮನೆಯ ನಾಯಿಯೂ ಹಿಂಬಾಲಿಸಿತ್ತು.


ತಂದೆಯೊಂದಿಗೆ ಹೋಗಿದ್ದ ನಾಯಿ ಬಂದಿಲ್ಲ ಎಂದು ಆಶ್ಮಿ ಗದ್ದೆ ಕಡೆಗೆ ತೆರಳಿದ್ದರು. ನಾಯಿ ನೀರು ತುಂಬಿದ್ದ ಗದ್ದೆಯಲ್ಲಿ ಬಿದ್ದು ಹೊರಳಾಡುತ್ತಿರುವುದನ್ನು ಕಂಡು ಆಶ್ಮಿ ನೀರಿಗಿಳಿದಿದ್ದಾರೆ. ನಾಯಿಗೆ ವಿದ್ಯುತ್ ಶಾಕ್ ಆಗಿರುವುದನ್ನು ತಿಳಿಯದೆ ನಾಯಿಯ ರಕ್ಷಣೆಗೆ ಧಾವಿಸಿದ್ದ ಆಶ್ಮಿ ಗದ್ದೆಗೆ ಕಾಲಿಡುತ್ತಲೇ ವಿದ್ಯುತ್ ಶಾಕ್ ಗೆ ಒಳಗಾಗಿದ್ದಾರೆ. ವಿದ್ಯುತ್ ಆಘಾತದಿಂದ ಆಶ್ಮಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ. ಗದ್ದೆಯಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯೊಂದು ತುಂಡಾಗಿ ಗದ್ದೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಮೆಸ್ಕಾಂಗೆ ಮಾಹಿತಿ ನೀಡಿದ್ದು, ವಿದ್ಯುತ್ ಕಡಿತಗೊಳಿಸಿದ ಬಳಿಕ ನಾಯಿ ಮತ್ತು ಆಶ್ಮಿ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.
Mangalore rain, Negligence by Mescom, 18 year old girl dies of current shock at Gurupura. The deceased girl is identified as Ashwini Shetty (18), who tragically passed away on Friday, July 18, at Gurupura.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am