ಬ್ರೇಕಿಂಗ್ ನ್ಯೂಸ್
19-07-24 10:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 19: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್. ಅವರಿಗೆ ಸೇರಿದ ಆರು ಸ್ಥಳಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದು, ಅಕ್ರಮ ಆಸ್ತಿಯ ಬಗ್ಗೆ ಪರಿಶೀಲನೆ ನಡೆಸಿದೆ. ಈ ವೇಳೆ, ಮೂರು ವಾಸದ ಮನೆಗಳು ಸೇರಿದಂತೆ ಚಿನ್ನಾಭರಣ, ಜಮೀನು ಮಾಡಿಕೊಂಡಿರುವುದು ಪತ್ತೆಯಾಗಿದೆ.
ಮೈಸೂರು, ಬೆಂಗಳೂರು ಸೇರಿದಂತೆ ಮೂರು ಮನೆಗಳಿವೆ. ಇದಲ್ಲದೆ, ನಾಲ್ಕು ಎಕರೆ 27 ಗುಂಟೆ ಕೃಷಿ ಜಮೀನು ಹೊಂದಿದ್ದಾರೆ. ಇದರ ಆಸ್ತಿ ಮೌಲ್ಯ 2.12 ಕೋಟಿ ಆಗಿರುತ್ತದೆ. 19.40 ಲಕ್ಷ ಮೌಲ್ಯದ ಚಿನ್ನಾಭರಣಗಳು, 20.50 ಲಕ್ಷ ಮೌಲ್ಯದ ವಾಹನಗಳು, ಜಮೀನು ಖರೀದಿಸಲು 10 ಲಕ್ಷ ಮುಂಗಡ ಹಣ ನೀಡಿರುವುದು, ಪತ್ನಿ ಮತ್ತು ಮಕ್ಕಳ ಹೆಸರಿನಲ್ಲಿ 16 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ಇರುವುದು ಪತ್ತೆಯಾಗಿದೆ. ಆನಂದ್ ಸಿ.ಎಲ್. ಅವರ ಒಟ್ಟು ಆಸ್ತಿ ಮೌಲ್ಯ 2.77 ಕೋಟಿ ಆಗಿರುತ್ತದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.

ರಾಜ್ಯದಾದ್ಯಂತ 12 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ಕಾರ್ಯಾಚರಣೆ ನಡೆಸಿದ್ದರು. ಮಂಗಳೂರಿನ ಪಾಲಿಕೆ ಕಮಿಷನರ್ ಆನಂದ್ ಅವರ ಮಣ್ಣಗುಡ್ಡೆಯ ಬಂಗಲೆ, ಪಾಲಿಕೆಯ ಕಚೇರಿ, ಮೈಸೂರು, ಬೆಂಗಳೂರಿನ ಮನೆ, ಮಂಡ್ಯದ ಮನೆಗಳಿಗೆ ದಾಳಿ ನಡೆದಿತ್ತು. ಇವರು ಈ ಹಿಂದೆ ಬಿಡಿಎ ಅಧಿಕಾರಿಯಾಗಿದ್ದಾಗ ಅಕ್ರಮ ಆಸ್ತಿ ಮಾಡಿದ್ದಾರೆಂದು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
Mangalore mcc Commissioner C L Anand raid by Lokayukta, 2.77 crore assets found. Mangaluru city Municipal Commissioner C L Anand was among the 13 government officials raided by Lokayukta sleuths in Karnataka on Friday, in connection with disproportionate assets cases.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am