ಬ್ರೇಕಿಂಗ್ ನ್ಯೂಸ್
07-12-20 09:11 pm Mangaluru Correspondent ಕರಾವಳಿ
ಮಂಗಳೂರು, ಡಿ.7: ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡಲು ಆಗ್ರಹಿಸಿ, ಬಿಲ್ಲವ ಬ್ರಿಗೇಡ್ ವತಿಯಿಂದ ಬೈಕ್ ರ್ಯಾಲಿ ಬದಲಿಗೆ ಪಾದಯಾತ್ರೆ ನಡೆಸಲಾಯಿತು.
ಬೈಕ್ ರ್ಯಾಲಿ ನಡೆಸಲು ಕೊನೆಕ್ಷಣದಲ್ಲಿ ಮಂಗಳೂರು ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ರ್ಯಾಲಿಯನ್ನು ಮೊಟಕುಗೊಳಿಸಲಾಗಿತ್ತು. ಕುದ್ರೋಳಿ ಕ್ಷೇತ್ರದಿಂದ ಕೆಂಜಾರಿನ ವರೆಗೆ ನಡೆಯಲಿದ್ದ ರ್ಯಾಲಿಯನ್ನು ಬದಲಿಸಿ, ಮರವೂರಿನಿಂದ ಪಾದಯಾತ್ರೆಗೆ ಸೀಮಿತಗೊಳಿಸಲಾಯ್ತು.


ಬೈಕ್ ರ್ಯಾಲಿ ಬದಲು ತಮ್ಮ ತಮ್ಮ ವಾಹನಗಳಲ್ಲಿ ಮರವೂರಿಗೆ ಬಂದು ಸೇರಿದ ಸಂಘಟನೆಯ ನಾಯಕರು ಅಲ್ಲಿಂದ ಪಾದಯಾತ್ರೆ ಮೂಲಕ ಕೆಂಜಾರಿಗೆ ತೆರಳಿದರು. ಮೆರವಣಿಗೆಯಲ್ಲಿ ಕೋಟಿ ಚೆನ್ನಯರಿಗೆ ಜೈಕಾರ ಹಾಕುತ್ತಾ, ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲೇಬೇಕೆಂದು ಘೋಷಣೆಯನ್ನೂ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜಶೇಖರ ಕೋಟ್ಯಾನ್, ವಿಮಾನ ನಿಲ್ದಾಣಕ್ಕೆ ಹೆಸರಿಡುವ ವರೆಗೂ ಈ ಹೋರಾಟ ಮುಂದುವರಿಯಲಿದೆ. ಇದನ್ನು ಯಾರೂ ಹತ್ತಿಕ್ಕಲು ಸಾಧ್ಯವಿಲ್ಲ. ಇಂದು ಬೈಕ್ ರ್ಯಾಲಿಗೆ ಅನುಮತಿ ನೀಡದೆ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿದ್ದಾರೆ. ಆದರೆ, ಇದರಿಂದ ನಮ್ಮ ಹೋರಾಟವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ನಾಯಕರಾದ ಸತ್ಯಜಿತ್ ಸುರತ್ಕಲ್, ಬಿಲ್ಲವ ಬ್ರಿಗೇಡ್ ಸಂಘಟನೆಯ ಅಧ್ಯಕ್ಷ ಜೀವನ್ ಪೂಜಾರಿ, ಅಕ್ಷಿತ್ ಸುವರ್ಣ, ವಿವೇಕ್ ಪನಾಮಾ, ಪ್ರತಿಭಾ ಕುಳಾಯಿ, ಸೂರಜ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿ, ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಅನುಮತಿ ನಿರಾಕರಿಸಿದ್ದು ಯಾಕೆ ?
ಬೈಕ್ ರ್ಯಾಲಿ ನಡೆಸಲು ಟ್ರಾಫಿಕ್ ಸಮಸ್ಯೆ ಮತ್ತು ಕೋಮು ಸಂಘರ್ಷಕ್ಕೆ ನಾಂದಿಯಾಗುತ್ತೆ ಅಂತ ಪೊಲೀಸ್ ಕಮಿಷನರ್ ನಿರಾಕರಿಸಿದ್ದಾಗಿ ಮಾಹಿತಿ ಲಭಿಸಿದೆ. ಬೈಕ್ ರ್ಯಾಲಿ ನಡೆಸಲು ಒಂದು ಸಂಘಟನೆಗೆ ಅವಕಾಶ ಕೊಟ್ಟರೆ, ನಾಳೆ ಇನ್ನೊಬ್ಬರಿಗೂ ಅವಕಾಶ ಕೊಡಬೇಕಾಗುತ್ತದೆ. ಕೊಡದೇ ಇದ್ದರೆ ಪೊಲೀಸರು ಮತ್ತು ಸಂಘಟನೆಗಳ ನಡುವೆ ಸಂಘರ್ಷ, ಘರ್ಷಣೆಗೆ ಅವಕಾಶ ನೀಡಿದಂತಾಗುತ್ತದೆ. ಅದಕ್ಕಾಗಿ ಪ್ರತಿಭಟನೆ ಮಾಡಿ, ಬೈಕ್ ರ್ಯಾಲಿ ಬೇಡ ಎಂದಿದ್ದರಂತೆ ಕಮಿಷನರ್. ಆದರೆ, ಸೂಚನೆ ನೀಡಿದ್ದರೂ, ರ್ಯಾಲಿಯನ್ನು ಬದಲಿಸದೇ ಇದ್ದುದರಿಂದ ಮುನ್ನಾ ದಿನ ಟ್ರಾಫಿಕ್ ಡಿಸಿಪಿ ಮೂಲಕ ನೋಟೀಸ್ ನೀಡಲಾಗಿತ್ತು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಬಿಜೆಪಿ ನಾಯಕರು ತಪ್ಪಿಸಿದ್ದು ಹೌದೇ..?
ಆದರೆ, ಕೊನೆಕ್ಷಣದಲ್ಲಿ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ ವಿಚಾರ ಮಾತ್ರ ಸಂಘಟನೆ ಪ್ರಮುಖರಲ್ಲಿ ಬೇರೆಯದ್ದೇ ಸಂದೇಶ ಹೋಗಿತ್ತು. ಬಿಜೆಪಿ ಆಡಳಿತ ಉದ್ದೇಶಪೂರ್ವಕ ನಮ್ಮ ಹೋರಾಟವನ್ನು ಹತ್ತಿಕ್ಕಲು ಇಂಥ ಕೆಲಸ ಮಾಡಿದೆ ಎನ್ನುವ ಮಾತು ಕೇಳಿಬರುತ್ತಿತ್ತು. ಬಿಜೆಪಿ ರಾಜ್ಯಾಧ್ಯಕ್ಷರ ಕೈವಾಡ ಇದ್ದಿರಲೂಬಹುದು ಎನ್ನುವ ಮಾತೂ ಕೇಳಿಬಂದಿತ್ತು. ಕಳೆದ ಬಾರಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸತ್ಯಜಿತ್ ಸುರತ್ಕಲ್, ಕೋಟಿ ಚೆನ್ನಯ ಹೋರಾಟದಲ್ಲಿ ಮುಂಚೂಣಿ ಇರುವುದರಿಂದ ಹೈಲೈಟ್ ಆಗಬಾರದೆಂದು ಬಿಜೆಪಿ ನಾಯಕರು ರ್ಯಾಲಿಗೆ ಅವಕಾಶ ತಪ್ಪಿಸಿದ್ದಾರೆ ಎಂಬ ಮಾತು ಬಂದಿತ್ತು. ಆದರೆ, ಅಂಥ ಪಿತೂರಿ ಏನೂ ನಡೆದಿರಲಿಲ್ಲ ಎನ್ನುತ್ತದೆ ಪೊಲೀಸ್ ಮೂಲಗಳು.
Video:
Billava Brigade took out a mammoth bike rally on Monday December 7 urging the administration to name Mangaluru International Airport after Tulu bravehearts Koti Chennaya. But police intervened and stopped the rally. The bikers were confused by the obstruction of the police force.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm