ಬ್ರೇಕಿಂಗ್ ನ್ಯೂಸ್
07-12-20 09:51 pm Mangaluru Correspondent ಕರಾವಳಿ
ಮಂಗಳೂರು: ಡಿಸೆಂಬರ್,7: ಅತಿವೃಷ್ಟಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ 167 ಕೋಟಿ ನಷ್ಟದ ಬಗ್ಗೆ ಸರಕಾರಕ್ಕೆ ಬೇಡಿಕೆ ಇಟ್ಟಿದ್ದರೂ, ಬರೀ 5 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದ್ದೀರಿ.. ಜನ ಸಾಮಾನ್ಯರ ಪ್ರಶ್ನೆಗಳಿಗೆ ನಾವು ಜನಪ್ರತಿನಿಧಿಗಳು ಏನ್ ಉತ್ತರ ನೀಡಬೇಕು ಎಂದು ಮಂಗಳೂರು ವಿಧಾನಸಭಾ ಕ್ಷೇತ್ರ ಶಾಸಕ ಯು.ಟಿ.ಖಾದರ್ ಅವರು ವಿಧಾನಸಭೆ ಕಲಾಪದಲ್ಲಿ ಪ್ರಶ್ನೆ ಮಾಡಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಖಾದರ್ ಅವರು ತನ್ನ ಕ್ಷೇತ್ರದಲ್ಲೇ ಅತಿವೃಷ್ಟಿಯಿಂದ 162 ಮನೆಗಳು ಹಾನಿಗೊಳಗಾಗಿದ್ದು, ಅದರಲ್ಲಿ ಕೆಲವು ಸಂಪೂರ್ಣ ಹಾನಿಗೊಳಗಾಗಿದೆ. ಹಾನಿಗೊಳಗಾದ ಮನೆಗಳಿಗೆ ತಹಶೀಲ್ದಾರ್ ಪರಿಹಾರವಾಗಿ 50,000 ರೂ. ರಾಜೀವ್ ಗಾಂಧಿ ನಿಗಮದ ಪರಿಹಾರ ವ್ಯವಸ್ಥೆ ಮಾಡಿಕೊಡಲಾಗಿದೆ. ಆದರೆ ಈ ವರೆಗೂ ಸಂತ್ರಸ್ತರಿಗೆ ಒಂದು ನಯಾ ಪೈಸೆಯೂ ಪರಿಹಾರ ಧನ ಸಿಕ್ಕಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳಲ್ಲಿ ಕೇಳಿದರೆ ಇಂದು, ನಾಳೆ ಎಂಬ ಸಬೂಬು ದೊರಕುತ್ತದೆ. ಇದರ ಬಗ್ಗೆ ಅಧಿವೇಶನದಲ್ಲಿ ದಾಖಲಿಸಿ, ತನಿಖೆ ನಡಯಬೇಕು. ಸಂತ್ರಸ್ತರು ಜನಪ್ರತಿನಿಧಿಗಳಲ್ಲಿ ಬಂದು ಪದೇ ಪದೇ ಕೇಳಿದರೆ ನಾವು ಏನೆಂದು ಉತ್ತರಿಸಬೇಕೆಂದು ಹೇಳಿದರು.
ಮಂಗಳೂರು- ಬೆಂಗಳೂರು ರಸ್ತೆ ಸಂಚಾರಕ್ಕೆ ಯೋಗ್ಯವಾಗಿಲ್ಲ, ಚಿಕ್ಕಮಂಗಳೂರು- ಆಗುಂಬೆ- ಮಂಗಳೂರು ರಸ್ತೆಯೂ ಹಾಳಾಗಿ ಹೋಗಿದೆ. ಬಡವರು ವಿಮಾನದಲ್ಲಿ ಸಂಚರಿಸಲು ಅಸಾಧ್ಯ. ಆದುದರಿಂದ ರಸ್ತೆ ದುರಸ್ತಿಗೆ ಶೀಘ್ರ ಅನುದಾನ ಬಿಡುಗಡೆಗೊಳಿಸಬೇಕು ಎಂದು ಸದನದಲ್ಲಿ ಖಾದರ್ ಒತ್ತಾಯಿಸಿದರು.
ಅವಿಭಜಿತ ದ.ಕನ್ನಡ , ಉಡುಪಿ ಜಿಲ್ಲೆಗಳ ಅಡಕೆ, ತೆಂಗು, ರಬ್ಬರ್ ಬೆಳೆಗಾರರು ಅತಿವೃಷ್ಟಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದು ಅವರಿಗೂ ಶೀಘ್ರ ಪರಿಹಾರ ಕೊಡುವಂತೆ ಖಾದರ್ ಒತ್ತಾಯಿಸಿದ್ದಾರೆ.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm