ಬ್ರೇಕಿಂಗ್ ನ್ಯೂಸ್
27-07-24 02:09 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಸಕಲೇಶಪುರ ಬಳಿಯ ಎಡಕುಮೇರಿ- ಕಡಗರವಳ್ಳಿ ಮಧ್ಯೆ ರೈಲು ಹಳಿಗೆ ಭೂಕುಸಿತ ಆಗಿರುವುದರಿಂದ ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ಅಸ್ತವ್ಯಸ್ತವಾಗಿದೆ. ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದಂತೆಯೇ ಈ ಹಾದಿಯಲ್ಲಿ ಸಾಗುವ ಜುಲೈ 29ರ ವರೆಗಿನ ಎಂಟು ರೈಲುಗಳನ್ನು ರದ್ದುಪಡಿಸಲಾಗಿದೆ. ಈ ಬಗ್ಗೆ ದಕ್ಷಿಣ ರೈಲ್ವೇಯ ಪಿಆರ್ ಓ ದೇವದಾನಂ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.
ಜುಲೈ 27ರಂದು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ವಿಜಯಪುರಕ್ಕೆ ತೆರಳಬೇಕಿದ್ದ ಸ್ಪೆಷಲ್ ಎಕ್ಸ್ ಪ್ರೆಸ್ ರೈಲನ್ನು (ಸಂಖ್ಯೆ 07378) ರದ್ದುಪಡಿಸಲಾಗಿದೆ. ಜುಲೈ 28ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಬೆಂಗಳೂರು ಯಶವಂತಪುರಕ್ಕೆ ತೆರಳಬೇಕಿದ್ದ ಪ್ಯಾಸೆಂಜರ್ ರೈಲು (ಸಂಖ್ಯೆ 16540) ರದ್ದಾಗಿದೆ. ರೈಲು ಸಂಖ್ಯೆ 07377 ವಿಜಯಪುರದಿಂದ ಮಂಗಳೂರು ಸೆಂಟ್ರಲ್ ನಿಲ್ದಾಣ ಮಧ್ಯೆ ಜುಲೈ 27ರಂದು ಓಡಾಟ ನಡೆಸಬೇಕಿದ್ದ ರೈಲನ್ನೂ ರದ್ದುಪಡಿಸಲಾಗಿದೆ.
ಜುಲೈ 28ರಂದು ಬೆಂಗಳೂರಿನಿಂದ ಕಾರವಾರಕ್ಕೆ ತೆರಳುವ ಸ್ಪೆಷಲ್ ಎಕ್ಸ್ ಪ್ರೆಸ್ (ಸಂಖ್ಯೆ 06567) ರೈಲನ್ನೂ ರದ್ದು ಮಾಡಲಾಗಿದೆ. ಜುಲೈ 27ರಂದು ಕಾರವಾರದಿಂದ ಬೆಂಗಳೂರು ತೆರಳಬೇಕಿದ್ದ 06568 ನಂಬರಿನ ರೈಲನ್ನೂ ರದ್ದುಪಡಿಸಲಾಗಿದೆ. ಜುಲೈ 27ರಂದು ಎಸ್ಎಂವಿಟಿ ಬೆಂಗಳೂರು- ಮುರುಡೇಶ್ವರ ಮಧ್ಯೆ ಓಡಾಟ ನಡೆಸಬೇಕಿದ್ದ ಎಕ್ಸ್ ಪ್ರೆಸ್ (ಸಂಖ್ಯೆ 16585) ರೈಲನ್ನು ರದ್ದು ಮಾಡಲಾಗಿದೆ. ಜುಲೈ 28ರಂದು ಮುರುಡೇಶ್ವರದಿಂದ ಬೆಂಗಳೂರು ತೆರಳಬೇಕಿದ್ದ 16586 ನಂಬರಿನ ರೈಲನ್ನೂ ರದ್ದು ಮಾಡಲಾಗಿದೆ. ಜುಲೈ 28ರಂದು ಯಶವಂತಪುರ- ಮಂಗಳೂರು ಜಂಕ್ಷನ್ ಮಧ್ಯೆ ಸಂಚರಿಸುವ (ಸಂಖ್ಯೆ 16575) ರೈಲನ್ನೂ ರದ್ದುಪಡಿಸಲಾಗಿದೆ. ಜುಲೈ 29ರಂದು ಸಂಚರಿಸುವ ಮಂಗಳೂರು ಜಂಕ್ಷನ್ – ಯಶವಂತಪುರ ಜಂಕ್ಷನ್ ನಡುವಿನ ರೈಲನ್ನೂ ರದ್ದು ಮಾಡಲಾಗಿದೆ.
Train services between Karwar-Mangaluru and Bengaluru were affected after a landslip between Yadakumari and Kadagaravalli (Western Ghats section) of South Western Railway at 6.56 p.m. on Friday. A release from South Western Railway said that train No. 06568 Karwar – SMVT Bengaluru Special Express was cancelled and seven other trains had been diverted as a result.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm