ಬ್ರೇಕಿಂಗ್ ನ್ಯೂಸ್
27-07-24 02:09 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಸಕಲೇಶಪುರ ಬಳಿಯ ಎಡಕುಮೇರಿ- ಕಡಗರವಳ್ಳಿ ಮಧ್ಯೆ ರೈಲು ಹಳಿಗೆ ಭೂಕುಸಿತ ಆಗಿರುವುದರಿಂದ ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ಅಸ್ತವ್ಯಸ್ತವಾಗಿದೆ. ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದಂತೆಯೇ ಈ ಹಾದಿಯಲ್ಲಿ ಸಾಗುವ ಜುಲೈ 29ರ ವರೆಗಿನ ಎಂಟು ರೈಲುಗಳನ್ನು ರದ್ದುಪಡಿಸಲಾಗಿದೆ. ಈ ಬಗ್ಗೆ ದಕ್ಷಿಣ ರೈಲ್ವೇಯ ಪಿಆರ್ ಓ ದೇವದಾನಂ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.
ಜುಲೈ 27ರಂದು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ವಿಜಯಪುರಕ್ಕೆ ತೆರಳಬೇಕಿದ್ದ ಸ್ಪೆಷಲ್ ಎಕ್ಸ್ ಪ್ರೆಸ್ ರೈಲನ್ನು (ಸಂಖ್ಯೆ 07378) ರದ್ದುಪಡಿಸಲಾಗಿದೆ. ಜುಲೈ 28ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಬೆಂಗಳೂರು ಯಶವಂತಪುರಕ್ಕೆ ತೆರಳಬೇಕಿದ್ದ ಪ್ಯಾಸೆಂಜರ್ ರೈಲು (ಸಂಖ್ಯೆ 16540) ರದ್ದಾಗಿದೆ. ರೈಲು ಸಂಖ್ಯೆ 07377 ವಿಜಯಪುರದಿಂದ ಮಂಗಳೂರು ಸೆಂಟ್ರಲ್ ನಿಲ್ದಾಣ ಮಧ್ಯೆ ಜುಲೈ 27ರಂದು ಓಡಾಟ ನಡೆಸಬೇಕಿದ್ದ ರೈಲನ್ನೂ ರದ್ದುಪಡಿಸಲಾಗಿದೆ.
ಜುಲೈ 28ರಂದು ಬೆಂಗಳೂರಿನಿಂದ ಕಾರವಾರಕ್ಕೆ ತೆರಳುವ ಸ್ಪೆಷಲ್ ಎಕ್ಸ್ ಪ್ರೆಸ್ (ಸಂಖ್ಯೆ 06567) ರೈಲನ್ನೂ ರದ್ದು ಮಾಡಲಾಗಿದೆ. ಜುಲೈ 27ರಂದು ಕಾರವಾರದಿಂದ ಬೆಂಗಳೂರು ತೆರಳಬೇಕಿದ್ದ 06568 ನಂಬರಿನ ರೈಲನ್ನೂ ರದ್ದುಪಡಿಸಲಾಗಿದೆ. ಜುಲೈ 27ರಂದು ಎಸ್ಎಂವಿಟಿ ಬೆಂಗಳೂರು- ಮುರುಡೇಶ್ವರ ಮಧ್ಯೆ ಓಡಾಟ ನಡೆಸಬೇಕಿದ್ದ ಎಕ್ಸ್ ಪ್ರೆಸ್ (ಸಂಖ್ಯೆ 16585) ರೈಲನ್ನು ರದ್ದು ಮಾಡಲಾಗಿದೆ. ಜುಲೈ 28ರಂದು ಮುರುಡೇಶ್ವರದಿಂದ ಬೆಂಗಳೂರು ತೆರಳಬೇಕಿದ್ದ 16586 ನಂಬರಿನ ರೈಲನ್ನೂ ರದ್ದು ಮಾಡಲಾಗಿದೆ. ಜುಲೈ 28ರಂದು ಯಶವಂತಪುರ- ಮಂಗಳೂರು ಜಂಕ್ಷನ್ ಮಧ್ಯೆ ಸಂಚರಿಸುವ (ಸಂಖ್ಯೆ 16575) ರೈಲನ್ನೂ ರದ್ದುಪಡಿಸಲಾಗಿದೆ. ಜುಲೈ 29ರಂದು ಸಂಚರಿಸುವ ಮಂಗಳೂರು ಜಂಕ್ಷನ್ – ಯಶವಂತಪುರ ಜಂಕ್ಷನ್ ನಡುವಿನ ರೈಲನ್ನೂ ರದ್ದು ಮಾಡಲಾಗಿದೆ.
Train services between Karwar-Mangaluru and Bengaluru were affected after a landslip between Yadakumari and Kadagaravalli (Western Ghats section) of South Western Railway at 6.56 p.m. on Friday. A release from South Western Railway said that train No. 06568 Karwar – SMVT Bengaluru Special Express was cancelled and seven other trains had been diverted as a result.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am