ಬ್ರೇಕಿಂಗ್ ನ್ಯೂಸ್
08-12-20 11:07 am Mangalore Correspondent ಕರಾವಳಿ
ಉಳ್ಳಾಲ: ಡಿ.8: ಬಾಬಾ ಅವರ ಸಮಾಜಮುಖಿ ಕಾರ್ಯಗಳು ಎಂದಿಗೂ ಜೀವಂತ. ಅವರ ಸ್ಮರಣಾರ್ಥ ಕ್ರೀಡಾಕೂಟಗಳನ್ನು ಆಯೋಜಿಸದೆ ಸಮಾಜಕ್ಕೆ ಪೂರಕವಾದ ಕಾರ್ಯದಲ್ಲಿ ಕಾರ್ಯಕರ್ತರು ಜಿಲ್ಲೆಯುದ್ದಕ್ಕೂ ತೊಡಗಿಸಿಕೊಂಡಿರುವುದು ಅವರಿಗೆ ಸಲ್ಲಿಸುವ ಗೌರವ ಎಂದು ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿ ಗೌರವಾಧ್ಯಕ್ಷ ಭಾಸ್ಕರ್ ಚಂದ್ರ ಶೆಟ್ಟಿ ಹೇಳಿದರು.
ದಿ|ಎಕ್ಕೂರು ಬಾಬಾ(ಶುಭಕರ ಶೆಟ್ಟಿ) ಸ್ಮರಣಾರ್ಥವಾಗಿ ಹಿಂದೂಯುವಸೇನೆ ಮಹಾದೇವಿ ಶಾಖೆ ಬಗಂಬಿಲ, ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಸಹಯೋಗದೊಂದಿಗೆ ಬಗಂಬಿಲ ಫ್ರೆಂಡ್ಸ್ ಸರ್ಕಲ್ ಮೈದಾನದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರ,ಆಯುಷ್ಮಾನ್ ಕಾರ್ಡ್ ಹಾಗೂ ಪ್ರಧಾನಮಂತ್ರಿ ಜನಧನ್ ಖಾತೆಗೆ ಉಚಿತ ನೋಂದಾವಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭ ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿ ಅಧ್ಯಕ್ಷ ಯಶೋಧರ್ ಚೌಟ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಜನಾರ್ದನ್ ಅರ್ಕುಳ, ಕುಂಪಲ ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ ಅಧ್ಯಕ್ಷ ಸತ್ಯನಾರಾಯಣ ಹೂಡೆ, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷ ವೀರಪ್ಪ ಮೂಡುಶೆಡ್ಡೆ, ರವಿಚಂದ್ರ ಎಕ್ಕೂರು, ಶ್ರೀ ಮಹಾದೇವಿ ಮಂದಿರ ಬಗಂಬಿಲದ ಅರ್ಚಕ ಬಾಲಕೃಷ್ಣ, ಕಿರಣ್ ರೈ ಬಜಾಲ್, ಸಂದೀಪ್ ಶೆಟ್ಟಿ ಎಕ್ಕೂರು, ಯೆನೆಪೋಯ ಬ್ಲಡ್ ಬ್ಯಾಂಕ್ ಮುಖ್ಯಸ್ಥೆ ಡಾ. ವಿದ್ಯಾ, ಶ್ರೀ ಮಹಾದೇವಿ ಭಜನಾ ಮಂದಿರದ ಅಧ್ಯಕ್ಷ ಸುನಂದಾ ಬಗಂಬಿಲ, ಉಳ್ಳಾಲ ಪುರಸಭೆ ಮಾಜಿ ಸದಸ್ಯ ಪ್ರಶಾಂತ್ ಕಾಪಿಕಾಡ್, ಹಿಂ.ಯು.ಸೇ ಬಗಂಬಿಲ ಶಾಖೆ ಅಧ್ಯಕ್ಷ ಪ್ರವೀಣ್ ದಾಸ್ ಬಗಂಬಿಲ, ಶ್ರೀಕಾಂತ್ ಉಳ್ಳಾಲ್, ಚಂದ್ರಶೇಖರ್ ಶೆಟ್ಟಿ,ಸಂದೀಪ್ ಕುಂಪಲ ಮುಖ್ಯ ಅತಿಥಿಗಳಾಗಿದ್ದರು.
ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ ವತಿಯಿಂದ 944 ಯುನಿಟ್ ರಕ್ತದಾನ ನಡೆಸಲು ಪ್ರೇರೇಪಿಸಿದ ನಿಶಾಂತ್ ಜೆಪ್ಪಿನಮೊಗರು ಇವರನ್ನು ಸನ್ಮಾನಿಸಲಾಯಿತು.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm