ಬ್ರೇಕಿಂಗ್ ನ್ಯೂಸ್
27-07-24 10:05 pm Mangalore Correspondent ಕರಾವಳಿ
ಉಳ್ಳಾಲ, ಜು.27: ನರಿಂಗಾನ ಗ್ರಾಮದ ತೌಡುಗೋಳಿ ಮುಖ್ಯ ಜಂಕ್ಷನ್ ಬಳಿಯ ಮೊಬೈಲ್ ಟವರ್ ಬಳಿಯಲ್ಲಿ ಐದು ಕಾಗೆ, ಎರಡು ಗಿಡುಗ ಹಾಗೂ ಒಂದು ಕುಪುಲು ಪಕ್ಷಿ ಸಾವಿಗೀಡಾಗಿದ್ದು ಗ್ರಾಮಸ್ಥರಲ್ಲಿ ಸಂಶಯದ ಜೊತೆಗೆ ಆತಂಕ ಮನೆಮಾಡಿದೆ.
ಪಕ್ಷಿಗಳು ಸಾವಿಗೀಡಾಗಿರುವ ಸ್ಥಳದಲ್ಲಿ ಇತ್ತೀಚೆಗಷ್ಟೇ ಮೊಬೈಲ್ ಟವರ್ ನಿರ್ಮಿಸಲಾಗಿದೆ. ಗ್ರಾಮದ ಕೆಲವು ಮಂದಿಯ ವಿರೋಧವಿದ್ದರೂ ಅಧಿಕಾರಿಗಳು ಪ್ರಾಣಿ ಸಂಕುಲ, ತೆಂಗಿನ ಮರಗಳಿಗೆ ಟವರ್ ನಿಂದ ಯಾವುದೇ ರೀತಿಯ ಸಮಸ್ಯೆ ಬಾರದೆಂದು ತಿಳಿಸಿದ್ದರಿಂದ ಟವರ್ ನಿರ್ಮಾಣಕ್ಕೆ ನರಿಂಗಾನ ಪಂಚಾಯತ್ ಅನುಮತಿ ನೀಡಿತ್ತು. ಇದೀಗ ಟವರ್ ಕೆಳ ಭಾಗದಲ್ಲೇ ವನ್ಯ ಪಕ್ಷಿಗಳು ನಿಗೂಢವಾಗಿ ಸತ್ತು ಬಿದ್ದಿವೆ.


ತೌಡುಗೋಳಿಯಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಇತ್ತೀಚೆಗೆ ಬಾಲಕನೊಬ್ಬನ ಮೇಲೆ ನಾಯಿಗಳು ದಾಳಿ ಮಾಡಲು ಮುಂದಾದಾಗ ಆಟೋ ಚಾಲಕರು ನಾಯಿಗಳನ್ನ ಓಡಿಸಿ ಬಾಲಕನನ್ನ ರಕ್ಷಿಸಿದ್ದರು. ಬೀದಿ ನಾಯಿಗಳನ್ನ ಕೊಲ್ಲಲು ಯಾರಾದರೂ ತಿನಿಸಲ್ಲಿ ವಿಷ ಪದಾರ್ಥ ಬೆರೆಸಿ ಇಟ್ಟಿದ್ದು ಅದನ್ನು ಹಕ್ಕಿಗಳು ಸೇವಿಸಿ ಸಾವಿಗೀಡಾಗಿರಬಹುದೇ ಎಂಬ ಸಂಶಯವೂ ಇದೆ. ಟವರ್ ಬಳಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೆಟ್ಟಿಲಲ್ಲೂ ಕಾಗೆಯೊಂದು ಸತ್ತು ಬಿದ್ದಿದೆ. ಟವರ್ ನಿಂದ ಇಪ್ಪತ್ತು ಮೀಟರ್ ದೂರದಲ್ಲಿಯೂ ಹಕ್ಕಿಗಳ ಕಳೇಬರವಿದೆ.
ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮ ಪಂಚಾಯತ್ ಪಿಡಿಓ, ಸ್ಥಳೀಯ ಮುಖಂಡರು ಭೇಟಿ ನೀಡಿ ಪಂಚಾಯತ್ ಅಧ್ಯಕ್ಷರಿಗೆ ಈ ಬಗ್ಗೆ ಮೌಖಿಕ ದೂರು ನೀಡಿದ್ದಾರೆ.
ಹಕ್ಕಿಗಳು ಹೇಗೆ ಸಾವನ್ನಪ್ಪಿವೆ ಎಂಬುದನ್ನು ಖಚಿತಪಡಿಸಲು ಅದರ ಕಳೇಬರಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ತಿಳಿಸಿದ್ದಾರೆ.
Mangalore Naringana birds found dead near new mobile tower, residents in fear.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm