ಬ್ರೇಕಿಂಗ್ ನ್ಯೂಸ್
27-07-24 10:09 pm Mangalore Correspondent ಕರಾವಳಿ
ಮಂಗಳೂರು, ಜು.27: ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ತಮ್ಮ ಸಂಕಷ್ಟ ಪರಿಹಾರಕ್ಕಾಗಿ ಉಳ್ಳಾಲ ತಾಲೂಕಿನ ತೊಕ್ಕೊಟ್ಟಿನ ಕೊರಗಜ್ಜನ ಕಟ್ಟೆಯಲ್ಲಿ ಕೋಲ ಸೇವೆ ನಡೆಸಿದ್ದು, ಪತ್ನಿ, ಮಕ್ಕಳೊಂದಿಗೆ ಕೋಲ ವೀಕ್ಷಿಸಿದರು.
ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಗ್ರ್ಯಾಂಡ್ ಸಿಟಿ ವಾಣಿಜ್ಯ ಮಳಿಗೆಯ ಮುಂಭಾಗದ ಸಾರ್ವಜನಿಕ ಕೊರಗಜ್ಜನ ಕಟ್ಟೆಯಲ್ಲಿ ವಿನಯ್ ಕುಲಕರ್ಣಿ ಕುಟುಂಬ ಸಮೇತರಾಗಿ ಕೋಲ ಸೇವೆಯಲ್ಲಿ ಪಾಲ್ಗೊಂಡರು. ಸ್ಪೀಕರ್ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ಆಲಿ ಅವರು ಕುಲಕರ್ಣಿ ಕುಟುಂಬಕ್ಕೆ ಸಾಥ್ ನೀಡಿ ಜತೆಯಲ್ಲೇ ಕೋಲ ವೀಕ್ಷಿಸಿದರು.




ವಿಧಾನಸಭಾ ಚುನಾವಣಾ ಪೂರ್ವದಲ್ಲಿಯೇ ಕೋಲ ಸೇವೆಯ ಬಗ್ಗೆ ಮಂಗಳೂರಿನ ಕಾಂಗ್ರೆಸ್ ನ ಸ್ನೇಹಿತರು ಹೇಳಿದ್ದರು. ಈಗ ಘಳಿಗೆ ಕೂಡಿ ಬಂದ ಹಿನ್ನೆಲೆ ಕೋಲ ಸೇವೆ ಕೊಟ್ಟಿದ್ದೇನೆ ಎಂದು ವಿನಯ್ ಕುಲಕರ್ಣಿ ಇದೇ ವೇಳೆ ಮಾಧ್ಯಮಗಳಿಗೆ ಹೇಳಿದರು.
ಬಿಜೆಪಿ ಜಿ.ಪಂ ಸದಸ್ಯ ಯೋಗೇಶ ಗೌಡ ಗೌಡರ್ ಹತ್ಯೆ ಪ್ರಕರಣದ ಆರೋಪಿಯಾಗಿರೋ ವಿನಯ್ ಕುಲಕರ್ಣಿಗೆ ಸಿಬಿಐ ನ್ಯಾಯಾಲಯವು ಧಾರವಾಡ ಗ್ರಾಮಾಂತರ ಕ್ಷೇತ್ರ ಪ್ರವೇಶಿಸದಂತೆ ನಿರ್ಬಂಧ ಹೇರಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕ್ಷೇತ್ರಕ್ಕೆ ಭೇಟಿ ನೀಡದೆಯೇ ಬಿಜೆಪಿ ಅಭ್ಯರ್ಥಿ ವಿರುದ್ಧ ಕುಲಕರ್ಣಿ ಭರ್ಜರಿ ಮತಗಳ ಅಂತರಗಳಿಂದ ಗೆದ್ದಿದ್ದರು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಶಾಸಕರಾದರೂ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ಈಗಲೂ ನಿರ್ಬಂಧ ಮುಂದುವರಿದಿದೆ. ಮುಂದಿನ ತಿಂಗಳು ಇದೇ ವಿಚಾರದಲ್ಲಿ ಕೋರ್ಟ್ ವಿಚಾರಣೆ ನಡೆಯಲಿದೆ ಎಂದು ಮಾಹಿತಿ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ವಿನಯ್ ಕುಲಕರ್ಣಿ ಅವರು ಸಂಕಷ್ಟ ನಿವಾರಣೆಗಾಗಿ ತೊಕ್ಕೊಟ್ಟಿನಲ್ಲಿ ಶನಿವಾರ ಸಂಜೆ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ.
Dharwad Vinay Kulkarni performs kola along with family in Mangalore. MLA speaker UT Khader brother Iftikar alo and many others joined with Kulkarni to perform kola at Thokottu in Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm