ಬ್ರೇಕಿಂಗ್ ನ್ಯೂಸ್
28-07-24 09:03 pm Mangalore Correspondent ಕರಾವಳಿ
ಮಂಗಳೂರು, ಜುಲೈ.28: ಶಾಸಕನಾದರೂ ಕೊಲೆ ಪ್ರಕರಣದಿಂದಾಗಿ ಕ್ಷೇತ್ರ ನಿರ್ಬಂಧ ಎದುರಿಸುತ್ತಿರುವ ಮಾಜಿ ಸಚಿವ, ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ತುಳುನಾಡಿನ ಕಾರಣಿಕದ ದೈವ ಕೊರಗಜ್ಜ ಅಭಯ ನೀಡಿದ್ದಾನೆ. 48 ದಿನಗಳ ಒಳಗೆ ಸಮಸ್ಯೆ ಬಗೆಹರಿಸುವುದಾಗಿ ಕೊರಗಜ್ಜ ಕೋಲದ ಸಂದರ್ಭದಲ್ಲಿ ವಿನಯ ಕುಲಕರ್ಣಿಗೆ ಅಭಯ ನೀಡಿದ್ದಾಗಿ ಹೇಳಲಾಗುತ್ತಿದೆ.
ಹೆಣ್ಣಿನ ಕಾರಣದಿಂದಲೇ ಈ ಎಲ್ಲಾ ಸಂಕಷ್ಟ ಎಂದು ವಿನಯ ಕುಲಕರ್ಣಿಗೆ ದೈವ ನುಡಿ ಕೊಟ್ಟಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಲ್ಲದೆ, ಅಧರ್ಮದಲ್ಲಿ ಹೋದವರನ್ನ ನಾನು ನೋಡಿಕೊಳ್ತೇನೆ. ಸಂಕಷ್ಟ ನಿವಾರಿಸಿ ಒಳಿತು ಮಾಡುತ್ತೇನೆ. ಸಂಕಷ್ಟ ನಿವಾರಣೆ ಬಳಿಕ ಸಂತೋಷದಿಂದ ಕೋಲಸೇವೆ ನೀಡುವಂತೆ ದೈವ ನುಡಿ ಕೊಟ್ಟಿದೆಯಂತೆ.


ಮಂಗಳೂರು ಹೊರವಲಯದ ತೊಕ್ಕೊಟ್ಟಿನ ಕೊರಗಜ್ಜ ಸನ್ನಿಧಿಯಲ್ಲಿ ಶನಿವಾರ ರಾತ್ರಿ ಕೋಲ ಸೇವೆ ನಡೆದಿದ್ದು ಧಾರವಾಡ ಶಾಸಕ ವಿನಯ ಕುಲಕರ್ಣಿ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಕೋಲದ ಕೊನೆಯಲ್ಲಿ ಮುಂದಿನ ತಿಂಗಳು ಕ್ಷೇತ್ರ ಪ್ರವೇಶಕ್ಕಿರುವ ನಿರ್ಬಂಧ ಕುರಿತ ಕೋರ್ಟ್ ತೀರ್ಪಿನ ಬಗ್ಗೆ ಪ್ರಸ್ತಾಪ ಮಾಡಿದ್ದು ಮಗನಿಗೆ ಅಪಘಾತ ಸಂಭವಿಸಿ ಆರೋಗ್ಯ ಸಮಸ್ಯೆ ಎದುರಾಗಿರುವ ಬಗ್ಗೆಯೂ ವಿನಯ ಕುಲಕರ್ಣಿ ಅಳಲು ಹೇಳಿಕೊಂಡಿದ್ದರು.
ಸಂಕಷ್ಟವನ್ನು ನಿವಾರಿಸುವ ಅಭಯ ನೀಡಿದ ಕೊರಗಜ್ಜ ದೈವ, ತಪ್ಪು ಮಾಡೋದು ಸಹಜ, ತಿದ್ದಿಕೊಂಡು ಮುಂದುವರಿಯುವುದು ಉತ್ತಮ ಗುಣ. ಯಾವುದು ಸರಿ ಯಾವುದು ತಪ್ಪು ಎಂಬ ಲೆಕ್ಕ ನನ್ನ ಬಳಿ ಇದೆ. ನಿಮ್ಮ ಮುಂದಿನ ಭವಿಷ್ಯದ ಲೆಕ್ಕವು ನನ್ನ ಬಳಿ ಇದೆ. ಕಲಿಯುಗದಲ್ಲಿ ಆಗುವುದಿಲ್ಲ ಎಂಬುದನ್ನು ನಾನು ಮಾಡಿಸುತ್ತೇನೆ. ಕಷ್ಟವನ್ನು ನಿವಾರಿಸುತ್ತೇನೆ. ನಿಮ್ಮ ಜೊತೆ ಒಳ್ಳೆಯವರು ಇದ್ದಾರೆ, ಕೆಟ್ಟವರೂ ಇದ್ದಾರೆ. ಎಲ್ಲಾ ಸಂಕಷ್ಟವನ್ನು ನಿವಾರಿಸಿ ಕುಟುಂಬದ ರಕ್ಷಣೆ ಮಾಡುವುದಾಗಿ ಅಭಯ ನೀಡಿದ್ದಾನೆ.
Vijay Kulkarni kola in Mangalore, daiva gives 48 days time for all to turn out well
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm