ಬ್ರೇಕಿಂಗ್ ನ್ಯೂಸ್
29-07-24 10:08 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ನಗರದ ಮಣ್ಣಗುಡ್ಡ, ಸೆಂಟ್ರಲ್ ಮಾರುಕಟ್ಟೆ, ಏರ್ಪೋರ್ಟ್ ರಸ್ತೆಯಲ್ಲಿ ಏಕಾಏಕಿ ಬೀದಿ ಬದಿ ವ್ಯಾಪಾರಿಗಳ ಗೂಡಂಗಡಿಗಳನ್ನು ತೆರವುಗೊಳಿಸಲು ಮಹಾನಗರ ಪಾಲಿಕೆಯಿಂದ ಬುಲ್ಡೋಜರ್ ನುಗ್ಗಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ಕ್ರಿಮಿನಲ್ ಹಿನ್ನೆಲೆಯ, ಭೂ ಅತಿಕ್ರಮಣದಾರರ ವಿರುದ್ಧ ಜೆಸಿಬಿ ನುಗ್ಗಿಸಿದ ರೀತಿ ಮಂಗಳೂರಿನಲ್ಲಿ ಬಿಜೆಪಿ ಆಡಳಿತ ಬಡ ಬೀದಿ ವ್ಯಾಪಾರಿಗಳ ಮೇಲೆ ಜೆಸಿಬಿಯಲ್ಲಿ ಸವಾರಿ ಮಾಡಿದೆ.
ಸೋಮವಾರ ಬೆಳಗ್ಗೆ ಗಾಂಧಿನಗರದ ಮಂಗಳಾ ಸ್ಟೇಡಿಯಂ ಎದುರಲ್ಲಿರುವ ಗೂಡಂಗಡಿಗಳನ್ನು ತೆರವು ಮಾಡಲು ಯತ್ನಿಸಿದ್ದಾರೆ. ಈ ವೇಳೆ, ವ್ಯಾಪಾರಿಗಳು ಅಡ್ಡ ಬಂದಿದ್ದು, ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜೆಸಿಬಿಯಿಂದ ಗೂಡಂಗಡಿಗಳನ್ನು ತೆರವುಗೊಳಿಸಲು ಮುಂದಾಗುತ್ತಿದ್ದಂತೆ ಜೋರು ಗಲಾಟೆ ಮಾಡಿದ್ದು ಪೊಲೀಸರು ತಡೆದ ವ್ಯಾಪಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಾಲಿಕೆಯ ಅಧಿಕಾರಿಗಳು ಜೆಸಿಬಿಯಿಂದ ಗೂಡಂಗಡಿಗಳನ್ನು ಒಡೆದು ಹಾಕಿಸಿ, ಟಿಪ್ಪರ್ ಲಾರಿಗಳಿಗೆ ತುಂಬಿಸಿದ್ದಾರೆ.




ಆನಂತರ, ಸೆಂಟ್ರಲ್ ಮಾರುಕಟ್ಟೆ ಆವರಣದಲ್ಲಿಯೂ ತಳ್ಳುಗಾಡಿಗಳನ್ನು ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದವರನ್ನು ಎಬ್ಬಿಸಿ, ಗಾಡಿಗಳನ್ನು ಪುಡಿಗಟ್ಟಿದ್ದಾರೆ. ಅದೇ ರೀತಿಯಲ್ಲಿ ಏರ್ಪೋರ್ ರಸ್ತೆಯ ಯೆಯ್ಯಾಡಿ ಪರಿಸರದಲ್ಲಿಯೂ ಗೂಡಂಗಡಿಗಳನ್ನು ತೆರವು ಮಾಡಲಾಗಿದೆ. ರಸ್ತೆ ಬದಿ ಗೂಡಂಗಡಿ ಇಟ್ಟು ಆಮ್ಲೆಟ್, ಚಹಾ ತಿಂಡಿಗಳನ್ನು ಮಾರುತ್ತಿದ್ದ ಬಡ ವ್ಯಾಪಾರಿಗಳ ಬದುಕಿನ ಮೇಲೆ ಜೆಸಿಬಿ ಸವಾರಿ ಮಾಡಿದೆ. ಕೆಲವೊಂದು ಖಾಲಿ ಅಂಗಡಿಗಳನ್ನೂ ಪುಡಿ ಮಾಡಿರುವುದು ವಿಡಿಯೋ ವೈರಲ್ ಆಗಿದೆ. ಜಾಲತಾಣದಲ್ಲಿ ಬಿಜೆಪಿ ಆಡಳಿತದ ಜೆಸಿಬಿ ದಾಳಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.




ಈ ಬಗ್ಗೆ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅವರಲ್ಲಿ ಕೇಳಿದಾಗ, ಮೊನ್ನೆ ಫೋನ್ ಇನ್ ಕಾರ್ಯಕ್ರಮದಲ್ಲಿ ಹಲವರು ಬೀದಿ ವ್ಯಾಪಾರಿಗಳಿಂದ ತೊಂದರೆ ಆಗುತ್ತಿರುವ ಬಗ್ಗೆ ದೂರು ಹೇಳಿಕೊಂಡಿದ್ದರು. ಈ ಬಗ್ಗೆ ಸೋಮವಾರದಿಂದ ಕಾರ್ಯಾಚರಣೆ ಮಾಡಿಸುತ್ತೇನೆ ಎಂದು ಹೇಳಿದ್ದೆ. ಆನಂತರ, ಮಂಗಳಾ ಸ್ಟೇಡಿಯಂ ಬಳಿಯೂ ಕ್ರೀಡಾಪಟುಗಳು ಬರುವ ದಾರಿಯಲ್ಲೇ ಗೂಡಂಗಡಿ ಇಟ್ಟು ವ್ಯಾಪಾರ ಮಾಡುತ್ತಿರುವ ಬಗ್ಗೆ ಆಕ್ಷೇಪಿಸಿ ದೂರುಗಳು ಬಂದಿದ್ದವು. ಇವತ್ತು ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಕಾರ್ಯಾಚರಣೆ ಮಾಡಿದ್ದಾರೆ. ಮಣ್ಣಗುಡ್ಡದಲ್ಲಿ ಅಡ್ಡಿ ಪಡಿಸಿದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ತೆರವು ಕಾರ್ಯಾಚರಣೆಗೂ ಮುನ್ನ ಪಾಲಿಕೆಯಿಂದ ನೋಟೀಸ್ ಅಥವಾ ಸೂಚನೆ ಕೊಡಬೇಕಿತ್ತು. ಯಾವುದೇ ಸೂಚನೆ ಕೊಡದೆಯೇ ನೇರವಾಗಿ ಕಾರ್ಯಾಚರಣೆ ನಡೆಸಿದ್ದು, ಬಡವರ ಅನ್ನದ ಬಟ್ಟಲಿಗೆ ಕೊಳ್ಳಿ ಇಟ್ಟಿದ್ದಾರೆ ಎಂದು ವ್ಯಾಪಾರಿಗಳು ನೋವು ವ್ಯಕ್ತಪಡಿಸಿದ್ದಾರೆ.
Illegal petteytshops in Mangalore demolished by MCC, shop vendors taken intonl custody. Fight erupted between shop owners and mcc officals over destroying of petty shops using JCB.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 06:08 pm
HK News Staffer
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am