ಬ್ರೇಕಿಂಗ್ ನ್ಯೂಸ್
29-07-24 10:08 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ನಗರದ ಮಣ್ಣಗುಡ್ಡ, ಸೆಂಟ್ರಲ್ ಮಾರುಕಟ್ಟೆ, ಏರ್ಪೋರ್ಟ್ ರಸ್ತೆಯಲ್ಲಿ ಏಕಾಏಕಿ ಬೀದಿ ಬದಿ ವ್ಯಾಪಾರಿಗಳ ಗೂಡಂಗಡಿಗಳನ್ನು ತೆರವುಗೊಳಿಸಲು ಮಹಾನಗರ ಪಾಲಿಕೆಯಿಂದ ಬುಲ್ಡೋಜರ್ ನುಗ್ಗಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ಕ್ರಿಮಿನಲ್ ಹಿನ್ನೆಲೆಯ, ಭೂ ಅತಿಕ್ರಮಣದಾರರ ವಿರುದ್ಧ ಜೆಸಿಬಿ ನುಗ್ಗಿಸಿದ ರೀತಿ ಮಂಗಳೂರಿನಲ್ಲಿ ಬಿಜೆಪಿ ಆಡಳಿತ ಬಡ ಬೀದಿ ವ್ಯಾಪಾರಿಗಳ ಮೇಲೆ ಜೆಸಿಬಿಯಲ್ಲಿ ಸವಾರಿ ಮಾಡಿದೆ.
ಸೋಮವಾರ ಬೆಳಗ್ಗೆ ಗಾಂಧಿನಗರದ ಮಂಗಳಾ ಸ್ಟೇಡಿಯಂ ಎದುರಲ್ಲಿರುವ ಗೂಡಂಗಡಿಗಳನ್ನು ತೆರವು ಮಾಡಲು ಯತ್ನಿಸಿದ್ದಾರೆ. ಈ ವೇಳೆ, ವ್ಯಾಪಾರಿಗಳು ಅಡ್ಡ ಬಂದಿದ್ದು, ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜೆಸಿಬಿಯಿಂದ ಗೂಡಂಗಡಿಗಳನ್ನು ತೆರವುಗೊಳಿಸಲು ಮುಂದಾಗುತ್ತಿದ್ದಂತೆ ಜೋರು ಗಲಾಟೆ ಮಾಡಿದ್ದು ಪೊಲೀಸರು ತಡೆದ ವ್ಯಾಪಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಾಲಿಕೆಯ ಅಧಿಕಾರಿಗಳು ಜೆಸಿಬಿಯಿಂದ ಗೂಡಂಗಡಿಗಳನ್ನು ಒಡೆದು ಹಾಕಿಸಿ, ಟಿಪ್ಪರ್ ಲಾರಿಗಳಿಗೆ ತುಂಬಿಸಿದ್ದಾರೆ.
ಆನಂತರ, ಸೆಂಟ್ರಲ್ ಮಾರುಕಟ್ಟೆ ಆವರಣದಲ್ಲಿಯೂ ತಳ್ಳುಗಾಡಿಗಳನ್ನು ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದವರನ್ನು ಎಬ್ಬಿಸಿ, ಗಾಡಿಗಳನ್ನು ಪುಡಿಗಟ್ಟಿದ್ದಾರೆ. ಅದೇ ರೀತಿಯಲ್ಲಿ ಏರ್ಪೋರ್ ರಸ್ತೆಯ ಯೆಯ್ಯಾಡಿ ಪರಿಸರದಲ್ಲಿಯೂ ಗೂಡಂಗಡಿಗಳನ್ನು ತೆರವು ಮಾಡಲಾಗಿದೆ. ರಸ್ತೆ ಬದಿ ಗೂಡಂಗಡಿ ಇಟ್ಟು ಆಮ್ಲೆಟ್, ಚಹಾ ತಿಂಡಿಗಳನ್ನು ಮಾರುತ್ತಿದ್ದ ಬಡ ವ್ಯಾಪಾರಿಗಳ ಬದುಕಿನ ಮೇಲೆ ಜೆಸಿಬಿ ಸವಾರಿ ಮಾಡಿದೆ. ಕೆಲವೊಂದು ಖಾಲಿ ಅಂಗಡಿಗಳನ್ನೂ ಪುಡಿ ಮಾಡಿರುವುದು ವಿಡಿಯೋ ವೈರಲ್ ಆಗಿದೆ. ಜಾಲತಾಣದಲ್ಲಿ ಬಿಜೆಪಿ ಆಡಳಿತದ ಜೆಸಿಬಿ ದಾಳಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ಬಗ್ಗೆ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅವರಲ್ಲಿ ಕೇಳಿದಾಗ, ಮೊನ್ನೆ ಫೋನ್ ಇನ್ ಕಾರ್ಯಕ್ರಮದಲ್ಲಿ ಹಲವರು ಬೀದಿ ವ್ಯಾಪಾರಿಗಳಿಂದ ತೊಂದರೆ ಆಗುತ್ತಿರುವ ಬಗ್ಗೆ ದೂರು ಹೇಳಿಕೊಂಡಿದ್ದರು. ಈ ಬಗ್ಗೆ ಸೋಮವಾರದಿಂದ ಕಾರ್ಯಾಚರಣೆ ಮಾಡಿಸುತ್ತೇನೆ ಎಂದು ಹೇಳಿದ್ದೆ. ಆನಂತರ, ಮಂಗಳಾ ಸ್ಟೇಡಿಯಂ ಬಳಿಯೂ ಕ್ರೀಡಾಪಟುಗಳು ಬರುವ ದಾರಿಯಲ್ಲೇ ಗೂಡಂಗಡಿ ಇಟ್ಟು ವ್ಯಾಪಾರ ಮಾಡುತ್ತಿರುವ ಬಗ್ಗೆ ಆಕ್ಷೇಪಿಸಿ ದೂರುಗಳು ಬಂದಿದ್ದವು. ಇವತ್ತು ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಕಾರ್ಯಾಚರಣೆ ಮಾಡಿದ್ದಾರೆ. ಮಣ್ಣಗುಡ್ಡದಲ್ಲಿ ಅಡ್ಡಿ ಪಡಿಸಿದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ತೆರವು ಕಾರ್ಯಾಚರಣೆಗೂ ಮುನ್ನ ಪಾಲಿಕೆಯಿಂದ ನೋಟೀಸ್ ಅಥವಾ ಸೂಚನೆ ಕೊಡಬೇಕಿತ್ತು. ಯಾವುದೇ ಸೂಚನೆ ಕೊಡದೆಯೇ ನೇರವಾಗಿ ಕಾರ್ಯಾಚರಣೆ ನಡೆಸಿದ್ದು, ಬಡವರ ಅನ್ನದ ಬಟ್ಟಲಿಗೆ ಕೊಳ್ಳಿ ಇಟ್ಟಿದ್ದಾರೆ ಎಂದು ವ್ಯಾಪಾರಿಗಳು ನೋವು ವ್ಯಕ್ತಪಡಿಸಿದ್ದಾರೆ.
Illegal petteytshops in Mangalore demolished by MCC, shop vendors taken intonl custody. Fight erupted between shop owners and mcc officals over destroying of petty shops using JCB.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 11:07 pm
Mangalore Correspondent
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am