ಬ್ರೇಕಿಂಗ್ ನ್ಯೂಸ್
31-07-24 02:40 pm Mangalore Correspondent ಕರಾವಳಿ
ಉಡುಪಿ, ಜುಲೈ 31: ಕರಾವಳಿಯ ಯಕ್ಷಗಾನ ರಂಗದಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು (26) ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸೇವೆ ನೀಡಿದ್ದ ಗುರುಪ್ರಸಾದ್ ನೀರ್ಜೆಡ್ಡು 26 ವರ್ಷಕ್ಕೆ ತಮ್ಮ ಜೀವನವನ್ನು ಅಂತ್ಯಗೊಳಿಸಿಕೊಂಡಿದ್ದಾರೆ.
ಗುರುಪ್ರಸಾದ್ ನೀರ್ಜೆಡ್ಡು ಅವರು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜುಲೈ 27ರಂದು ಇಲಿ ಪಾಷಾಣ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ನಿನ್ನೆ (ಜುಲೈ 30) ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆಗೆ ಕಾರಣ ಮಾತ್ರ ಇನ್ನೂ ನಿಗೂಢವಾಗಿದೆ.
ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗರಿಂದ ಗುರುಪ್ರಸಾದ್ ಯಕ್ಷಗಾನ ನೃತ್ಯಾಭ್ಯಾಸ ಮಾಡಿದರು. ಭವಿಷ್ಯದಲ್ಲಿ ಭರವಸೆಯ ಕಲಾವಿದರಾಗಿದ್ದ ಇವರು ಮುಂದಿನ ತಿರುಗಾಟಕ್ಕೆ ಕುಂದಾಪುರ ತಾಲೂಕಿನ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು. ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು, ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಈಗಾಗಲೇ ಸೇವೆ ಸಲ್ಲಿಸಿದ್ದರು.
ಸ್ತ್ರೀವೇಷಧಾರಿಯಾಗಿ ತಮ್ಮ ಕುಣಿತ, ಮಾತು ಹಾಗೂ ಕಲೆಯಿಂದ ಅಪಾರ ಯಕ್ಷ ಅಭಿಮಾನಿಗಳನ್ನು ಹೊಂದಿದ್ದ ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆಗೆ ಶರಣಾಗಿರುವು ಮಾತ್ರ ಶಾಕಿಂಗ್ ವಿಚಾರವಾಗಿದೆ. 12 ವರ್ಷ ಸ್ತ್ರೀ ವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು ಅವರು ತಾಯಿ, ತಮ್ಮ, ಸ್ನೇಹಿತರು ಹಾಗೂ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಯಕ್ಷಗಾನದ ಅಭಿಮಾನಿಗಳು ಕೂಡ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
Udupi Yakshagana artiste Guruprasad Neerjeddu dies by suicide. The deceased, Guruprasad Neerjeddu (26), had donned the female roles in Mandarthi, Madamakki, Amriteshwari, Saligrama and Marankatte Melas (troupes) for about 12 years.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm