ಬ್ರೇಕಿಂಗ್ ನ್ಯೂಸ್
31-07-24 02:40 pm Mangalore Correspondent ಕರಾವಳಿ
ಉಡುಪಿ, ಜುಲೈ 31: ಕರಾವಳಿಯ ಯಕ್ಷಗಾನ ರಂಗದಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು (26) ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸೇವೆ ನೀಡಿದ್ದ ಗುರುಪ್ರಸಾದ್ ನೀರ್ಜೆಡ್ಡು 26 ವರ್ಷಕ್ಕೆ ತಮ್ಮ ಜೀವನವನ್ನು ಅಂತ್ಯಗೊಳಿಸಿಕೊಂಡಿದ್ದಾರೆ.
ಗುರುಪ್ರಸಾದ್ ನೀರ್ಜೆಡ್ಡು ಅವರು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜುಲೈ 27ರಂದು ಇಲಿ ಪಾಷಾಣ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ನಿನ್ನೆ (ಜುಲೈ 30) ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆಗೆ ಕಾರಣ ಮಾತ್ರ ಇನ್ನೂ ನಿಗೂಢವಾಗಿದೆ.
ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗರಿಂದ ಗುರುಪ್ರಸಾದ್ ಯಕ್ಷಗಾನ ನೃತ್ಯಾಭ್ಯಾಸ ಮಾಡಿದರು. ಭವಿಷ್ಯದಲ್ಲಿ ಭರವಸೆಯ ಕಲಾವಿದರಾಗಿದ್ದ ಇವರು ಮುಂದಿನ ತಿರುಗಾಟಕ್ಕೆ ಕುಂದಾಪುರ ತಾಲೂಕಿನ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು. ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು, ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಈಗಾಗಲೇ ಸೇವೆ ಸಲ್ಲಿಸಿದ್ದರು.
ಸ್ತ್ರೀವೇಷಧಾರಿಯಾಗಿ ತಮ್ಮ ಕುಣಿತ, ಮಾತು ಹಾಗೂ ಕಲೆಯಿಂದ ಅಪಾರ ಯಕ್ಷ ಅಭಿಮಾನಿಗಳನ್ನು ಹೊಂದಿದ್ದ ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆಗೆ ಶರಣಾಗಿರುವು ಮಾತ್ರ ಶಾಕಿಂಗ್ ವಿಚಾರವಾಗಿದೆ. 12 ವರ್ಷ ಸ್ತ್ರೀ ವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು ಅವರು ತಾಯಿ, ತಮ್ಮ, ಸ್ನೇಹಿತರು ಹಾಗೂ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಯಕ್ಷಗಾನದ ಅಭಿಮಾನಿಗಳು ಕೂಡ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
Udupi Yakshagana artiste Guruprasad Neerjeddu dies by suicide. The deceased, Guruprasad Neerjeddu (26), had donned the female roles in Mandarthi, Madamakki, Amriteshwari, Saligrama and Marankatte Melas (troupes) for about 12 years.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am