ಬ್ರೇಕಿಂಗ್ ನ್ಯೂಸ್
31-07-24 08:38 pm Mangalore Correspondent ಕರಾವಳಿ
ಮಂಗಳೂರು, ಜುಲೈ.31: ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿ ದಿಢೀರ್ ಕುಸಿದು ಬಿದ್ದ ಸಂದರ್ಭದಲ್ಲಿ ಖಾಸಗಿ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ಆಂಬುಲೆನ್ಸ್ ರೀತಿಯಲ್ಲಿ ಅತಿವೇಗದಲ್ಲಿ ಚಲಾಯಿಸಿ ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದ ಘಟನೆ ನಗರದಲ್ಲಿ ನಡೆದಿದ್ದು, ಬಸ್ ಸಿಬಂದಿಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಮಂಗಳವಾರ ಸಂಜೆ ಕುಂಜತ್ತ್ ಬೈಲ್- ಮಂಗಳಾದೇವಿ ನಡುವೆ ಸಂಚರಿಸುವ 13- ಎಫ್ ನಂಬರಿನ ಖಾಸಗಿ ಬಸ್ಸಿನಲ್ಲಿ ಘಟನೆ ನಡೆದಿದೆ. ಸಂಜೆ ವೇಳೆಗೆ ಕುಳೂರಿನಿಂದ ಜ್ಯೋತಿಯತ್ತ ಬರುತ್ತಿದ್ದ ಯುವತಿಗೆ ಲೇಡಿಹಿಲ್ ತಲುಪಿದಾಗ ಅಸ್ವಸ್ಥತೆ ಉಂಟಾಗಿತ್ತು. ಪಿವಿಎಸ್ ತಲುಪಿದಾಗ ಕುಸಿದು ಬಿದ್ದಿದ್ದು, ಬಂಟ್ಸ್ ಹಾಸ್ಟೆಲ್, ಜ್ಯೋತಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಇದ್ದರೂ ಅಲರ್ಟ್ ಸೈರನ್ ಮೊಳಗಿಸುತ್ತಾ ಬಸ್ಸನ್ನು ನೇರವಾಗಿ ಕಂಕನಾಡಿಯತ್ತ ನುಗ್ಗಿಸಿದ್ದಾರೆ.
ಎಲ್ಲಿಯೂ ಪಿಕಪ್ ಮಾಡದೆ ಇಳಿಯುವುದಕ್ಕೆ ಮಾತ್ರ ಅವಕಾಶ ಕೊಟ್ಟು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯತ್ತ ಒಯ್ದು ಅಲ್ಲಿ ಯುವತಿಯನ್ನು ಆಸ್ಪತ್ರೆಗೆ ತಲುಪಿಸಿ ಚಿಕಿತ್ಸೆ ಕೊಡಿಸುವಲ್ಲಿ ನೆರವಾಗಿದ್ದಾರೆ. ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ನಿರ್ವಾಹಕ ಮಹೇಶ್ ಪೂಜಾರಿ ಅವರ ಕೆಲಸಕ್ಕೆ ಸಾರ್ವಜನಿಕರು ಶಹಭಾಷ್ ಹೇಳಿದ್ದಾರೆ. ತುರ್ತಾಗಿ ಯುವತಿಯನ್ನು ಆಸ್ಪತ್ರೆಗೆ ಒಯ್ದಿದ್ದರಿಂದ ಆಕೆ ಬದುಕುಳಿದಿದ್ದಾಳೆ ಎಂದು ತಿಳಿದುಬಂದಿದೆ.
Mangalore Krishna prasad city bus turns into ambulance, rushes medical emergency student to hospital. The bus on Route 13F was plying from Kunjathbail to Mangaladevi temple. Gajendra Kundar was driving while Mahesh Poojary was the conductor. Suresh, another driver who had to take over from Kundar, was also in the bus. The video of this has gone viral on social media
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm