ಬ್ರೇಕಿಂಗ್ ನ್ಯೂಸ್
01-08-24 02:36 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಫಲ್ಗುಣಿ ನದಿಯ ಹರಿಯುವ ಉದ್ದಕ್ಕೂ ನಿನ್ನೆ ರಾತ್ರಿ ದಿಢೀರ್ ನೆರೆ ಬಂದಿದೆ. ವೇಣೂರು, ಹೊಸಂಗಡಿ, ಪೊಳಲಿ ಸಮೀಪದ ಅಮ್ಮುಂಜೆ, ಉಳಾಯಿಬೆಟ್ಟು ಆಸುಪಾಸಿನಲ್ಲಿ ರಾತ್ರೋರಾತ್ರಿ ನೀರು ಉಕ್ಕಿ ಬಂದಿದ್ದು, ಪರಿಸರದ ಹಲವಾರು ಮನೆಗಳಿಗೆ ನುಗ್ಗಿದೆ. ಇದರಿಂದಾಗಿ ಜನರು ಮನೆ ಬಿಟ್ಟು ಹೊರಬಂದು ಪರದಾಟ ಅನುಭವಿಸಿದ್ದಾರೆ.
ಇತ್ತ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಸ್ವಲ್ಪ ಮಟ್ಟಿಗೆ ಇಳಿಕೆಯಾದರೂ, ಫಲ್ಗುಣಿ ನದಿಯಲ್ಲಿ ಮಾತ್ರ ನೆರೆ ಬಂದಿರುವುದು ಹೇಗೆ ಎಂಬ ಪ್ರಶ್ನೆ ಬಂದಿದೆ. ಗುರುಪುರದಲ್ಲಿ ಹೊಸ ಹೆದ್ದಾರಿಗೆ ಅವೈಜ್ಞಾನಿಕ ರೀತಿ ಮತ್ತು ತರಾತುರಿಯಲ್ಲಿ ಕಟ್ಟಲಾಗುತ್ತಿರುವ ಅಣೆಕಟ್ಟು ಹಾಗೂ ಕುಳೂರಿನಲ್ಲಿ ಎರಡು ವರ್ಷಗಳಿಂದಲೂ ಅಣೆಕಟ್ಟು ಸಲುವಾಗಿ ನದಿಗೆ ಮಣ್ಣು ತುಂಬಿದ್ದರಿಂದ ಈ ರೀತಿಯ ನೆರೆ ಬಂದಿದೆ ಎನ್ನಲಾಗುತ್ತಿದೆ.
ಹೊಸಂಗಡಿ, ವೇಣೂರಿನಲ್ಲಿ ಈ ರೀತಿ ನೆರೆ ಬಂದಿದ್ದು ಭಾರೀ ಕಡಿಮೆ. ಅಲ್ಲದೆ, ಪೊಳಲಿ ಆಸುಪಾಸಿನಲ್ಲಿಯೂ ನೆರೆ ಬಂದದ್ದಿಲ್ಲ. ಉಳಾಯಿಬೆಟ್ಟು ಪರಿಸರದಲ್ಲಿ ಹೆಚ್ಚು ಮಳೆಯಾದರೆ ಈ ಹಿಂದೆಯೂ ನೀರು ಉಕ್ಕಿ ಕೃಷಿಗೆ ನುಗ್ಗಿದ್ದಿದೆ. ಆದರೆ, ಫಲ್ಗುಣಿ ನದಿ ಹರಿಯುವ ಎಲ್ಲ ಕಡೆಯೂ ಈ ಬಾರಿ ನೆರೆ ಬಂದಿದೆ. ಅದ್ಯಪಾಡಿ ಬಳಿಯ ಮುಗೇರಕುದ್ರು ಎನ್ನುವ ಪ್ರದೇಶವಂತೂ ಒಂದು ತಿಂಗಳಿನಿಂದ ಮುಳುಗಡೆಯಾಗಿದೆ. ಅದಕ್ಕೆ ಅಲ್ಲಿನ ಅವೈಜ್ಞಾನಿಕ ಅಣೆಕಟ್ಟು ಕಾರಣವಾದರೆ, ಬೇರೆಲ್ಲ ಕಡೆ ದಿಢೀರ್ ನೆರೆ ನೀರು ಉಕ್ಕುವುದಕ್ಕೆ ಮಳೆ ಎಷ್ಟು ಕಾರಣವೋ, ಸೇತುವೆಯ ಕಾರಣಕ್ಕೆ ನದಿಗೆ ಮಣ್ಣು ತುಂಬಿಸಿರುವುದೂ ಅಷ್ಟೇ ಕಾರಣ.
ಪೊಳಲಿ, ಉಳಾಯಿಬೆಟ್ಟು ಪ್ರದೇಶದಲ್ಲಿ ರಾತ್ರಿ ವೇಳೆ ಮನೆಗೆ ನೀರು ನುಗ್ಗಿದ್ದರಿಂದ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ವೇಣೂರು, ಹೊಸಂಗಡಿ ಪ್ರದೇಶದಲ್ಲಿ ಸ್ಥಳೀಯ ನಿವಾಸಿಗಳು ಮಹಿಳೆಯರು, ಮಕ್ಕಳು ನಿದ್ದೆ ಬಿಟ್ಟು ರಸ್ತೆಗೆ ಬಂದು ನಿಂತುಕೊಂಡಿರುವ ವಿಡಿಯೋ ವೈರಲ್ ಆಗಿದೆ. ಇದೇ ಏರಿಯಾದಲ್ಲಿ ರಸ್ತೆಗೆ ನೀರು ನುಗ್ಗಿದ್ದರಿಂದ ಬಸ್ ತೆರಳಲು ಸಾಧ್ಯವಾಗದೆ, ಸ್ಥಳೀಯರು ಅದರಲ್ಲಿದ್ದ ಜನರನ್ನು ಇಳಿಸಿ ಇನ್ನೊಂದು ಕಡೆಗೆ ದಾಟಿಸಿದ್ದಾರೆ. ಗುರವಾರ ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಎಂದಿನ ರೀತಿಯಲ್ಲೇ ಪರಿಹಾರದ ಮಾತುಗಳನ್ನಾಡಿ ಬಂದಿದ್ದಾರೆ.
Mangalore heavy rain, palguni river water overflows, houses and tempele flooded with water. The water level of the Gurpur Phalguni river rose to dangerous levels due to the incessant rains lashing the city since Wednesday. Water gushed into the house of Arbee Didpe in Sanjeev early Thursday morning. Fire service personnel from Pandeshwar rushed to the spot.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am