ಬ್ರೇಕಿಂಗ್ ನ್ಯೂಸ್
02-08-24 10:06 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 2: ರಾಜ್ಯ ಸರಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಚಳವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕಾಂಗ್ರೆಸ್ ಸರಕಾರ ವಾಲ್ಮೀಕಿ ನಿಗಮದಲ್ಲಿದ್ದ 187 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದು ಎಲ್ಲರಿಗೂ ತಿಳಿದಿದೆ. ಇದರ ಜೊತೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ರಮವಾಗಿ ಸೈಟ್ ಗಳನ್ನು ಪಡೆದು ಮತ್ತೊಂದು ದೊಡ್ಡ ಹಗರಣ ಮಾಡಿದ್ದಾರೆ. ತನ್ನ ಪತ್ನಿಯ ಹೆಸರಲ್ಲೇ ಹಗರಣ ನಡೆಸಿದ್ದು, ಮುಖ್ಯಮಂತ್ರಿ ರಾಜಿನಾಮೆಗೆ ಆಗ್ರಹಿಸಿ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಪಾದಯಾತ್ರೆ ನಡೆಸಲಿದೆ. ಆಗಸ್ಟ್ 3ರಂದು ಬೆಂಗಳೂರಿನಿಂದ ಪಾದಯಾತ್ರೆ ಹೊರಟು 15ಕ್ಕೆ ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದರು.

ಪಾದಯಾತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷದ ಶಾಸಕರು, ಪ್ರಮುಖ ಪದಾಧಿಕಾರಿಗಳು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ತೆರಳಲಿದ್ದಾರೆ. ಈಗಾಗಲೇ 200 ಮಂದಿಯಷ್ಟು ಕಾರ್ಯಕರ್ತರು ತೆರಳಿದ್ದು, ಅಲ್ಲಿನ ಸಿದ್ಧತೆಗೆ ಕೈಜೋಡಿಸಿದ್ದಾರೆ. ಆಗಸ್ಟ್ 7ರಂದು ದೊಡ್ಡ ಮಟ್ಟದಲ್ಲಿ ನಮ್ಮ ಕಾರ್ಯಕರ್ತರು ತೆರಳಲಿದ್ದು, ಅದಕ್ಕಾಗಿ ಬಸ್ಸಿನ ವ್ಯವಸ್ಥೆ ಮಾಡಿದ್ದೇವೆ. ಅಲ್ಲಿ ಹೋಗಿ ಉಳಿಯುವವರಿಗೆ ಪಕ್ಷದ ವತಿಯಿಂದ ವ್ಯವಸ್ಥೆ ಮಾಡಲಿದ್ದೇವೆ. ಅಂದು 2ರಿಂದ 3 ಸಾವಿರ ಕಾರ್ಯಕರ್ತರು ನಮ್ಮ ಜಿಲ್ಲೆಯಿಂದ ತೆರಳಲಿದ್ದಾರೆ. ಪಾದಯಾತ್ರೆ ಉದ್ದಕ್ಕೂ ಜಿಲ್ಲೆಯ ಕಾರ್ಯಕರ್ತರು ಜೊತೆಗಿರಲಿದ್ದಾರೆ ಎಂದರು.
ಜೆಡಿಎಸ್ ನಾಯಕರು ಅಪಸ್ವರ ತೆಗೆದಿದ್ದಾರಲ್ಲಾ ಎಂಬ ಪ್ರಶ್ನೆಗೆ, ಕುಮಾರಸ್ವಾಮಿ ಅವರ ಜೊತೆಗೆ ನಮ್ಮ ಕೇಂದ್ರ ನಾಯಕರು ಮಾತುಕತೆ ನಡೆಸಿದ್ದಾರೆ. ಪಾದಯಾತ್ರೆಯನ್ನು ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಜಂಟಿಯಾಗಿ ಉದ್ಘಾಟನೆ ನಡೆಸಲಿದ್ದಾರೆ. ರಾಜ್ಯ ಸರಕಾರದ ಭ್ರಷ್ಟಾಚಾರದ ಬಗ್ಗೆ ಜನಜಾಗೃತಿ ಮೂಡಿಸುವುದು ಪಾದಯಾತ್ರೆ ಉದ್ದೇಶ. ಇದಕ್ಕಾಗಿ ನಾವೆಲ್ಲ ಜೊತೆಯಾಗಿದ್ದೇವೆ ಎಂದರು. ಸುದ್ದಿಗೋಷ್ಟಿಯಲ್ಲಿ ಯತೀಶ್ ಆರ್ವಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಸಂಜಯ ಪ್ರಭು ಇದ್ದರು.
5 thousand bjp members to join Mysuru chalo from Dakshina Kannada says Satish Kumpala in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am