ಬ್ರೇಕಿಂಗ್ ನ್ಯೂಸ್
02-08-24 11:16 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 2: ಮಳೆಗಾಲದಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಭೂಮಿ ಅಗೆಯುವುದರಿಂದ ಭೂಕುಸಿತ ಸಾಧ್ಯತೆಗಳಿರುವುದರಿಂದ ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅವರು ಶುಕ್ರವಾರ ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಈ ರೀತಿಯ ಕಾಮಗಾರಿಯಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಕಾರ್ಮಿಕರು ಪ್ರಾಣ ಕಳೆದುಕೊಂಡಿರುವ ಘಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಮಳೆಗಾಲದಲ್ಲಿ ನಿರ್ಮಾಣ ಕಾರ್ಯಗಳಿಗೆ ಭೂಮಿ ಅಗೆತಕ್ಕೆ ಅವಕಾಶ ನೀಡಬಾರದು. ಇದನ್ನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಮಾತನಾಡಿ, ಈಗಾಗಲೇ ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗತೆವನ್ನು ನಿಲ್ಲಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಜಿ.ಪಂ. ಸಿಇಓ ಡಾ. ಆನಂದ್ ಮತ್ತಿತರರು ಇದ್ದರು.
ಇದಕ್ಕೂ ಮುನ್ನ ಸಂಜೆ ವೇಳೆಗೆ ಮಳೆ ಪೀಡಿತ ಪ್ರದೇಶಗಳ ಭೇಟಿ ಬಳಿಕ ಸುದ್ದಿ ಮಾಧ್ಯಮಕ್ಕೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಅದ್ಯಪಾಡಿಯಲ್ಲಿ ನೀರು ನಿಲ್ಲುತ್ತಿರುವುದಕ್ಕೆ ಚೆಕ್ ಡ್ಯಾಮ್ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ. ನಮಗೆ ಪರಿಹಾರ ಬೇಡ, ಶಾಶ್ವತ ಪರಿಹಾರ ಬೇಕು ಎಂದು ಹೇಳಿದ್ದಾರೆ. ಅವರಿಗೆ ಕೃಷಿ ನಷ್ಟ ಆಗಿರುವ ಬಗ್ಗೆ ಪರಿಹಾರ ಪಡೆಯುವಂತೆ ಮನವೊಲಿಸಿದ್ದೇನೆ. ಚೆಕ್ ಡ್ಯಾಮ್ ಸಮಸ್ಯೆ ಆಗಿರುವ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅಧ್ಯಯನ ಸಮಿತಿ ನಡೆಸಲು ಸೂಚಿಸಿದ್ದೇನೆ. ಸಮಿತಿ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೆತ್ತಿಕಲ್ ಗುಡ್ಡ ಕುಸಿತದ ಬಗ್ಗೆ ಪರಿಶೀಲನೆ ನಡೆಸಲು ಐಐಟಿ ತಜ್ಞರು ಶಿರೂರಿನಲ್ಲಿ ಅಧ್ಯಯನ ಮುಗಿಸಿ ಇಲ್ಲಿಗೆ ಬರಲಿದ್ದಾರೆ. ಹೆದ್ದಾರಿ ಅಲೈನ್ಮೆಂಟ್ ಬದಲಾವಣೆ ಮಾಡಿರುವುದು ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ. ಆ ರೀತಿ ಗುಡ್ಡ ಕಡಿತ ಮಾಡುವಾಗ ಅಧಿಕಾರಿಗಳಿಗೆ ಗೊತ್ತಾಗಿಲ್ಲ ಎನ್ನುವುದು ವೈಫಲ್ಯ ಎನ್ನಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವಾಗ ಅವರಿಗೂ ಜವಾಬ್ದಾರಿ ಇದೆ. ಗುಡ್ಡವನ್ನು ಅಗೆದು ಅಪಾಯಕಾರಿ ರೀತಿ ಮಾಡಿಟ್ಟಿದ್ದಾರೆ. ಕುಸಿತ ತಡೆಯುವ ದೃಷ್ಟಿಯಿಂದ ಏನು ಕ್ರಮ ಆಗಬೇಕೋ ಅದನ್ನು ಮಾಡುತ್ತೇವೆ. ತಜ್ಞರ ವರದಿ ಆಧರಿಸಿ ಯಾರು ನಿರ್ಲಕ್ಷ್ಯ ವಹಿಸಿದ್ದಾರೆ ಎಲ್ಲವೂ ತಿಳಿಯಲಿದೆ. ಹೆದ್ದಾರಿಗೆ ಪರ್ಯಾಯ ವ್ಯವಸ್ಥೆ ಮಾಡೋಣ ಎಂದು ಹೇಳಿದರು.
Dinesh Gundu Rao orders to stop working of excavating ground due to rains in Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm