ಬ್ರೇಕಿಂಗ್ ನ್ಯೂಸ್
03-08-24 11:11 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳ ಬಗ್ಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಇತರೇ ಆರೋಪಿಗಳಿಗೆ ಕೃತ್ಯ ಎಸಗಲು ತರಬೇತಿ ನೀಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ತಪ್ಪಿಸಿಕೊಳ್ಳಲು ಸಹಕಾರ ನೀಡಿದ್ದ ಮನ್ಸೂರ್ ಪಾಷಾ ಮತ್ತು ರಿಯಾಜ್ ವೈ.ಎಚ್ ಎಂಬವರ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿದೆ.
ಎರಡು ವರ್ಷಗಳಿಂದ ತಪ್ಪಿಸಿಕೊಂಡಿದ್ದ ಮುಸ್ತಫಾ ಪೈಚಾರ್ ನನ್ನು ಸಕಲೇಶಪುರದ ಕಾಫಿ ಎಸ್ಟೇಟ್ ನಿಂದ ಪತ್ತೆ ಮಾಡಲಾಗಿತ್ತು. ಆತ ತನ್ನ ನಿಜ ಹೆಸರು ಮುಚ್ಚಿಟ್ಟು ಅಡಗಿಕೊಳ್ಳಲು ಮನ್ಸೂರ್ ಪಾಷಾ ಸಹಕಾರ ನೀಡಿದ್ದ. ಮುಸ್ತಫಾನನ್ನು ಅರೆಸ್ಟ್ ಮಾಡುವ ಸಂದರ್ಭದಲ್ಲಿ ಮನ್ಸೂರ್ ನನ್ನೂ ಬಂಧಿಸಲಾಗಿತ್ತು. ಇದೀಗ ಆತನ ಪಾತ್ರ ಮತ್ತು ಕೊಲೆ ಪ್ರಕರಣದಲ್ಲಿ ಸಹಕಾರ ನೀಡಿದ ವಿಚಾರವನ್ನು ಅಧಿಕಾರಿಗಳು ಪಟ್ಟಿ ಮಾಡಿದ್ದು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಇನ್ನೊಬ್ಬ ಆರೋಪಿ ರಿಯಾಜ್ ಕೂಡ ಮುಸ್ತಫಾ ತಪ್ಪಿಸಿಕೊಳ್ಳಲು ನೆರವು ನೀಡಿದ್ದ ಎನ್ನಲಾಗಿದ್ದು, ಜೂನ್ 6ರಂದು ಮುಂಬೈ ಏರ್ಪೋರ್ಟ್ ಮೂಲಕ ವಿದೇಶಕ್ಕೆ ಹಾಲು ಯತ್ನಿಸುತ್ತಿದ್ದಾಗಲೇ ಬಂಧಿತನಾಗಿದ್ದ, ಇದೀಗ ರಿಯಾಜ್ ವಿರುದ್ಧವೂ ಎನ್ಐಎ ಅಧಿಕಾರಿಗಳು ಚಾರ್ಜ್ ಶೀಟ್ ಹಾಕಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಈವರೆಗೆ 19 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ಏಳು ಮಂದಿ ತಲೆತಪ್ಪಿಸಿಕೊಂಡಿದ್ದು, ಅವರ ಸುಳಿವು ಕೊಟ್ಟವರಿಗೆ ತಲಾ 5 ಮತ್ತು 2 ಲಕ್ಷದ ಬಹುಮಾನ ಘೋಷಣೆ ಮಾಡಲಾಗಿದೆ. 2022ರ ಜುಲೈ 27ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಕಡಿದು ಕೊಲೆ ಮಾಡಲಾಗಿತ್ತು. ಹಿಂದುಗಳನ್ನು ಭಯ ಪಡಿಸುವ ಉದ್ದೇಶದಿಂದ ಪಿಎಫ್ಐ ಸಂಘಟನೆ ಪೂರ್ವ ನಿಯೋಜಿತವಾಗಿ ಈ ಕೃತ್ಯವನ್ನು ಎಸಗಿತ್ತು ಎನ್ನೋದು ತನಿಖೆಯಲ್ಲಿ ಕಂಡುಬಂದಿತ್ತು.
The National Investigation Agency (NIA) has filed a supplementary chargesheet against two accused for harbouring Mustafa Paichar, the key conspirator in the murder of Praveen Nettaru, a BJP Yuva Morcha leader.
31-03-25 07:41 pm
Bangalore Correspondent
Yatnal, Lakshmi Hebbalkar, Controversy: ಯತ್ನಾ...
31-03-25 12:24 pm
Areca Nut, Machine Accident, Sirsi: ಅಡಿಕೆ ಸುಲ...
29-03-25 09:19 pm
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
31-03-25 12:26 pm
Mangalore Correspondent
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
31-03-25 09:29 pm
Mangalore Correspondent
Mangalore Derlakatte Robbery attempt; ದೇರಳಕಟ್...
30-03-25 08:59 am
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm