ಬ್ರೇಕಿಂಗ್ ನ್ಯೂಸ್
03-08-24 01:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.3: ಬಿಜೆಪಿ ಆತ್ಮವಂಚನೆ ಮಾಡಿಕೊಳ್ತಾ ಇದೆ. ವಾಲ್ಮೀಕಿ ನಿಗಮದ ಇಲಾಖೆಯಲ್ಲಿ ಹಗರಣ ಆಗಿದೆ, ಕ್ರಮ ಕೈಗೊಂಡಿದ್ದೇವೆ. ಅದನ್ನೇ ರಾಜಕೀಯಕ್ಕೆ ಬಳಸಿಕೊಂಡು ಪಾದಯಾತ್ರೆ ಮಾಡುವುದಾದರೆ ನಿಮ್ಮ ಸರಕಾರ ಇದ್ದಾಗ ಇಲಾಖೆಯ ಹಣ ನುಂಗಿ ನೀರು ಕುಡಿದಿರುವ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಧಾಕರ್ ಮನೆಗೂ ಪಾದಯಾತ್ರೆ ಮಾಡಬೇಕು ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತಾಡಿದ ಅವರು, ಸುಧಾಕರ್ ಕೊರೋನಾ ಹೆಸರಲ್ಲಿ ನೂರಾರು ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ, ಬೊಮ್ಮಾಯಿ ಖುದ್ದು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಅವರ ಮನೆಗೆ ಯಾಕೆ ಬಿಜೆಪಿಗರು ಪಾದಯಾತ್ರೆ ಮಾಡುವುದಿಲ್ಲ? ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರಕಾರ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಅದರ ಮುಂದುವರಿದ ಭಾಗವೇ ಈ ಪಾದಯಾತ್ರೆ ಎಂದರು.
ವಾಲ್ಮೀಕಿ ಹಗರಣದಲ್ಲಿ ಬಂಧಿತರಾದವರಿಗೆ ಉದ್ದೇಶಪೂರ್ವಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹೇಳುವಂತೆ ಬೆದರಿಕೆ ಹಾಕಲಾಗುತ್ತಿದೆ. ರಾಜ್ಯದ ಜನರಲ್ಲಿ ಸರಕಾರ ಬೀಳುತ್ತದೆ ಎಂದು ಗುಲ್ಲೆಬ್ಬಿಸಿ ದಾರಿ ತಪ್ಪಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನೂ ಭ್ರಷ್ಟಾಚಾರಿ ಎಂದು ಬಿಂಬಿಸಲು ಹೊರಟಿದ್ದಾರೆ. ಇದಕ್ಕಾಗಿ ಪಾದಯಾತ್ರೆ ನಾಟಕ ಮಾಡುತ್ತಿದ್ದಾರೆ. ಬಿಜೆಪಿ ಕಾಲದ ಹಗರಣ ಬಗ್ಗೆ ತನಿಖೆ ನಡೆಸುತ್ತಿದ್ದು ಕೋಟ ಶ್ರೀನಿವಾಸ ಪೂಜಾರಿ ಸಹಿತ ಎಲ್ಲರನ್ನು ಜೈಲಿಗೆ ಕಳುಹಿಸುತ್ತೇವೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಶಶಿಧರ್ ಹೆಗ್ಡೆ, ಅಶ್ರಫ್ ಕೆ, ಪ್ರಕಾಶ್ ಸಾಲಿಯಾನ್, ವಿಕಾಸ್ ಶೆಟ್ಟಿ, ಅಪ್ಪಿ, ಸತೀಶ್ ಪೆಂಗಲ್, ಭಾಸ್ಕರ್ ರಾವ್, ಎಂ ಪಿ ಮನುರಾಜ್, ಇಮ್ರಾನ್ ಎ.ಆರ್, ಪ್ರೇಮ್ ಬಲ್ಲಾಳ್ ಬಾಗ್, ಕಿರಣ್ ಬುಡ್ಲೆಗುತ್ತು, ಮೀನಾ ಟೆಲಿಸ್, ಅಬ್ದುಲ್ ಸಲೀಂ ಮತ್ತಿತರರು ಉಪಸ್ಥಿತರಿದ್ದರು.
BJP should do padayatra to sudhakar, bommais house, Slams Ivan Dsouza in Mangalore. BJP state President BY Vijayendra and his family visited the Chamundeshwari temple in Mysore before embarking on the padayatra. Vijayendra emphasized that the opposition's struggle is focused on representing the people's voice and protecting their rights.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am