ಬ್ರೇಕಿಂಗ್ ನ್ಯೂಸ್
03-08-24 10:51 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಒತ್ತಾಯಿಸಿದರು.
ಸುದ್ದಿಗೋಷ್ಟಿ ನಡೆಸಿದ ಶಾಸಕ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ಮನೆಗಳು ಕುಸಿದು ಬಿದ್ದಿವೆ. ಜಿಲ್ಲೆಯಲ್ಲಿ ಮನೆಹಾನಿ, ಕೃಷಿ ಹಾನಿ ವ್ಯಾಪಕವಾಗಿದ್ದು ರಾಜ್ಯ ಸರ್ಕಾರ ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಂಡು ಪರಿಹಾರ ಒದಗಿಸಬೇಕು ಎಂದು ಹೇಳಿದರು.
ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ, ಭಾಗಶಃ ಹಾನಿಯಾಗಿದ್ದರೆ 2.50 ಲಕ್ಷ, ನೀರು ನುಗ್ಗಿದ್ದರೆ 10000 ಪರಿಹಾರ ನೀಡಿದ್ದರು. ಈಗಿನ ಸರಕಾರ ದಿವಾಳಿಯಾಗಿದ್ದು ಪರಿಹಾರ ಕೊಡಲು ಹಣ ಇಲ್ಲದ ಸ್ಥಿತಿಯಾಗಿದೆ. ಕೊನೆಪಕ್ಷ ಎನ್ ಡಿಆರ್ ಎಫ್ ವತಿಯಿಂದ ನೀಡಲಾಗುವ ಪರಿಹಾರ ಆದ್ರೂ ಕೊಡಿ ಎಂದು ಒತ್ತಾಯಿಸಿದರು.
ನಾವು ಶಾಸಕರಾಗಿ 15 ತಿಂಗಳಾಗುತ್ತ ಬಂದಿದ್ದು ಒಂದು ರುಪಾಯಿನೂ ಅನುದಾನ ಸಿಕ್ಕಿಲ್ಲ. ಯಾವುದೇ ಶಾಸಕನಿಗೂ ನಯಾಪೈಸೆ ಅನುದಾನ ಬಿಡುಗಡೆ ಆಗಿಲ್ಲ. ಆಡಳಿತ ಪಕ್ಷದ ಶಾಸಕನಿಗೂ ಭರವಸೆ ಸಿಕ್ಕಿದ್ದು ಬಿಟ್ಟರೆ ಅನುದಾನ ಲಭಿಸಿಲ್ಲ. ಕ್ಷೇತ್ರದ ಅನುದಾನವೆಂದು ವರ್ಷಕ್ಕೆ ಎರಡು ಕೋಟಿ ಕೊಡಬೇಕು. ಆದರೆ ಅದನ್ನೂ ಕೊಡುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ. ನಾವು ಅನುದಾನಕ್ಕಾಗಿ ಎಲ್ಲ ಶಾಸಕರು ಸೇರಿ ಧರಣಿ ನಡೆಸಲಿದ್ದೇವೆ. ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಮಾಡುವುದಾಗಿ ವೇದವ್ಯಾಸ ಕಾಮತ್ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಬಿಜೆಪಿ ಮುಖಂಡರಾದ ರಮೇಶ್ ಕಂಡೆಟ್ಟು, ನಿತಿನ್ ಕುಮಾರ್, ರವಿಶಂಕರ್ ಮಿಜಾರ್, ಸಂಜಯ್ ಪ್ರಭು, ಪೂರ್ಣಿಮಾ, ರಮೇಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
MLA Vedavyas Kamath demanded that the state government release a Rs 300 crore special package to Dakshina Kannada (DK), as heavy rains have caused severe damage in the district.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm